ಬ್ರಹ್ಮಾವರ ವಿದ್ಯಾ ಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಹೊಸ ವರ್ಷ ಆಚರಣೆ



ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಾಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಹೊಸ ವರ್ಷ ಆಚರಣೆ ಅದ್ದೂರಿಯಾಗಿ ನಡೆಯಿತು.
ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಎಲ್ಲರ ಜೀವನದಲ್ಲೂ ಹೊಸತನ,ಹೊಸ ಹುಮ್ಮಸ್ಸು ತುಂಬಲಿ ಎಂದು ಶುಭಾಶಯ ಕೋರಿದರು.
ಕಾಲೇಜಿನ ನಿರ್ದೇಶಕಿ ಮಮತಾ,ಪ್ರಾಂಶುಪಾಲರಾದ ಡಾ ಸೀಮಾ.ಜಿ ಭಟ್, ಉಪಪ್ರಾಂಶುಪಾಲರಾದ ಸುಜಾತ,ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ರಾಝಿಕಾ ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ಉಪಸ್ಥಿತರಿದ್ದರು.ಕನ್ನಡ ಉಪನ್ಯಾಸಕಿ ಅನುಪಮ ಪಿ ಭಟ್ ಹೊಸ ವರ್ಷ ಆಚರಣೆಯ ಮಹತ್ವ,ಹಿನ್ನೆಲೆ ಕುರಿತು ಮಾತನಾಡಿದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಕುಮಾರಿ ಸ್ವಾತಿ ನಿರೂಪಿಸಿದರು.