ಕುಂದಾಪುರ:ಕೇಂದ್ರೀಯ ಸಮುದ್ರ ಮೀನುಗಾರಿಕಾ ಸಂಶೋಧನಾ ಸಂಸ್ಥೆ(ಐಸಿಎಆರ್- ಸಿಎಂಎಫ್ಆರ್ಐ) ಮಂಗಳೂರು ಪ್ರಾದೇಶಿಕ ಕೇಂದ್ರ ಕರ್ನಾಟಕ ದಿಂದ ತರಬೇತಿ ಪಡೆದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರು ಗ್ರಾಮದ ಪ್ರಗತಿಪರ ಮೀನು ಕೃಷಿಕ ರವಿ ಖಾರ್ವಿ,ಭಾರತ ಸರಕಾರದ ಮೀನುಗಾರಿಕೆ,ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ನೀಡುವ ಅತ್ಯುತ್ತಮ ಸಮುದ್ರ ಮೀನು ಕೃಷಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ನವದೆಹಲಿಯಲ್ಲಿ ಗುರುವಾರ ನಡೆದ ವಿಶ್ವ ಮೀನುಗಾರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೇಂದ್ರ ಮೀನುಗಾರಿಕಾ ಸಚಿವ ರಾಜೀವ್ ರಂಜನ್ ಸಿಂಗ್ ಅವರಿಂದ ರವಿ ಖಾರ್ವಿ ಅವರು ಪ್ರಶಸ್ತಿ ಪತ್ರ ಸಹಿತ 1 ಲಕ್ಷ ರೂ. ನಗದು ಪ್ರೆÇೀತ್ಸಾಹ ಧನವನ್ನು ಸ್ವೀಕರಿಸಿದರು.ಐಸಿಎಆರ್-ಸಿಎಂಎಫ್ಆರ್ಐನ ಮಂಗಳೂರು ಪ್ರಾದೇಶಿಕ ಕೇಂದ್ರದ ಮಾರ್ಗದರ್ಶನದಲ್ಲಿ ಸಮಗ್ರ ಮಲ್ಟಿ-ಟ್ರೋಫಿಕ್ ಅಕ್ವಾಕಲ್ಚರ್(ಐಎಂಟಿಎ) ಪದ್ಧತಿಯ ಯಶಸ್ವಿ ಅನುμÁ್ಠನಕ್ಕೆ ಅತ್ಯುತ್ತಮ ಕೊಡುಗೆ ನೀಡಿದ ರವಿ ಖಾರ್ವಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಪಂಜರ ಮೀನು ಕೃಷಿಯಲ್ಲಿ ಸಾಧನೆಯನ್ನು ಮಾಡಿರುವ ರವಿ ಖಾರ್ವಿ ಅವರಿಗೆ ಈ ಹಿಂದೆ ವಿಜಯ ಕರ್ನಾಟಕ ಪತ್ರಿಕೆ ಸೂಪರ್ಸ್ಟಾರ್ ರೈತ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…