ಕುಂದಾಪುರ:ಕೋಡಿ ಬೀಚ್ನಲ್ಲಿ ಈಜಲು ತೆರಳಿದ್ದ ಸಿದ್ದಾಪುರ ಸಮೀಪದ ಅಂಪಾರು ಮೂಡುಬಗೆ ನಿವಾಸಿಯಾಗಿರುವ ಧನರಾಜ್ (23) ವರ್ಷ,ದರ್ಶನ್ (18) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಧನುಷ್ (20) ಪ್ರಾಣಾಪಾಯದಿಂದ ಪಾರಾಗಿದ್ದು ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಕ್ಷಣೆಗೆ ಒಳಪಟ್ಟ ಯುವಕ ಸಹಿತ,ಮೃತಪಟ್ಟ ಯುವಕರಿಬ್ಬರು ಒಂದೇ ತಾಯಿಯ ಮಕ್ಕಳಾಗಿದ್ದಾರೆ,ಕಂಪನಿಯಲ್ಲಿ ಉದ್ಯೋಗದಲ್ಲಿರುವ ಇವರು ಮಧ್ಯಾಹ್ನ ಸಮಯದಲ್ಲಿ ಕೋಡಿ ಬೀಚ್ಗೆ ತೆರಳಿದ್ದಾರೆ ಎನ್ನಲಾಗಿದೆ.ಶನಿವಾರ ಸಂಜೆ ಕುಟುಂಬ ಸಮೇತರಾಗಿ ಕೋಡಿ ಬೀಚ್ ಗೆ ಬಂದಿದ್ದು ಇವರು ಸಮುದ್ರದಲ್ಲಿ ಸ್ನಾನಕ್ಕೆ ಇಳಿದ ಸಂದರ್ಭ ಕಡಲ ಅಲೆಗೆ ಈ ಮೂವರು ಸಹೋದರರು ಕೊಚ್ಚಿಕೊಂಡು ಹೋಗಿದ್ದು ತಕ್ಷಣ ಸ್ಥಳೀಯರು ಓರ್ವ ನನ್ನು ರಕ್ಷಿಸಿದ್ದಾರೆ.
ಆದರೆ ಇಬ್ಬರು ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟಿರುತ್ತಾರೆ.
ಇಬ್ಬರ ಮೃತದೇಹವನ್ನು ಸ್ಥಳೀಯರು ಸಮುದ್ರದಿಂದ ಮೇಲಕ್ಕೆ ತಂದಿದ್ದಾರೆ.ನಿರಂತರವಾಗಿ ಕೋಡಿ ಬೀಚ್ನಲ್ಲಿ ಪ್ರಕರಣಗಳು ಮರುಕಳಿಸುತ್ತಾ ಇದ್ದು.ಜೀವಕ್ಕೆ ಕಂಟಕವಾಗಿರುವ ಕೋಡಿ ಬೀಚ್ನಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ಮುಂದಾಗಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…