ಕುಂದಾಪುರ

ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್‍ನಲ್ಲಿ ಸ್ಕೈ ಡೈನಿಂಗ್ ಉದ್ಘಾಟನೆ

Share

ಕುಂದಾಪುರ:ವಿಶ್ವ ಪ್ರಸಿದ್ಧ ತ್ರಾಸಿ ಮರವಂತೆ ಬೀಚ್‍ನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸ್ಕೈ ಡೈನಿಂಗ್ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ನಡೆಯಿತು.ಧಾರ್ಮಿಕ ಪೂಜಾ ಕಾರ್ಯಗಳನ್ನು ಮಾಡಲಾಯಿತು.
ಸಮುದ್ರ ಮಟ್ಟದಿಂದ ಸುಮಾರು 90 ರಿಂದ 100 ಮೀಟರ್ ಎತ್ತರದಲ್ಲಿ ಕುಳಿತು ಕಡಲ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಾ,ರಾಷ್ಟ್ರೀಯ ಹೆದ್ದಾರಿ ನೋಟ,ಸೌಪರ್ಣಿಕಾ ನದಿಯ ಸೌಂದರ್ಯ ನೋಡುತ್ತಾ ನಿಮಿಷ್ಟದ ಖಾದ್ಯವನ್ನು ಸವಿಯಬಹುದು.ಟೀಮ್ ಮಂತ್ರಾಸ್ ಅವರು ಆಯೋಜನೆ ಮಾಡಿರುವ ಸ್ಕೈ ಡೈನಿಂಗ್ ಕರ್ನಾಟಕದ ಎರಡನೇ ತಾಣವಾಗಿದ್ದು ಒಂದು ಬಾರಿ 12 ಜನ ಸ್ಕೈಡೈನಿಂಗ್‍ನಲ್ಲಿ ಕುಳಿತು ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸ ಬಹುದಾಗಿದೆ .
ಬೇರೆ ಬೇರೆ ರೀತಿಯ ಸ್ಲಾಟ್ ಕೂಡ ಲಭ್ಯವಿದ್ದು ನಿಮ್ಮ ಬಜೆಟ್ ಗೆ ಅನುಗುಣವಾಗಿ ಸ್ಲಾಟ್ ಆಯ್ಕೆ ಮಾಡಿಕೊಂಡು ಸ್ಕೈಡೈನಿಂಗ್‍ನಲ್ಲಿ ನಿಮ್ಮ ಫ್ಯಾಮಿಲಿಯೊಂದಿಗೆ ಏಂಜಾಯ್ ಮಾಡಬುಹುದು.ಗಗನದಲ್ಲಿ ಊಟ ಮಾಡಿದಂತಹ ಅನುಭವವನ್ನು ಹೊಂದಬಹುದು.ಇಂತಹ ಅನುಭವವನ್ನು ಹೊಂದಲು ತ್ರಾಸಿ-ಮರ ಬೀಚ್‍ನಲ್ಲಿ ಬಿಟ್ಟರೆ ಬೇರೆಲ್ಲೂ ಸಾಧ್ಯವಿಲ್ಲ.
ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಸ್ಕೈ ಡೈನಿಂಗ್ ಉದ್ಘಾಟಿಸಿ ಮಾತನಾಡಿ,ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್‍ಗೆ ದೇಶ ವಿದೇಶಗಳಿಂದ ದಿನಂಪ್ರತಿ ಪ್ರವಾಸಿಗರು ಭೇಟಿ ನೀಡುತ್ತಾರೆ.ಸ್ಕೈ ಡೈನಿಂಗ್ ನಿರ್ಮಾಣದಿಂದಾಗಿ ಪ್ರವಾಸಿಗರು ವಿಭಿನ್ನ ರೀತಿಯಲ್ಲಿ ಪ್ರಕೃತಿ ಸೌಂದರ್ಯವನ್ನು ಆಶ್ವಾಧಿಸಲು ಅವಕಾಶ ಮಾಡಿಕೊಟ್ಟಂತಾಗಿದ್ದು.ಪ್ರವಾಸೋದ್ಯಮ ಚಟುವಟಿಕೆಗೂ ಪೂರಕವಾಗಿದೆ ಎಂದು ಹೇಳಿದರು.ಬೀಚ್ ಪ್ರವಾಸೋದ್ಯಮ ಚಟುವಟಿಕೆ ಬೆಳವಣಿಗೆ ಯಿಂದ ಉದ್ಯೋಗ ಸೃಷ್ಟಿ ಜತೆಗೆ ವ್ಯಾಪಾರವಾಹಿವಾಟು ಕೂಟ ವೃದ್ಧಿಯಾಗಲು ಸಹಕಾರಿ ಆಗುತ್ತದೆ ಎಂದರು.
