ಕುಂದಾಪುರ

ಮಂಡಾಡಿ ಹೋರ್ವರಮನೆ ಸಾಂಪ್ರದಾಯಿಕ ಕಂಬಳ ಮಹೋತ್ಸವ ಸಂಪನ್ನ

Share

ಕುಂದಾಪುರ:ಮಂಡಾಡಿ ಹೋರ್ವರಮನೆಯ ಹದಿನೇಳನೆ ವರ್ಷದ ಕಂಬಳೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಶುಕ್ರವಾರ ನಡೆಯಿತು.
ಮಂಡಾಡಿ ಹೋರ್ವರಮನೆ ಸಾಂಪ್ರದಾಯಿಕ ಕಂಬಳೋತ್ಸವದಲ್ಲಿ ಕುಂದಾಪುರ,ಬೈಂದೂರು,ಭಟ್ಕಳ,ಉಡುಪಿ,ಕಾರ್ಕಳ ಭಾಗದ ಸುಮಾರು ಐವತ್ತಕ್ಕೂ ಅಧಿಕ ಜೊತೆ ಕೋಣಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.ಕನೆಹಲಗೆ ವಿಭಾಗ,ಹಗ್ಗ ಹಿರಿಯ ವಿಭಾಗ,ಹಗ್ಗ ಕಿರಿಯ ವಿಭಾಗ,ಸಬ್ ಜ್ಯೂನಿಯರ್ ವಿಭಾಗ,ಕೆಸರು ಗದ್ದೆ ಓಟ ನಡೆಯಿತು.ವಿಜೇತ ಕೋಣಗಳ ಮಾಲೀಕರಿಗೆ ಹಾಗೂ ಓಟ ಸ್ಪರ್ಧೆಯಲ್ಲಿ ಭಾಗವಹಿಸಿದ ಸ್ಪಧಾಳುಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.ಹೋರ್ವರ ಮನೆ ಕಂಬಳೋತ್ಸವದಲ್ಲಿ ಭಾಗವಹಿಸಿದ ಕೋಣಗಳ ತಂಡಕ್ಕೆ ಗೌರವಧನವನ್ನು ನೀಡಲಾಯಿತು.ಹಗಲು,ಇರುಳು ನಡೆದ ಕಂಬಳೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಭಾಗವಹಿಸಿದರು.
ಮಾಂಡವ ಋಷಿ ಮಹರ್ಷಿಗಳು ತಪಸನ್ನು ಆಚರಿಸಿದಂತಹ ಪುಣ್ಯದ ನೆಲ ವಾಗಿರುವ ಮಂಡಾಡಿ ಹೋರ್ವರಮನೆ ಮಕ್ಕಿಮನೆ ಕಂಬಳೋತ್ಸವಕ್ಕೆ ಸುಮಾರು ಎಂಟುನೂರು ವರ್ಷಗಳ ಕಾಲದ ಇತಿಹಾಸವನ್ನು ಹೊಂದಿದೆ.ಕಾರಣಾಂತರಗಳಿಂದ ಕಂಬಳೋತ್ಸವ ಆಚರಣೆ ನಿಂತುಹೋಗಿದ್ದು ಪ್ರಶ್ನಾ ಚಿಂತನಾ ಮುಖೇನ 2008 ರಿಂದ ದಿ.ರತ್ನಾಕರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಬಹಳಷ್ಟು ವಿಜೃಂಭಣೆಯಿಂದ ಸಂಪ್ರದಾಯ ಬದ್ಧವಾಗಿ ಮಂಡಾಡಿ ಹೋರ್ವರಮನೆ ಕಂಬಳೋತ್ಸವ ನಡೆದುಕೊಂಡು ಬರುತ್ತಿದ್ದು.ಶುಕ್ರವಾರ ಹದಿನೇಳನೆ ವರ್ಷದ ಕಂಬಳೋತ್ಸವ ಕಾರ್ಯಕ್ರಮ ಸಂಪನ್ನಗೊಂಡಿದೆ.ತಲಕಾವೇರಿ ಯಿಂದ ಆಗಮಿಸಿದ ಏಳು ಜನ ಶಕ್ತಿ ದೇವತೆಗಳು ಕಾಡ್ತಿ ಅಮ್ಮನ ಹಿರಿತನದಲ್ಲಿ ನೆಲೆನಿಂತ ಮಂಡಾಡಿ ಎನ್ನುವ ಪ್ರದೇಶವಾಗಿದ್ದು ಬಹಳಷ್ಟು ಇತಿಹಾಸವನ್ನು ಹೊಂದಿದೆ.
ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮಾಜಿ ಅಧ್ಯಕ್ಷರಾದ ಮಂಜಯ್ಯ ಶೆಟ್ಟಿ ಅವರು ಕಂಬಳ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ,ಮಂಡಾಡಿ ಮನೆತನದ ದೈವ ದೇವತೆಗಳ ಆರಾಧನೆಯೊಂದಿಗೆ ಮಂಡಾಡಿ ಹೋರ್ವರ ಕಂಬಳೋತ್ಸವ ಕಾರ್ಯಕ್ರಮ ಕಳೆದ ಹದಿನೇಳು ವರ್ಷಗಳಿಂದ ಸಾಂಪ್ರದಾಯಿಕ ಬದ್ಧವಾಗಿ ನಡೆದುಕೊಂಡು ಬರುತ್ತಿದ್ದು.ವರ್ಷದಿಂದ ವರ್ಷಕ್ಕೆ ಇನ್ನಷ್ಟು ವಿಜೃಂಭಣೆಯಿಂದ ನಡೆಯಲಿ ಎಂದು ಶುಭಹಾರೈಸಿದರು.
