ಕುಂದಾಪುರ:ಮಕ್ಕಳನ್ನು ಎಷ್ಟು ಓದಿಸಿದರು ಕೆಲಸ ಎಲ್ಲಾ ಎನ್ನುವಂತಹ ಪರಿಸ್ಥಿತಿಗೆ ಬಂದು ಬಿಟ್ಟಿದೆ.ವಿದ್ಯಾವಂತ ಯುವಕರು ನಿರುದ್ಯೋಗಿಗಳಾಗುತ್ತಿರುವುದು ದೇಶದ ಆಥಿಕ ಬೆಳವಣಿಗೆ ಆತಂಕಕಾರಿ ವಿಷಯವಾಗಿದ್ದು..ತಮ್ಮ ಮಕ್ಕಳು ವಿದ್ಯಾವಂತರಾಗಿ ಒಳ್ಳೆ ಕೆಲಸ ಹಿಡಿದು ಕೈ ತುಂಬ ಸಂಬಳ ಪಡೆಯ ಬೇಕ್ಕೆನ್ನುವ ಹೆತ್ತವರ ಆಸೆಗಳನ್ನು ನಿರುದ್ಯೋಗ ಸಮಸ್ಯೆ ಎನ್ನುವ ಭೂತ ನುಂಗಿಕೊಂಡಿದೆ.ಬೆಲೆ ಏರಿಕೆ ಬಡ ಮತ್ತು ಮಧ್ಯಮ ವರ್ಗದ ಜರನ್ನು ಕಾಡುತ್ತಿದ್ದು.ದೇಶದ ಸಂಪತ್ತನ್ನು ಕೆಲವೆ ಕೆಲವು ವ್ಯಕ್ತಿಗಳು ಲೂಟಿ ಮಾಡುತ್ತಿದ್ದಾರೆ.ಸರಕಾರದ ಅಸಮರ್ಪಕ ನಿಲುವುಗಳ ವಿರುದ್ಧ ನಿರಂತರವಾಗಿ ಹೋರಾಟ ಮಾಡಬೇಕಾಗಿದೆ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಡಾ.ಪ್ರಕಾಶ್ ಕೆ ಹೇಳಿದರು.
ಬೈಂದೂರು ತಾಲೂಕಿನ ನಾಡಗುಡ್ಡೆಯಂಗಡಿಯಲ್ಲಿ ಭಾನುವಾರ ನಡೆದ ಸಿಪಿಐ(ಎಂ) ನ 8ನೇ ಉಡುಪಿ ಜಿಲ್ಲಾ ಸಮ್ಮೇಳನವನ್ನುದ್ದೇಶಿಸಿ ಅವರು ಮಾತನಾಡಿದರು.
ಯಾದವ ಶೆಟ್ಟಿ ಅವರು ಮುಖ್ಯ ಭಾಷಣವನ್ನು ನೆರವೇರಿಸಿದರು.
ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ನೂತನವಾಗಿ ಆಯ್ಕೆಗೊಂಡಿರುವ ಜಿಲ್ಲಾ ಕಾರ್ಯದರ್ಶಿ ಸುರೇಶ ಕಲ್ಲೇಗಾರ,ಕಾರ್ಮಿಕ ಮುಖಂಡ ರಾಜೀವ ಪಡುಕೋಣೆ,ನಾಗರತ್ನ ನಾಡ,ಶ್ರೀಧರ ಗೊಲ್ಲ,ಕೆ.ಶಂಕರ,ಎಚ್ ನರಸಿಂಹ ಉಪಸ್ಥಿತರಿದ್ದರು.ಪಿಲೀಫ್ ಡಿಸೋಜ ಸ್ವಾಗತಿಸಿದರು.ಶ್ರೀಧರ ನಾಡ ನಿರೂಪಿಸಿದರು.ಪಡುಕೋಣೆ ಯಿಂದ ನಾಡ ಗುಡ್ಡೆಯಂಗಡಿ ತನಕ ಬೃಹತ್ ಮೆರವಣಿಗೆ ನಡೆಯಿತು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…