ಕುಂದಾಪುರ:ತಾಲೂಕು ಅಂಪಾರು ಗ್ರಾಮದ ಬಲಾಡಿ ಕಲ್ ತೋಡ್ಮಿ ಮನೆಯ ಕುಟುಂಬದವರ ಮೂಲ ನಾಗಬನದಲ್ಲಿ ಚತುಃಪವಿತ್ರ ನಾಗಮಂಡಲೋತ್ಸವ ವಿಜೃಂಭಣೆಯಿಂದ ನಡೆಯಿತು
ಶ್ರೀ ದೇವರಿಗೆ ಬೆಳಿಗ್ಗೆ ಗುರುಗಣಪತಿ ಪೂಜೆ, ಸ್ವಸ್ತಿ ಪುಣ್ಯಾಹ ವಾಚನ, ನಾಂದಿ, ಸಮಾರಾಧನೆ, ಕೃಚ್ಚಾಚರಣೆ, ಮಹಾಸಂಕಲ್ಪ, ಮಹಾಗಣಪತಿ ಹೋಮ, ನವಗ್ರಹ ಹೋಮ, ಪ್ರಾಯಶ್ಚಿತ್ತ ಅಯುತ ಸಂಖ್ಯಾತಿಲಹೋಮ, ಕೂಷ್ಮಾಂಡ ಹೋಮ, ಪವಮಾನ ಹೋಮ, ತತ್ವ ಕಲಶ ಸ್ಥಾಪನೆ, ತತ್ವಹೋಮ, ಸರ್ಪಸೂಕ್ತ ಹೋಮ, ಸುಬ್ರಹ್ಮಣ್ಯ ಹೋಮ, ಪಂಚವಿಂಶತಿ ದ್ರವ್ಯ ಕಲಶಸ್ಥಾಪನೆ, ಪ್ರಧಾನ ಅಧಿವಾಸ ಹೋಮ, ಗಾಯತ್ರಿ ಕಲಶ ಸ್ಥಾಪನೆ, ಗಾಯತ್ರಿ ಜಪ, ಚತುರ್ವೇದ ಪಾರಾಯಣ ಕಲಶಾಭಿಷೇಕ, ಕಲ್ಲೋಕ್ತ ಮಹಾಪೂಜೆ, ದಶದಾನ, ನವಗ್ರಹ ಹೋಮ, ವಟು-ಬ್ರಾಹ್ಮಣ ಆರಾಧನೆ, ಸುಹಾಸಿನಿ ಪೂಜೆ, ಆಚಾರ್ಯ ಪೂಜೆ, ದಂಪತಿ ಪೂಜೆ, ಮಹಾ ಮಂಗಳಾರತಿ, ನಾಗಸಂದರ್ಶನ, ಪಲ್ಲಪೂಜೆ, ಪ್ರಸಾದ ವಿತರಣೆ ನಡೆಯಿತು
ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ಮಧ್ಯಾಹ್ನ 12ರ ನಂತರ
ವಿವಿಧ ಭಜನಾ ತಂಡಗಳಿಂದ
ಭಜನಾ ಕಾರ್ಯಕ್ರಮ
ನೆಡೆಯಿತು.
ಸಂಜೆ ಹಾಲಿಟ್ಟು ಸೇವೆ, ಚತುಃಪವಿತ್ರ ನಾಗಮಂಡಲ ಸೇವೆಯನ್ನು ನೋಡಲು ರಾಜ್ಯದ ವಿವಿಧ ಕಡೆಯಿಂದ ಭಕ್ತರು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾದರು
ವಿದ್ಯುತ್ ದೀಪಲಂಕಾರ ಹೂವಿನ ಅಲಂಕಾರ ನಾಗಮಂಡಲಕ್ಕೆ ಮತ್ತಷ್ಟು ಮೆರುಗನ್ನು ನೀಡಿದೆ.
ದಿನಾಂಕ: 27-12-2024ರಂದು ಭವ್ಯ ಮೆರವಣಿಗೆ ಮೂಲಕ
ಹೊರೆಕಾಣಿಕೆಯನ್ನು ಸಾನಿಧ್ಯಕ್ಕೆ ಸಲ್ಲಿಸಲಾಯಿತು
ಈ ಸಂದರ್ಭದಲ್ಲಿ
ಕಲ್ತ್ತೋಡ್ಮಿ ಮನೆಯವರು
ಮತ್ತು
ಕುಟುಂಬಸ್ಥರು,
ಊರಿನ ಸಮಸ್ತ ಗ್ರಾಮಸ್ಥರು, ಹಿತೈಷಿಗಳು ಹಾಗೂ ಊರ-ಪರವೂರ
ಭಕ್ತ ಮಹನೀಯರು
ಉಪಸ್ಥಿತರಿದ್ದರು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…