ಕುಂದಾಪುರ

ನವಚೇತನ ಸಮಾವೇಶ,ಕುಂದಾಪುರ ತಾಲೂಕು ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ

Share

ಕುಂದಾಪುರ:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಕುಂದಾಪುರ ತಾಲೂಕು ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ನವಚೇತನ ಸಮಾವೇಶ ಅದ್ದೂರಿಯಾಗಿ ಅಂಬೇಡ್ಕರ್ ಭವನ ಕುಂದಾಪುರದಲ್ಲಿ ಸೋಮವಾರ ನಡೆಯಿತು.
ಕುಂದಾಪುರ ಶಾಸ್ತ್ರೀ ಸರ್ಕಲ್ ನಿಂದ ಅಂಬೇಡ್ಕರ್ ಭವನದ ವರೆಗೆ ಬೃಹತ್ ಮೆರವಣಿಗೆ ನಡೆಯಿತು.ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ನೂತನವಾಗಿ ಆಯ್ಕೆಗೊಂಡಿರುವ ಪದಾಧಿಕಾರಿಗಳಿಗೆ ಪ್ರಮಾಣ ವಚನ ಭೋಧಿಸಿದರು.
ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಅವರು ನವಚೇತನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ,ಈಗಾಗಲೇ ಜಿಲ್ಲೆಯಲ್ಲಿ ದಲಿತ ಚಳುವಳಿಯನ್ನು ಅತ್ಯುತ್ತಮವಾಗಿ ಪುನರ್‍ಶ್ಚೇತನಗೊಳಿಸಲಾಗುತ್ತಿದೆ.ನವಚೇತನ ಸಮಾವೇಶದ ಮೂಲಕ ಈ ಭಾಗದಲ್ಲಿ ಸಮುದಾಯದ ಜನರನ್ನು ಒಗ್ಗೂಡಿಸುವ ಕೆಲಸವನ್ನು ಸಂಘಟನೆಯ ಪದಾಧಿಕಾರಿಗಳು ಬಹಳಷ್ಟು ಪರಿಣಾಮಕಾರಿಯಾಗಿ ಮಾಡುತ್ತಿರುವುದು ಶ್ಲಾಘನೀಯ ಕೆಲಸವಾಗಿದೆ ಎಂದರು.
ಜಿಲ್ಲಾ ಪ್ರಧಾನ ಸಂಚಾಲಕ ಟಿ.ಮಂಜುನಾಥ ಗಿಳಿಯಾರು ಮಾತನಾಡಿ,ಉಡುಪಿ ಜಿಲ್ಲಾಡಳಿತ ದಲಿತ ಸಮುದಾಯವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದೆ.ಜಿಲ್ಲೆಯ ಉಸ್ತುವಾರಿ ಸಚಿವರು ಅಧಿಕಾರ ವಹಿಸಿಕೊಂಡ ದಿನಗಳಿಂದ ಇಲ್ಲಿ ತನಕ ದಲಿತ ಸಮುದಾಯದ ಕುಂದು ಕೊರತೆಗಳನ್ನು ಕೇಳುವ ಪ್ರಯತ್ನ ಮಾಡಿಲ್ಲ.ದಲಿದತರ ಸಮಸ್ಯೆಗಳನ್ನು ಆಲಿಸಲು ಪ್ರತಿ ಮೂರು ತಿಂಗಳಿಗೊಮ್ಮೆ ಸಭೆಗಳನ್ನು ಮಾಡಬೇಕು ಎನ್ನುವ ಕಾನೂನು ಇದೆ ಅದನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಜಿಲ್ಲಾಡಳಿತ ಬಗ್ಗೆ ತಮ್ಮ ಆಕ್ರೋಶವನ್ನು ಹೊರ ಹಾಕಿದರು.
ಜಿಲ್ಲಾ ಸಂಘಟನಾ ಸಂಚಾಲಕ ಸುರೇಶ ಹಕ್ಲಾಡಿ ಮಾತನಾಡಿ,ನವಚೇತನ ಸಮಾವೇಶವನ್ನು ಅದ್ದೂರಿಯಾಗಿ ಆಯೋಜನೆ ಮಾಡಲಾಗಿದ್ದು.ನೂತನವಾಗಿ ಆಯ್ಕೆಗೊಂಡಿರುವ ಕುಂದಾಪುರ ತಾಲೂಕು ಘಟಕದ ಪದಾಧಿಕಾರಿಗಳು ಸಕ್ರೀಯವಾಗಿ ಕೆಲಸವನ್ನು ಮಾಡುವುದರ ಮೂಲಕ ಸಂಘಟನೆಗೆ ಬಲ ತುಂಬೇಕೆಂದು ಹೇಳಿದರು.
ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮಸುಂದರ್ ತೆಕ್ಕಟ್ಟೆ ಅವರು ಅಂಬೇಡ್ಕರ್ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ,ಸಭೆ ಅಧ್ಯಕ್ಷತೆಯನ್ನು ವಹಿಸಿದ್ದರು.
ಕುಂದಾಪುರ ಸಹಾಯಕ ಕಮಿಷನರ್ ಮಹೇಶ್ಚಂದ್ರ ಕೆ.ಎ.ಎಸ್,ಉದ್ಯಮಿ ದಿನೇಶ್ ಹೆಗ್ಡೆ,ಜಿಲ್ಲಾ ಸಂಘಟನಾ ಸಂಚಾಲಕ ಮಂಜುನಾಥ ನಾಗೂರು,ಮಹಿಳಾ ಒಕ್ಕೂಟ ಗೀತಾ ಸುರೇಶ್ ಮತ್ತು ನಯನಾ ಆದೀಶ್,ನಿಯೋಜಿತ ತಾಲೂಕು ಪದಾಧಿಕಾರಿಗಳಾದ ಕೆ.ಸಿ ರಾಜು ಬೆಟ್ಟಿನಮನೆ,ಕೋಶಾಧಿಕಾರಿ ಚಂದ್ರ ಕೊರ್ಗಿ,ಬೈಂದೂರು ತಾಲೂಕು ಸಂಚಾಲಕ ಶಿವರಾಜ್ ಬೈಂದೂರು,ಜಿಲ್ಲಾ ಸಮಿತಿ ಸದಸ್ಯರಾದ ಶ್ರೀನಿವಾಸ ಮಲ್ಯಾಡಿ,ಸುರೇಶ ಬಾರ್ಕೂರು,ಕುಮಾರ್ ಕೋಟ ಹಾಗೂ ಗ್ರಾಮ ಸಮಿತಿ,ಜಿಲ್ಲಾ ಸಮಿತಿ,ತಾಲೂಕು ಸಮಿತಿ ಪದಾಧಿಕಾರಿಗಳು,ಕಾರ್ಯಕಾರಿ ಸಮತಿ ಸದಸ್ಯರು,ಸಂಘಟನಾ ಸಂಚಾಲಕರು,ಸಮಾಜ ಬಾಂಧವರು ಉಪಸ್ಥಿತರಿದ್ದರು.ಶಂಭು ಗುಡ್ಡಮ್ಮಾಡಿ ಮತ್ತು ಚೈತ್ರ ಯಡ್ತಾರೆ ನಿರೂಪಿಸಿದರು.ಜಿಲ್ಲಾ ಸಮಿತಿ ಸದಸ್ಯ ಗೋಪಾಲಕೃಷ್ಣ ನಾಡ ವಂದಿಸಿದರು
.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago