ಕುಂದಾಪುರ

ಕಾಂಗ್ರೆಸ್ ಪಕ್ಷದ ಮುಖಂಡ ಸೀತಾರಾಮ ಶೆಟ್ಟಿ ಕೇರಿಕೊಡ್ಲು ನಿಧನ

Share

Advertisement
Advertisement
Advertisement

ಕುಂದಾಪುರ-ಕಾಂಗ್ರೆಸ್ ಪಕ್ಷದ ಮುಖಂಡರಾದ ಹೊಸಾಡು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಕೇರಿಕೊಡ್ಲು ನಿವಾಸಿ ಸೀತಾರಾಮ ಶೆಟ್ಟಿ (65) ಅವರು ಅಲ್ಪಕಾಲಿಕ ಅನಾರೋಗ್ಯದಿಂದ ಮಂಗಳವಾರ ನಿಧನರಾದರು.
ಅವರು ಪತ್ನಿ,ಪುತ್ರ,ಪುತ್ರಿ ಮತ್ತು ಸಹೋದರ,
ಸಹೋದರಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
ಸುದೀರ್ಘ ನಲವತ್ತಕ್ಕೂ ಹೆಚ್ಚಿನ ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ಮುಖಂಡರಾಗಿ ಸೇವೆ ಸಲ್ಲಿಸಿದ್ದ ಅವರು ಮೂರು ಬಾರಿ ಗ್ರಾಮ ಪಂಚಾಯಿತಿ ಸದಸ್ಯರಾಗಿ, ಸಾಮಾಜಿಕ ಹಾಗೂ ಧಾರ್ಮಿಕ ಕೆಲಸದಲ್ಲಿ ತೊಡಗಿ ಕೊಂಡಿದ್ದು ಜನಪ್ರಿಯತೆ ಪಡೆದಿದ್ದರು.
ಅಂಬಾ ಕ್ರಿಕೆಟ್ ಕ್ಲಬ್ ತಂಡದ ಸ್ಥಾಪಕ ಅಧ್ಯಕ್ಷರಾಗಿದ್ದು ಹಲವು ವರ್ಷಗಳಿಂದ ಕ್ರಿಕೆಟ್ ಪಂದ್ಯಾಟವನ್ನು ಆಯೋಜನೆ ಮಾಡುವ ಮುಖೇನ ಹಲವಾರು ಉತ್ಸಾಹಿ ಯುವಕರಿಗೆ ಪ್ರೇರಣೆ ನೀಡಿದ್ದರು.
ಸಾಮಾಜಿಕ ಕಾರ್ಯಗಳಲ್ಲಿ ತೊಡಗಿ ಕೊಂಡಿದ್ದ ಅವರು ನೂರಾರು ಶವಗಳನ್ನು ದಫನ ಮಾಡುವಲ್ಲಿ ತಮ್ಮ ತಾವು ತೊಡಗಿಸಿಕೊಂಡಿದ್ದಾರೆ.
ಮೃತರ ಗೌರವಾರ್ಥವಾಗಿ ಮುಳ್ಳಿಕಟ್ಟೆ ಪೇಟೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವುದರ ಮುಖೇನ ವ್ಯಾಪಾರಸ್ಥರು ವಿಶೇಷವಾದ ರೀತಿಯಲ್ಲಿ ಗೌರವವನ್ನು ಸಲ್ಲಿಸಿದರು.
ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಸಂತಾಪವನ್ನು ಸೂಚಿಸಿದ್ದಾರೆ.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 week ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 week ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

2 weeks ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

2 weeks ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

2 weeks ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

3 weeks ago