ಕುಂದಾಪುರ

ನವಚೇತನ ಸಮಾವೇಶ,ಕುಂದಾಪುರ ತಾಲೂಕು ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ

Share

ಕುಂದಾಪುರ:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಕುಂದಾಪುರ ತಾಲೂಕು ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ನವಚೇತನ ಸಮಾವೇಶ ಅದ್ದೂರಿಯಾಗಿ ಅಂಬೇಡ್ಕರ್ ಭವನ ಕುಂದಾಪುರದಲ್ಲಿ ಸೋಮವಾರ ನಡೆಯಿತು.
ಕುಂದಾಪುರ ಶಾಸ್ತ್ರೀ ಸರ್ಕಲ್ ನಿಂದ ಅಂಬೇಡ್ಕರ್ ಭವನದ ವರೆಗೆ ಬೃಹತ್ ಮೆರವಣಿಗೆ ನಡೆಯಿತು.ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ನೂತನವಾಗಿ ಆಯ್ಕೆಗೊಂಡಿರುವ ಪದಾಧಿಕಾರಿಗಳಿಗೆ ಪ್ರಮಾಣ ವಚನ ಭೋಧಿಸಿದರು.
ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಅವರು ನವಚೇತನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ,ಈಗಾಗಲೇ ಜಿಲ್ಲೆಯಲ್ಲಿ ದಲಿತ ಚಳುವಳಿಯನ್ನು ಅತ್ಯುತ್ತಮವಾಗಿ ಪುನರ್‍ಶ್ಚೇತನಗೊಳಿಸಲಾಗುತ್ತಿದೆ.ನವಚೇತನ ಸಮಾವೇಶದ ಮೂಲಕ ಈ ಭಾಗದಲ್ಲಿ ಸಮುದಾಯದ ಜನರನ್ನು ಒಗ್ಗೂಡಿಸುವ ಕೆಲಸವನ್ನು ಸಂಘಟನೆಯ ಪದಾಧಿಕಾರಿಗಳು ಬಹಳಷ್ಟು ಪರಿಣಾಮಕಾರಿಯಾಗಿ ಮಾಡುತ್ತಿರುವುದು ಶ್ಲಾಘನೀಯ ಕೆಲಸವಾಗಿದೆ ಎಂದರು.
ಜಿಲ್ಲಾ ಪ್ರಧಾನ ಸಂಚಾಲಕ ಟಿ.ಮಂಜುನಾಥ ಗಿಳಿಯಾರು ಮಾತನಾಡಿ,ಉಡುಪಿ ಜಿಲ್ಲಾಡಳಿತ ದಲಿತ ಸಮುದಾಯವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದೆ.ಜಿಲ್ಲೆಯ ಉಸ್ತುವಾರಿ ಸಚಿವರು ಅಧಿಕಾರ ವಹಿಸಿಕೊಂಡ ದಿನಗಳಿಂದ ಇಲ್ಲಿ ತನಕ ದಲಿತ ಸಮುದಾಯದ ಕುಂದು ಕೊರತೆಗಳನ್ನು ಕೇಳುವ ಪ್ರಯತ್ನ ಮಾಡಿಲ್ಲ.ದಲಿದತರ ಸಮಸ್ಯೆಗಳನ್ನು ಆಲಿಸಲು ಪ್ರತಿ ಮೂರು ತಿಂಗಳಿಗೊಮ್ಮೆ ಸಭೆಗಳನ್ನು ಮಾಡಬೇಕು ಎನ್ನುವ ಕಾನೂನು ಇದೆ ಅದನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಜಿಲ್ಲಾಡಳಿತ ಬಗ್ಗೆ ತಮ್ಮ ಆಕ್ರೋಶವನ್ನು ಹೊರ ಹಾಕಿದರು.
ಜಿಲ್ಲಾ ಸಂಘಟನಾ ಸಂಚಾಲಕ ಸುರೇಶ ಹಕ್ಲಾಡಿ ಮಾತನಾಡಿ,ನವಚೇತನ ಸಮಾವೇಶವನ್ನು ಅದ್ದೂರಿಯಾಗಿ ಆಯೋಜನೆ ಮಾಡಲಾಗಿದ್ದು.ನೂತನವಾಗಿ ಆಯ್ಕೆಗೊಂಡಿರುವ ಕುಂದಾಪುರ ತಾಲೂಕು ಘಟಕದ ಪದಾಧಿಕಾರಿಗಳು ಸಕ್ರೀಯವಾಗಿ ಕೆಲಸವನ್ನು ಮಾಡುವುದರ ಮೂಲಕ ಸಂಘಟನೆಗೆ ಬಲ ತುಂಬೇಕೆಂದು ಹೇಳಿದರು.
ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮಸುಂದರ್ ತೆಕ್ಕಟ್ಟೆ ಅವರು ಅಂಬೇಡ್ಕರ್ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ,ಸಭೆ ಅಧ್ಯಕ್ಷತೆಯನ್ನು ವಹಿಸಿದ್ದರು.
ಕುಂದಾಪುರ ಸಹಾಯಕ ಕಮಿಷನರ್ ಮಹೇಶ್ಚಂದ್ರ ಕೆ.ಎ.ಎಸ್,ಉದ್ಯಮಿ ದಿನೇಶ್ ಹೆಗ್ಡೆ,ಜಿಲ್ಲಾ ಸಂಘಟನಾ ಸಂಚಾಲಕ ಮಂಜುನಾಥ ನಾಗೂರು,ಮಹಿಳಾ ಒಕ್ಕೂಟ ಗೀತಾ ಸುರೇಶ್ ಮತ್ತು ನಯನಾ ಆದೀಶ್,ನಿಯೋಜಿತ ತಾಲೂಕು ಪದಾಧಿಕಾರಿಗಳಾದ ಕೆ.ಸಿ ರಾಜು ಬೆಟ್ಟಿನಮನೆ,ಕೋಶಾಧಿಕಾರಿ ಚಂದ್ರ ಕೊರ್ಗಿ,ಬೈಂದೂರು ತಾಲೂಕು ಸಂಚಾಲಕ ಶಿವರಾಜ್ ಬೈಂದೂರು,ಜಿಲ್ಲಾ ಸಮಿತಿ ಸದಸ್ಯರಾದ ಶ್ರೀನಿವಾಸ ಮಲ್ಯಾಡಿ,ಸುರೇಶ ಬಾರ್ಕೂರು,ಕುಮಾರ್ ಕೋಟ ಹಾಗೂ ಗ್ರಾಮ ಸಮಿತಿ,ಜಿಲ್ಲಾ ಸಮಿತಿ,ತಾಲೂಕು ಸಮಿತಿ ಪದಾಧಿಕಾರಿಗಳು,ಕಾರ್ಯಕಾರಿ ಸಮತಿ ಸದಸ್ಯರು,ಸಂಘಟನಾ ಸಂಚಾಲಕರು,ಸಮಾಜ ಬಾಂಧವರು ಉಪಸ್ಥಿತರಿದ್ದರು.ಶಂಭು ಗುಡ್ಡಮ್ಮಾಡಿ ಮತ್ತು ಚೈತ್ರ ಯಡ್ತಾರೆ ನಿರೂಪಿಸಿದರು.ಜಿಲ್ಲಾ ಸಮಿತಿ ಸದಸ್ಯ ಗೋಪಾಲಕೃಷ್ಣ ನಾಡ ವಂದಿಸಿದರು
.

Advertisement

Share
Team Kundapur Times

Recent Posts

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

6 hours ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago