ಕುಂದಾಪುರ

ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್‍ನಲ್ಲಿ ಸ್ಕೈ ಡೈನಿಂಗ್ ಉದ್ಘಾಟನೆ

Share

ಕುಂದಾಪುರ:ವಿಶ್ವ ಪ್ರಸಿದ್ಧ ತ್ರಾಸಿ ಮರವಂತೆ ಬೀಚ್‍ನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸ್ಕೈ ಡೈನಿಂಗ್ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ನಡೆಯಿತು.ಧಾರ್ಮಿಕ ಪೂಜಾ ಕಾರ್ಯಗಳನ್ನು ಮಾಡಲಾಯಿತು.
ಸಮುದ್ರ ಮಟ್ಟದಿಂದ ಸುಮಾರು 90 ರಿಂದ 100 ಮೀಟರ್ ಎತ್ತರದಲ್ಲಿ ಕುಳಿತು ಕಡಲ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಾ,ರಾಷ್ಟ್ರೀಯ ಹೆದ್ದಾರಿ ನೋಟ,ಸೌಪರ್ಣಿಕಾ ನದಿಯ ಸೌಂದರ್ಯ ನೋಡುತ್ತಾ ನಿಮಿಷ್ಟದ ಖಾದ್ಯವನ್ನು ಸವಿಯಬಹುದು.ಟೀಮ್ ಮಂತ್ರಾಸ್ ಅವರು ಆಯೋಜನೆ ಮಾಡಿರುವ ಸ್ಕೈ ಡೈನಿಂಗ್ ಕರ್ನಾಟಕದ ಎರಡನೇ ತಾಣವಾಗಿದ್ದು ಒಂದು ಬಾರಿ 12 ಜನ ಸ್ಕೈಡೈನಿಂಗ್‍ನಲ್ಲಿ ಕುಳಿತು ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸ ಬಹುದಾಗಿದೆ .
ಬೇರೆ ಬೇರೆ ರೀತಿಯ ಸ್ಲಾಟ್ ಕೂಡ ಲಭ್ಯವಿದ್ದು ನಿಮ್ಮ ಬಜೆಟ್ ಗೆ ಅನುಗುಣವಾಗಿ ಸ್ಲಾಟ್ ಆಯ್ಕೆ ಮಾಡಿಕೊಂಡು ಸ್ಕೈಡೈನಿಂಗ್‍ನಲ್ಲಿ ನಿಮ್ಮ ಫ್ಯಾಮಿಲಿಯೊಂದಿಗೆ ಏಂಜಾಯ್ ಮಾಡಬುಹುದು.ಗಗನದಲ್ಲಿ ಊಟ ಮಾಡಿದಂತಹ ಅನುಭವವನ್ನು ಹೊಂದಬಹುದು.ಇಂತಹ ಅನುಭವವನ್ನು ಹೊಂದಲು ತ್ರಾಸಿ-ಮರ ಬೀಚ್‍ನಲ್ಲಿ ಬಿಟ್ಟರೆ ಬೇರೆಲ್ಲೂ ಸಾಧ್ಯವಿಲ್ಲ.
ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಸ್ಕೈ ಡೈನಿಂಗ್ ಉದ್ಘಾಟಿಸಿ ಮಾತನಾಡಿ,ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್‍ಗೆ ದೇಶ ವಿದೇಶಗಳಿಂದ ದಿನಂಪ್ರತಿ ಪ್ರವಾಸಿಗರು ಭೇಟಿ ನೀಡುತ್ತಾರೆ.ಸ್ಕೈ ಡೈನಿಂಗ್ ನಿರ್ಮಾಣದಿಂದಾಗಿ ಪ್ರವಾಸಿಗರು ವಿಭಿನ್ನ ರೀತಿಯಲ್ಲಿ ಪ್ರಕೃತಿ ಸೌಂದರ್ಯವನ್ನು ಆಶ್ವಾಧಿಸಲು ಅವಕಾಶ ಮಾಡಿಕೊಟ್ಟಂತಾಗಿದ್ದು.ಪ್ರವಾಸೋದ್ಯಮ ಚಟುವಟಿಕೆಗೂ ಪೂರಕವಾಗಿದೆ ಎಂದು ಹೇಳಿದರು.ಬೀಚ್ ಪ್ರವಾಸೋದ್ಯಮ ಚಟುವಟಿಕೆ ಬೆಳವಣಿಗೆ ಯಿಂದ ಉದ್ಯೋಗ ಸೃಷ್ಟಿ ಜತೆಗೆ ವ್ಯಾಪಾರವಾಹಿವಾಟು ಕೂಟ ವೃದ್ಧಿಯಾಗಲು ಸಹಕಾರಿ ಆಗುತ್ತದೆ ಎಂದರು.
ಟೀಮ್ ಮಂತ್ರಾಸ್ ಸ್ಕೈಡೈನಿಂಗ್ ಮಾಲೀಕರಾದ ಪ್ರವೇಶ್ ಮಂಜೇಶ್ವರ ಮಾತನಾಡಿ,ಮಲ್ಪೆ ಬಿಟ್ಟರೆ ಸ್ಕೈಡೈನಿಂಗ್ ನಿರ್ಮಾಣವಾಗಿರುವುದು ತ್ರಾಸಿ ಮರವಂತೆ ಬೀಚ್‍ನಲ್ಲಿ ಮಾತ್ರ.ಸಮುದ್ರ ಮಟ್ಟದಿಂದ 90 ರಿಂದ 100 ಮೀಟರ್ ಎತ್ತರದಲ್ಲಿ ಕುಳಿತುಕೊಂಡು ಸಮುದ್ರ ಸೌಂದರ್ಯ ನೊಡುವುದರ ಜತೆಗೆ ರಾಷ್ಟ್ರೀಯ ಹೆದ್ದಾರಿ 66ರ ವಿಹಂಗಮ ನೋಟವನ್ನು ಕಣ್ತುಂಬಿಕೊಳ್ಳಬಹುದು.ಅತ್ಯಂತ ಪಾರದರ್ಶಕ ವ್ಯವಸ್ಥೆಯಡಿ ನಿರ್ಮಾಣಗೊಂಡಿರುವ ಸ್ಕೈ ಡೈನಿಂಗ್‍ನಲ್ಲಿ ಫ್ಯಾಮಿಲಿ ಮತ್ತು ಸ್ನೇಹಿತರ ಜತೆಗೂಡಿ ಸಮಯವನ್ನು ಕಳೆಯ ಬಹುದು ಎಂದು ಹೇಳಿದರು.
ತ್ರಾಸಿ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ ಮಾತನಾಡಿ,ನಮ್ಮ ಪಂಚಾಯಿತಿ ವ್ಯಾಪ್ತಿ ಪ್ರದೇಶದಲ್ಲಿ ಇಂತಹದೊಂದು ಯೋಜನೆ ನಿರ್ಮಾಣವಾಗಿರುವುದು ಬಹಳಷ್ಟು ಖುಷಿಕೊಟ್ಟಿದೆ.ವಿಭಿನ್ನತೆ ಯಿಂದ ಕೂಡಿದ ಇನ್ನಷ್ಟು ಯೋಜನೆಗಳು ಕಾರ್ಯರೂಪಕ್ಕೆ ಬರಲಿ ಎಂದರು.
ಪ್ರವಾಸೋದ್ಯಮ ಇಲಾಖಾ ಅಧಿಕಾರಿ ಕುಮಾರ್.ಪಿ ಮಾತನಾಡಿ,ಹೆಲಿಕಾಪ್ಟರ್ ಜೆಟ್ ವಿಮಾನದಲ್ಲಿ ಕುಳಿತು ನೋಡ ಬಹುದಾದ ಪ್ರಕೃತಿ ಸೌಂದರ್ಯವನ್ನು ಸ್ಕೈ ಡೈನಿಂಗ್ ಕುಳಿತು ನೋಡಬಹುದಾಗಿದೆ.ಇದೊಂದು ಪ್ರವಾಸೋದ್ಯಮ ಇಲಾಖೆ ಕನಸಾಗಿದ್ದು.ಕಾರ್ಯರೂಪಕ್ಕೆ ಬರುವುದರ ಮೂಲಕ ಉದ್ಘಾಟನೆಗೊಂಡಿದೆ ಎಂದು ಹೇಳಿದರು.
ಟೀಮ್ ಮಂತ್ರಾಸ್‍ನ ರಾಕೇಶ್ ಅಥಾವರ್,ನಾರಾಯಣ ಕುಲಾಲ್,ರವಿರಾಜ್ ಮತ್ತು ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ ಪಠಕಾರ್,ಸದಾಶಿವ ಗಂಗೊಳ್ಳಿ,ದಿವಾಕರ ಶೆಟ್ಟಿ,ಕೆ.ಪಿ ಶೆಟ್ಟಿ,ಕೃಷ್ಣ ಪ್ರಸಾದ್ ಶೆಟ್ಟಿ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

6 days ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

3 months ago