ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ ಸಮೀಪ ಸಮುದ್ರದಲ್ಲಿ ಸುಮಾರು 45 ಪಾಯಿಂಟ್ ನೀರಿನಲ್ಲಿ ಗಂಡಸಿನ ಅಪರಿಚಿತ ಶವ ಕೊಳೆತ ಸ್ಥಿತಿಯಲ್ಲಿ ಸೋಮವಾರ ಪತ್ತೆ ಆಗಿದೆ.
ಟಿ ಶರ್ಟ್ ಧರಿಸಿರುವ ವ್ಯಕ್ತಿ ಕಪ್ಪು ಬಣ್ಣದ ಚುಕ್ಕಿಯನ್ನು ಹೊಂದಿರುವ ಬರ್ಮೂಡ ಚಡ್ಡಿ ಧರಿಸಿದ್ದು.ಕೈಯಲ್ಲಿ ಎಸ್.ವಿ ಎನ್ನುವ ಇಂಗ್ಲಿಷ್ ಅಕ್ಷರದೊಂದಿಗೆ ಹಚ್ಚೆ ಹಾಕಿಸಿಕೊಂಡಿದ್ದಾರೆ.ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿರುವ ಶವವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.ಮೀನುಗಾರರು ನೀಡಿದ ಮಾಹಿತಿ ಮೇರೆಗೆ ಜೀವ ರಕ್ಷಕ ತಂಡದ ಮುಳುಗು ತಜ್ಞ ದಿನೇಶ್ ಖಾರ್ವಿ ಗಂಗೊಳ್ಳಿ ಮತ್ತು ವೆಂಕಟೇಶ ಖಾರ್ವಿ,ಪ್ರಶಾಂತ ಖಾರ್ವಿ,ಸಚಿನ್ ಖಾರ್ವಿ,ದತ್ತ ಖಾರ್ವಿ ದೋಣಿ ಮೂಲಕ ಸಮುದ್ರಕ್ಕೆ ತೆರಳಿ 45 ಪಾಯಿಂಟ್ ನೀರಿನಲ್ಲಿ ತೇಲುತ್ತಿದ್ದ ಅಪರಿಚಿತ ಶವವನ್ನು ದಡಕ್ಕೆ ತರುವುದರ ಮುಖೇನ ರಕ್ಷಿಸಿದ್ದಾರೆ.ವಿಶ್ವನಾಥ ಗಂಗೊಳ್ಳಿ ಸಹರಿಸಿದರು.ಇಬ್ರಾಹಿಂ ಗಂಗೊಳ್ಳಿ ಶವವನ್ನು ಸಾಗಿಸಲು ನೆರವಾದರು.ಗಂಗೊಳ್ಳಿ ಠಾಣೆ ಪಿಎಸ್ಐ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿದ ಶವ ಮಹಜರು ನಡೆಸಿದರು.
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…