ಹಿರಿಯರಾದ ಬಾರ್ಕೂರು ಶಾಂತರಾಮ ಶೆಟ್ಟಿ ಮಾತನಾಡಿ,ಕಾರಣಾಂತರಗಳಿಂದ ನಿಂತು ಹೋಗಿದ್ದ ಕಂಬಳೋತ್ಸವಕ್ಕೆ ಮಂಡಾಡಿ ರತ್ನಾಕರ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದುಕೊಂಡು ಬರುತ್ತಿದ್ದು ಜಿಲ್ಲೆಯಲ್ಲಿಯೆ ಅತ್ಯಂತ ದೊಡ್ಡ ಕಂಬಳವಾಗಿದೆ.ಹೊರ ಜಿಲ್ಲೆಗಳಿಂದಲೂ ಕಂಬಳದ ಕೋಣಗಳು ಭಾಗವಹಿಸುತ್ತಿರುವುದನ್ನು ನೋಡಿದರೆ ಕಂಬಳದ ಜಜ ಪ್ರೀಯತೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ ಎಂದರು.
ಲಕ್ಷ್ಮಣ ಶೆಟ್ಟಿ ಮಾತನಾಡಿ,ಮಂಡಾಡಿ ಹೋರ್ವರಮನೆ ಕಂಬಳಕ್ಕೆ ಸುಮಾರು ಎಂಟುನೂರು ವರ್ಷಗಳ ಕಾಲದ ಇತಿಹಾಸ ಇದೆ ಎನ್ನುವ ಐತಿಹ್ಯ ಇದೆ.ಕಾರಣಾಂತರಗಳಿಂದ ನಿಂತುಹೋಗಿರುವ ಕಂಬಳ ದೇವರ ಕೃಪೆ ಅಂತೆ ಮಂಡಾಡಿ ಹೋರ್ವರಮೆನೆ ಮತ್ತು ಮಕ್ಕಿಮನೆ ಸಹೋಗದಲ್ಲಿ ನಡೆದುಕೊಂಡು ಬರುತ್ತಿದೆ ಎಂದರು.ದಿವಾಂಗತ ರತ್ನಕಾರ ಶೆಟ್ಟಿ ಅವರ ಕೊಡುಗೆಯನ್ನು ಸ್ಮರಿಸಿದರು.
ಮಹೇಶ್ ಹೆಗ್ಡೆ ಮಾತನಾಡಿ,ಕಂಬಳ ಮಹೋತ್ಸವ ಇನ್ನಷ್ಟು ವಿಜೃಂಭಣೆಯಿಂದ ನಡೆಯಲಿ ಎಂದು ಶುಭಹಾರೈಸಿದರು.
ಆದರ್ಶ ಶೆಟ್ಟಿ ಮಾತನಾಡಿ,ಕಂಬಳ ಎನ್ನುವುದು ಅವಿಭಜಿತ ದ.ಕ ಜಿಲ್ಲೆಯ ವಿಶಿಷ್ಟವಾದ ಜಾನಪದ ಕ್ರೀಡೆಯಾಗಿದೆ.ಕಂಬಳ ಎನ್ನುವುದು ನಮ್ಮ ನೆಲೆಯ ಪ್ರತಿಷ್ಠಿತ ಕ್ರೀಡೆಯಾಗಿದ್ದು ದೇಶ ವಿದೇಶಗಳಲ್ಲಿಯೂ ಜನಪ್ರೀಯತೆ ಗಳಿಸಿದೆ ಎಂದರು.
ಕಂಬಳ ಸಮಿತಿ ಗೌರವಾಧ್ಯಕ್ಷ ಡಾ.ರಂಜನ ಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಕಂಬಳ ಸಮಿತಿ ಅಧ್ಯಕ್ಷ ಜಯರಾಮ ಶೆಟ್ಟಿ,ಮಂಡಾಡಿ ಹೋರ್ವರಮನೆ ಬಾಬಣ್ಣ ಶೆಟ್ಟಿ,ಸಂತೋಷ ಶೆಟ್ಟಿ,ಸಂದರ್ಶ ಶೆಟ್ಟಿ,ಸನತ್ ಶೆಟ್ಟಿ,ಹರ್ಷಿತ್ ಶೆಟ್ಟಿ ಹಾಗೂ ಮಂಡಾಡಿ ಹೋರ್ವರಮನೆಯವರು,ಗ್ರಾಮಸ್ಥರು ಉಪಸ್ಥಿತರಿದ್ದರು.ಶಿಕ್ಷಕ ಉದಯ್ ಕುಮಾರ್ ಶೆಟ್ಟಿ ನಿರೂಪಿಸಿದರು.ಕಿಶೋರ್ ಬೈಂದೂರು,ಅಭಿ ಪಾಂಡೇಶ್ವರ ಕಂಬಳದ ಉದ್ಘೋಷಕರಾಗಿ ಭಾಗವಹಿಸಿದ್ದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago