ಸ್ನಾನಕ್ಕೆ ತೆರಳಿದ ಮೂವರು ಯುವಕರು ನೀರುಪಾಲು

Share

ಮಂಗಳೂರು:ಸ್ನಾನಕ್ಕೆಂದು ತೆರಳಿದ ಮೂವರು ಯುವಕರು ಆಯತಪ್ಪಿ ಡ್ಯಾಂ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆ ಕಾರ್ಯಕ್ರಮಕ್ಕೆ ಬಂದಿದ್ದ ಮೂಡಬಿದ್ರೆ ತಾಲೂಕಿನ ಎಡಪದವು ನಿವಾಸಿ ಲಾರೆನ್ಸ್(20) ,ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್(19) ,ಬಂಟ್ವಾಳ ಗ್ರಾಮದ ವಗ್ಗದ ಜೈಸನ್(19) ಎಂಬವರು ಊಟ ಮೂಗಿಸಿ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂ ಬಳಿ ಸ್ನಾನ ಮಾಡಲು ಹೋಗಿದ್ದು ಈ ವೇಳೆ ನೀರಿನ ಸೆಳೆತಕ್ಕೆ ಸಿಳುಕಿ ಮೂವರು ಯುವಕರು ನೀರುಪಾಲಾಗಿದ್ದಾರೆ. ಮೂವರು ಮೃತದೇಹ ನೀರಿನಿಂದ ಹೊರತೆಗೆಯಲಾಗಿದೆ.ಈ ಬಗ್ಗೆ ವೇಣೂರು ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Share

Leave a comment

Your email address will not be published. Required fields are marked *

You cannot copy content of this page