ಕುಂದಾಪುರ:ಧಾರ್ಮಿಕ ಮುಖಂಡ ಸಮಾಜ ಸೇವಕರಾದ ದುಬೈ ಉದ್ಯಮಿ ಸೇನಾಪುರ ಹಾಡಿಮನೆ ಮಂಜುನಾಥ ವಿನಯ ಪೂಜಾರಿ ದಂಪತಿಗಳ ವತಿಯಿಂದ ಸೇನಾಪುರ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಯಕ್ಷಗಾನ ಬಯಲಾಟ ಹಾಗೂ ಮೇಳದ ಹಿರಿಯ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ ಬುಧವಾರ ನಡೆಯಿತು.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಕಲಾವಿದರನ್ನು ಸನ್ಮಾನಿಸಿ ಮಾತನಾಡಿ,ಆಧುನಿಕ ಜೀವನ ಶೈಲಿ ಪದ್ಧತಿ ನಡುವೆಯೂ ಯಕ್ಷಗಾನದ ನೆಲೆ ಗಟ್ಟು ಸುಭದ್ರವಾಗಿ ಉಳಿಯಲು ಜನರು ಯಕ್ಷಗಾನದ ಮೇಲಿಟ್ಟಿರುವ ದೈವಿಕ ಭಾವನೆಗಳೆ ಕಾರಣವಾಗಿದೆ ಎಂದು ಹೇಳಿದರು.
ಧರ್ಮಸ್ಥಳ ಮೇಳದ ಹಿರಿಯ ಕಲಾವಿದರಾದ ವಸಂತ ಹೆಗ್ಡೆ ಅವರು ಸನ್ಮಾನವನ್ನು ಸ್ವೀಕರಿಸಿ ಮಾತನಾಡಿ,ಕಲಾವಿದರನ್ನು ಗೌರವಿಸುವುದು ಎಂದರೆ ಕಲಾ ಮಾತೆಯನ್ನು ಗೌರವಿಸಿದಂತೆ ಎಂದು ಅಭಿಪ್ರಾಯಪಟ್ಟರು.
ಧಾರ್ಮಿಕ ಮುಖಂಡ ಶರತ್ ಕುಮಾರ್ ಶೆಟ್ಟಿ ಬೆಳ್ಳಾಡಿ,ವೆಂಕಟೇಶ ಮಂಜ,ಪಂಚಾಯಿತಿ ಸದಸ್ಯ ಸಂದೀಪ್ ಪೂಜಾರಿ,ಮೇಳದ ಮ್ಯಾನೇಜರ್ ಪುಷ್ಪರಾಜ್ ಶೆಟ್ಟಿ,sಮಂಜುನಾಥ ಪೂಜಾರಿ ಸೇನಾಪುರ ಉಪಸ್ಥಿತರಿದ್ದರು.ಮೇಳದ ವ್ಯವಸ್ಥಾಪಕ ಗಿರೀಶ ಹೆಗ್ಡೆ ಧರ್ಮಸ್ಥಳ ಹಾಗೂ ಕಲಾವಿದರಾದ ವಸಂತ ಗೌಡ ಕಾಯರ್ತಡ್ಕ,ಮಹೇಶ ಮಣಿಯಾಣಿ,ಚಿದಂಬರ ಬಾಬು,ಶಂಭಯ್ಯ ಕಂಜರ್ಪಣೆ,ಚಂದ್ರಶೇಖರ ಧರ್ಮಸ್ಥಳ,ಬಾಲಕೃಷ್ಣ ನಾಯ್ಕ ಬೆಳಂದಿ ಅವರನ್ನು ಸನ್ಮಾನಿಸಲಾಯಿತು.ನರ ದೌರ್ಬಲ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸುಮಿತ್ ಮರವಂತೆ ಅವರ ಚಿಕಿತ್ಸೆಗೆ 5 ಸಾವಿರ.ರೂ ಧನಸಹಾಯ ನೀಡಲಾಯಿತು.ವಿದ್ವಾನ್ ದಾಮೋದರ ಶರ್ಮಾ ನಿರೂಪಿಸಿದರು.ಶ್ರೀ ಧರ್ಮಸ್ಥಳ ಕ್ಷೇತ್ರಮಹಾತ್ಮೆ ಯಕ್ಷಗಾನ ಬಯಲಾಟ ಮತ್ತು ಅನ್ನದಾನ ಸೇವೆ ನಡೆಯಿತು.ನಾಡಗುಡ್ಡೆಯಂಗಡಿ ಪ್ರಸನ್ನ ಗಣಪತಿ ದೇವಸ್ಥಾನದಿಂದ ಸೇನಾಪುರ ಮಹಾವಿಷ್ಣು ದೇವಸ್ಥಾನದ ವರೆಗೆ ಮೇಳದ ಗಣಪತಿ ಮೂರ್ತಿಯನ್ನು ಭವ್ಯ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು.
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…