ಪ್ರಮುಖ

ಕಮಲ್ ಫ್ಯೂಲ್ಸ್ ಶುಭಾರಂಭ

Share

ಕುಂದಾಪುರ:ಭಾರತದಲ್ಲಿ ಅತ್ಯಂತ ದೊಡ್ಡ ಮಾರುಕಟ್ಟೆ ವ್ಯವಸ್ಥೆಯನ್ನು ಹೊಂದಿರುವ ಜನಪ್ರೀಯ ಎಚ್.ಪಿ ಫ್ಯೂಲ್ಸ್ ನ ಘಟಕ ಸುಸಜ್ಜಿತವಾದ ವ್ಯವಸ್ಥೆಯಡಿಯಲ್ಲಿ ಕುಂದಾಪುರ ತಾಲೂಕಿನ ಅರಾಟೆಯಲ್ಲಿ ನಿರ್ಮಾಣವಾಗಿರುವುದರಿಂದ ಪರಿಸರದ ಜನರಿಗೆ ಉತ್ತಮ ದರ್ಜೆ ತೈಲ ಸಿಗುವಂತಾಗಲಿದೆ.
ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ನಿರ್ಮಾಣವಾಗಿರುವ ಕಮಲ್ ಫ್ಯೂಲ್ಸ್‍ನ ಹಸಿರು ಗಾರ್ಡನ್ ನೊಡುಗರ ಮನ ಸೆಳೆಯುತ್ತಿದೆ.ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಸಹಿತ ಶೌಚಾಲಯ ಹಾಗೂ ನೈಟ್ರೋಜನ್ ಗಾಳಿ ಹಾಕುವ ಯಂತ್ರ ಕೂಡ ಲಭ್ಯವಿದ್ದು.ಬ್ಯಾಟರಿ ಚಾಲಿತ ವಾಹನಗಳಿಗೆ ಚಾರ್ಚ್‍ಂಜಿಗ್ ಸ್ಟೇಷನ್ ಕೂಡ ಲಭ್ಯವಾಗಲಿದೆ.ಒಂದೆ ಸೂರಿನಡಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.ದಕ್ಷತೆಯುಳ್ಳ ಪೆಟ್ರೋಲ್ ಮತ್ತು ಡಿಸೇಲ್ ಹಾಕಿಸಿಕೊಳ್ಳಲು ಕಮಲ್ ಫ್ಯೂಲ್ಸ್‍ಗೆ ಭೇಟಿ ನೀಡಬಹುದು.
ಕಮಲ್ ಫ್ಯೂಲ್ಸ್ ಮಾಲೀಕರಾದ ನಾಗರಾಜ ಶೆಟ್ಟಿ ಗುಲ್ವಾಡಿ ದೊಡ್ಮನೆ ಅವರು ಮಾತನಾಡಿ,ಒಂದಿಷ್ಟು ಜನರಿಗೆ ಉದ್ಯೋಗ ನೀಡುವ ದೃಷ್ಟಿಕೋನದೊಂದಿಗೆ ಹಾಗೂ ಊರಿನಲ್ಲಿ ಉದ್ಯಮವನ್ನು ಸ್ಥಾಪನೆ ಮಾಡಬೇಕು ಎನ್ನುವ ಉದ್ದೇಶದೊಂದಿಗೆ ಶುಭಗಳಿಗೆಯಲ್ಲಿ ಕಮಲ್ ಪೆಟ್ರೋಲ್ ಬಂಕ್‍ನ್ನು ಅರಾಟೆಯಲ್ಲಿ ಆರಂಭಿಸಲಾಗಿದ್ದು.ಉತ್ತಮ ದರ್ಜೆ ತೈಲ ಮತ್ತು ಸೇವೆಯನ್ನು ನೀಡಲಾಗುವುದು ಎಂದು ಹೇಳಿದರು.ಎಲ್ಲರ ಸಹಕಾರವನ್ನು ಕೇಳಿಕೊಂಡರು.
ಕಮಲ್ ಫ್ಯೂಲ್ಸ್ ಮಾಲೀಕರಾದ ರತ್ನಾಕರ ಶೆಟ್ಟಿ ಮೊವಾಡಿ ಉದ್ರಿ ಪಟೇಲರ ಮನೆ ಮಾತನಾಡಿ,ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ಕಮಲ್ ಫ್ಯೂಲ್ಸ್ ಪೆಟ್ರೋಲ್ ಪಂಪ್‍ನ್ನು ಎಲ್ಲಾ ರೀತಿಯ ಕಾನೂನಿನ ಚೌಕಟ್ಟನ್ನು ಅನುಸರಿಸುವುದರ ಮುಖೇನ ಸುಸಜ್ಜಿತವಾದ ವ್ಯವಸ್ಥೆಯಡಿಯಲ್ಲಿ ನಿರ್ಮಾಣಮಾಡಲಾಗಿದೆ.ಉತ್ತಮ ರೀತಿಯ ಪಾರ್ಕಿಂಗ್ ವ್ಯವಸ್ಥೆ,ಶೌಚಾಲಯ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು.ಗುಣಮಟ್ಟದ ತೈಲವನ್ನು ಹಾಕುವುದರ ಮೂಲಕ ಸೇವೆಯನ್ನು ನೀಡಲಾಗುತ್ತಿದ್ದು.ಎಲ್ಲರೂ ಸಹಕಾರ ಮಾಡಬೇಕೆಂದು ವಿನಂತಿಸಿಕೊಂಡರು.
ಎಚ್.ಪಿ.ಸಿ.ಎಲ್ ಜೋನ್ ಹೆಡ್ ಮಂಗಳೂರು ನವಿನ್ ಕುಮಾರ್ ಅವರು ಕಮಲ್ ಫ್ಯೂಲ್ಸ್ ಕಛೇರಿ ಮತ್ತು ಇಂದಿರಾ ಶೆಟ್ಟಿ ಗುಲ್ವಾಡಿ ದೊಡ್ಮಮನೆ ಮತ್ತು ಗುಲಾಬಿ ಶೆಟ್ಟಿ ಮೊವಾಡಿ ಉದ್ರಿ ಪಟೇಲರ ಮನೆ ಪೆಟ್ರೋಲ್ ಮತ್ತು ಡಿಸೇಲ್ ಬಂಕ್ ಉದ್ಘಾಟಿಸಿದರು.ಸ್ನೇಹಿತರು,ಬಂಧು ಮಿತ್ರರು,ಹಿತೈಷಿಗಳು,ಕುಟುಂಬಿಕರು ಕಮಲ್ ಫ್ಯೂಲ್ಸ್ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಶುಭಾಶಯ ಕೋರಿದರು.ವಾಹನಗಳಿಗೆ ತೈಲವನ್ನು ಹಾಕುವುದರ ಮುಖೇನ ಚಾಲನೆಯನ್ನು ನೀಡಲಾಯಿತು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 months ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago