ಕುಂದಾಪುರ

ಡಾನ್ ಬಾಸ್ಕೊ ರಜತ ಮಹೋತ್ಸವ ಸಂಭ್ರಮಕ್ಕೆ ಚಾಲನೆ,ರಜತ ಲೋಗೋ ಬಿಡುಗಡೆ

Share

ಕುಂದಾಪುರ:2000 ಇಸವಿಯಲ್ಲಿ ಆರಂಭಗೊಂಡಿರುವ ಡಾನ್ ಬಾಸ್ಕೊ ತ್ರಾಸಿ-ಹೊಸಾಡು ಸಂಸ್ಥೆಗೆ 25 ವರ್ಷ ತುಂಬಿರುವುದರಿಂದ ಸಂಸ್ಥೆಯ ರಜತ ಮಹೋತ್ಸವ ಕಾರ್ಯಕ್ರಮವನ್ನು ಸ್ಮರಣೀಯವಾಗಿ ಆಚರಿಸುವ ಉದ್ದೇಶದಿಂದ ರಜತ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಗಿದೆ.ಇವೊಂದು ಸುಸಂದರ್ಭದಲ್ಲಿ ರಜತ ಮಹೋತ್ಸವ ವರ್ಷಾಚರಣೆ ಅಂಗವಾಗಿ ಶೈಕ್ಷಣಿಕ,ಸಾಂಸ್ಕೃತಿಕ,ಕ್ರೀಡೆ,ಸಾಮಾಜಿಕ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು.ಒಂದು ವರ್ಷಗಳ ಕಾಲ ನಿರಂತರವಾಗಿ ಕಾರ್ಯಕ್ರಮಗಳು ನಡೆಯುತ್ತವೆ.2025 ರ ಡಿಸೆಂಬರ್ ತಿಂಗಳಿನಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಸಂಪನ್ನವಾಗಲಿರುವ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಆಲೋಚನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಡಾನ್ ಬಾಸ್ಕೊ ಶಾಲೆಯ ಪ್ರಿನ್ಸಿಪಾಲ್ ,ಧರ್ಮಗುರು ಮ್ಯಾಕ್ಸಿಂ ಡಿಸೋಜ ಹೇಳಿದರು.
ಶನಿವಾರ ಸಂಸ್ಥೆಯ ವಠಾರದಲ್ಲಿ ನಡೆದ ಶಾಲೆಯ ವಾರ್ಷಿಕೋತ್ಸವ ಮತ್ತು ರಜತ ಮಹೋತ್ಸವ ಸಂಭ್ರಮ ಚಾಲನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೇಂದ್ರೀಯ ಪಠ್ಯಕ್ರಮದ ವಿದ್ಯಾಲಯದಲ್ಲಿ ನರ್ಸರಿ ಯಿಂದ ಪಿಯುಸಿ ತನಕ ಶಿಕ್ಷಣವನ್ನು ನೀಡಲಾಗುತ್ತಿದೆ.ಒಂದೆ ಸೂರಿನಡಿ ಮಕ್ಕಳಿಗೆ ಉನ್ನತ ಶಿಕ್ಷಣ ಸಿಗಬೇಕು ಎನ್ನುವ ಉದ್ದೇಶದಿಂದ ಮುಂದಿನ ದಿನಗಳಲ್ಲಿ ಪದವಿ ಕಾಲೇಜನ್ನು ಆರಂಭಿಸುವ ಚಿಂತನೆಯನ್ನು ಹೊಂದಲಾಗಿದೆ.ಇಲ್ಲಿ ವ್ಯಾಸಂಗ ಮಾಡಿದ ನೂರಾರು ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಉನ್ನತ ಹುದ್ದೆಗಳನ್ನು ಪಡೆದು ತಮ್ಮ ಕುಟುಂಬದವರೊಂದಿಗೆ ನೆಮ್ಮದಿ ಜೀವನವನ್ನು ಕಂಡುಕೊಳ್ಳುತ್ತಿರುವುದು.ಸಂಸ್ಥೆಯ ಧ್ಯೇಯೋದ್ದೇಶ ಸಾರ್ಥಕತೆ ಕಂಡಿದೆ ಎಂದು ತಮ್ಮ ಖುಷಿಯನ್ನು ಹಂಚಿಕೊಂಡರು.65 ವಿದ್ಯಾರ್ಥಿಗಳಿಂದ ಆರಂಭಗೊಂಡಿದ್ದ ಒಂದು ಚಿಕ್ಕ ಸಂಸ್ಥೆ ಇಂದು ನಾಲ್ಕು ನೂರಕ್ಕೂ ಅಧಿಕ ಮಕ್ಕಳನ್ನು ಹೊಂದಿದ್ದು.ಊರಿನವರ ಮತ್ತು ಮಕ್ಕಳ ಪೋಷಕರ ಬೆಂಬಲದಿಂದ ಸಾಧ್ಯವಾಗಿದೆ ಎಂದು ಹೇಳಿದರು.
ವಿಕಾರ್ ಜನರಲ್ ಉಡುಪಿ ಧರ್ಮಪ್ರಾಂತ್ಯ ವಿ.ರೆ.ಫಾ ಫರ್ಡಿನಾಂಡ್ ಗೊನ್ಸಾಲ್ವಿಸ್ ರಜತ ಮಹೋತ್ಸವ ಸಂಭ್ರಮ ಕಾರ್ಯಕ್ರಮದ ಲೋಗೋ ಅನಾವರಣಗೊಳಿಸಿ ಮಾತನಾಡಿ,ಉತ್ತಮ ಕಲ್ಪನೆಯೊಂದಿಗೆ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆ ಹಲವಾರು ಏಳುಬೀಳುಗಳ ನಡುವೆ ಇಂದು ಹೆಮ್ಮರವಾಗಿ ಬೆಳೆದು ನಿಂತ್ತಿದ್ದು ರಜತ ಸಂಭ್ರಮದ ಹೊಸ್ತಿಲಿನಲ್ಲಿದೆ.ರಜತ ಸಂಭ್ರಮ ವರ್ಷದಲ್ಲಿ ಹಾಕಿಕೊಂಡಿರುವ ಹಲವಾರು ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಲಿ ಎಂದು ಶುಭಹಾರೈಸಿದರು.
ಅಧ್ಯಕ್ಷತೆ ವಹಿಸಿದ ಉಪ ಪ್ರಾಂತೀಯ ಪಂಜಿಮ್ ಕೊಂಕಣ ಪಾಂತ್ರ್ಯ ಫಾ.ಬಂಜೆಲಾವೊ ಟೀಕ್ಸೀರಾ (ಎಸ್.ಡಿ.ಬಿ) ಅವರು ಮಾತನಾಡಿ,ಆಧುನಿಕ ಯುಗದಲ್ಲಿ ಬದುಕನ್ನು ಸಮರ್ಥವಾಗಿ ರೂಪಿಸಿಕೊಳ್ಳಲು ಗುಣಮಟ್ಟದ ಶಿಕ್ಷಣವನ್ನು ಪಡೆಯುವುದು ಅತಿ ಮುಖ್ಯವಾಗಿದೆ.ಶಿಕ್ಷಣದ ಜತೆಗೆ ಸಂಸ್ಕಾರಯುತವಾದ ಶಿಕ್ಷಣವನ್ನು ಕಲಿಸುವಲ್ಲಿ ಪೋಷಕರ ಪಾತ್ರ ಅಮೂಲ್ಯವಾದದ್ದು ಎಂದು ಹೇಳಿದರು.
ಡಾನ್ ಬಾಸ್ಕೋ ಟೆಕ್ ತ್ರಾಸಿ ಸಂಸ್ಥಾಪಕರಾದ ರೆ.ಫಾ ಮೈಕಲ್ ಮಸ್ಕರೇನ್ಹಸ್ ಅವರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.ಸೇಂಟ್ ಜೋಸೆಫ್ ವಾಚ್ ಡೀನರಿ ಕುಂದಾಪುರ ರೆ.ಫಾ ಪಾಲ್ ರೆಗೊ,ವೈಸ್ ಪ್ರಿನ್ಸಿಪಾಲ್ ಬ್ರೈಸ್ ರೋಡ್ರಿಗಸ್,ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸಂತೋಷ್ ಪಾಯಸ್,ಕಾರ್ಯದರ್ಶಿ ಆಶಾ ಕರ್ವಾಲ್ಲೊ,ಕುಂದಾಪುರ ಪ್ರಾಂತ್ಯದ ಧರ್ಮಗುರುಗಳು,ಧರ್ಮ ವಗಿನಿಯರು,ಮಕ್ಕಳ ಪೋಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಕ್ರೀಡೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ವಿದ್ಯಾಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.ಸಂಸ್ಥೆಯ ಆಡಳಿತಾಧಿಕಾರಿ ರೋಶನ್ ಡಿಸೋಜ ಸ್ವಾಗತಿಸಿದರು.ಶಾಲಾ ನಾಯಕ ಡೆರಿಕ್ ಲೋಫೆಜ್ ಮತ್ತು ವಿದ್ಯಾರ್ಥಿ ನಾಯಕಿ ಅನುಶ್ರೀ ನಿರೂಪಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago