ಕಾಡಾನೆಗಳ ದಾಳಿಗೆ-ಅಡಿಕೆ ಗಿಡ ನಾಶ,ಸಾವಿರಾರು ರೂಪಾಯಿ ನಷ್ಟ

Share

Advertisement
Advertisement
Advertisement

ಮಂಗಳೂರು:ತೋಟಕ್ಕೆ ನುಗ್ಗಿದ ಕಾಡಾನೆಗಳು ಅಡಿಕೆ ಗಿಡಗಳನ್ನು ನಾಶಪಡಿಸಿರುವ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದಲ್ಲಿ ನಡೆದಿದೆ.
ಶಿರಾಡಿ ಗ್ರಾಮದ ತೆಕ್ಕನಾಟ್ ನಿವಾಸಿ ಟಿ.ಎ.ತೋಮಸ್ ಎಂಬವರಿಗೆ ಸೇರಿದ ಅಡಿಕೆ ತೋಟಕ್ಕೆ ನ.24 ರ ಮಧ್ಯರಾತ್ರಿ ಕಾಡಾನೆಗಳ ಗುಂಪು ದಾಳಿ ನಡೆಸಿದ್ದು ೧೦೦ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ನಾಶಗೊಳಿಸಿವೆ.ಶಿರಾಡಿ ಗ್ರಾಮದ ಇತರೇ ಕಡೆಯೂ ಕೃಷಿ ತೋಟಕ್ಕೆ ಕಾಡಾನೆಗಳು ದಾಳಿ ಮಾಡಿದ್ದು ಅಡಿಕೆ, ಬಾಳೆ ಕೃಷಿ ನಾಶಗೊಳಿಸಿವೆ. ಕಾಡಾನೆಗಳನ್ನು ಸ್ಥಳಾಂತರಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Advertisement
Advertisement
Advertisement


Share

Leave a comment

Your email address will not be published. Required fields are marked *

You cannot copy content of this page