ಟೀಮ್ ಮಂತ್ರಾಸ್ ಸ್ಕೈಡೈನಿಂಗ್ ಮಾಲೀಕರಾದ ಪ್ರವೇಶ್ ಮಂಜೇಶ್ವರ ಮಾತನಾಡಿ,ಮಲ್ಪೆ ಬಿಟ್ಟರೆ ಸ್ಕೈಡೈನಿಂಗ್ ನಿರ್ಮಾಣವಾಗಿರುವುದು ತ್ರಾಸಿ ಮರವಂತೆ ಬೀಚ್‍ನಲ್ಲಿ ಮಾತ್ರ.ಸಮುದ್ರ ಮಟ್ಟದಿಂದ 90 ರಿಂದ 100 ಮೀಟರ್ ಎತ್ತರದಲ್ಲಿ ಕುಳಿತುಕೊಂಡು ಸಮುದ್ರ ಸೌಂದರ್ಯ ನೊಡುವುದರ ಜತೆಗೆ ರಾಷ್ಟ್ರೀಯ ಹೆದ್ದಾರಿ 66ರ ವಿಹಂಗಮ ನೋಟವನ್ನು ಕಣ್ತುಂಬಿಕೊಳ್ಳಬಹುದು.ಅತ್ಯಂತ ಪಾರದರ್ಶಕ ವ್ಯವಸ್ಥೆಯಡಿ ನಿರ್ಮಾಣಗೊಂಡಿರುವ ಸ್ಕೈ ಡೈನಿಂಗ್‍ನಲ್ಲಿ ಫ್ಯಾಮಿಲಿ ಮತ್ತು ಸ್ನೇಹಿತರ ಜತೆಗೂಡಿ ಸಮಯವನ್ನು ಕಳೆಯ ಬಹುದು ಎಂದು ಹೇಳಿದರು.
ತ್ರಾಸಿ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ ಮಾತನಾಡಿ,ನಮ್ಮ ಪಂಚಾಯಿತಿ ವ್ಯಾಪ್ತಿ ಪ್ರದೇಶದಲ್ಲಿ ಇಂತಹದೊಂದು ಯೋಜನೆ ನಿರ್ಮಾಣವಾಗಿರುವುದು ಬಹಳಷ್ಟು ಖುಷಿಕೊಟ್ಟಿದೆ.ವಿಭಿನ್ನತೆ ಯಿಂದ ಕೂಡಿದ ಇನ್ನಷ್ಟು ಯೋಜನೆಗಳು ಕಾರ್ಯರೂಪಕ್ಕೆ ಬರಲಿ ಎಂದರು.
ಪ್ರವಾಸೋದ್ಯಮ ಇಲಾಖಾ ಅಧಿಕಾರಿ ಕುಮಾರ್.ಪಿ ಮಾತನಾಡಿ,ಹೆಲಿಕಾಪ್ಟರ್ ಜೆಟ್ ವಿಮಾನದಲ್ಲಿ ಕುಳಿತು ನೋಡ ಬಹುದಾದ ಪ್ರಕೃತಿ ಸೌಂದರ್ಯವನ್ನು ಸ್ಕೈ ಡೈನಿಂಗ್ ಕುಳಿತು ನೋಡಬಹುದಾಗಿದೆ.ಇದೊಂದು ಪ್ರವಾಸೋದ್ಯಮ ಇಲಾಖೆ ಕನಸಾಗಿದ್ದು.ಕಾರ್ಯರೂಪಕ್ಕೆ ಬರುವುದರ ಮೂಲಕ ಉದ್ಘಾಟನೆಗೊಂಡಿದೆ ಎಂದು ಹೇಳಿದರು.
ಟೀಮ್ ಮಂತ್ರಾಸ್‍ನ ರಾಕೇಶ್ ಅಥಾವರ್,ನಾರಾಯಣ ಕುಲಾಲ್,ರವಿರಾಜ್ ಮತ್ತು ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ ಪಠಕಾರ್,ಸದಾಶಿವ ಗಂಗೊಳ್ಳಿ,ದಿವಾಕರ ಶೆಟ್ಟಿ,ಕೆ.ಪಿ ಶೆಟ್ಟಿ,ಕೃಷ್ಣ ಪ್ರಸಾದ್ ಶೆಟ್ಟಿ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago