ಕುಂದಾಪುರ:ಕಳೆದ ಎರಡು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಪೂರೈಕೆ ಸಮಸ್ಯೆಯಿಂದಾಗಿ ನಿರ್ಮಾಣ ಕ್ಷೇತ್ರಕ್ಕೆ ಭಾರೀ ಹೊಡೆತ ಬಿದ್ದಿದ್ದು, ಇದನ್ನು ವಿರೋಧಿಸಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ,ಕಲ್ಲುಕೋರೆ ಮಾಲೀಕರ ಸಂಘ ಹಾಗೂ ಲಾರಿ ಮಾಲೀಕರ ಸಂಘ ಬೈಂದೂರು ಸಹಭಾಗಿತ್ವದಲ್ಲಿ ಬೈಂದೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಜಿಲ್ಲಾಡಳಿತ ಹಾಗೂ ಗಣಿ ಇಲಾಖೆಯ ಅವೈಜ್ಞಾನಿಕ ನಿಯಮಗಳಿಂದಾಗಿ ಕಟ್ಟಡ ನಿರ್ಮಾಣ ಕ್ಷೇತ್ರದ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವಾರು ಬಾರಿ ಮೌಖಿಕ ಮನವಿ, ಲಿಖಿತ ಮನವಿ ಸಲ್ಲಿಸಿದರೂ ಜಿಲ್ಲಾಡಳಿತ ಸ್ಪಂದಿಸದ ಕಾರಣ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಶಾಸಕ ಗಂಟಿಹೊಳೆ ತಿಳಿಸಿದರು.
ಮನವಿ ಹಂತವನ್ನು ನಾವು ದಾಟಿದ್ದೇವೆ.ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕಾದರೆ ಪ್ರತಿಭಟನೆ ಅನಿವಾರ್ಯ.ಜನರ ಸಮಸ್ಯೆಗೆ ಜಿಲ್ಲಾಡಳಿತ ಸ್ಪಂದಿಸಬೇಕು. ಮುಂದಿನ ಹತ್ತು ದಿನಗಳ ಒಳಗಾಗಿ ಗಣಿ ಇಲಾಖೆಯು ತನ್ನ ಅವೈಜ್ಞಾನಿಕ ನಿಯಮಗಳನ್ನು ಹಿಂಪಡೆಯದೇ ಇದ್ದಲ್ಲಿ ಉಡುಪಿ ಜಿಲ್ಲೆ ಕಂಡುಕೇಳರಿಯದ ರೀತಿಯಲ್ಲಿ ಪ್ರತಿಭಟಿಸುತ್ತೇವೆ ಎಂದು ಇದೇ ವೇಳೆ ಶಾಸಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಬೈಂದೂರುನಲ್ಲಿ ಶನಿವಾರ ನಡೆದ ಪ್ರತಿಭಟನೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ರಾಜಕೀಯ ಜಂಟಾಟಕ್ಕೆ ಕಾರಣವಾಗಿದೆ.ಜನರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕೈಗೊಂಡ ಪ್ರತಿಭಟನೆ ರಾಜಕೀಯ ತಿರುವು ಪಡೆದುಕೊಂಡಿರುವುದು ವಿಪರ್ಯಾಸವಾಗಿದೆ.
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…