ಕುಂದಾಪುರ:ಅಧಿಕಾರ ಸ್ವೀಕಾರದ ವೇಳೆ ಪಂಚಾಯಿತಿ ಕಟ್ಟಡದ ಒಳಗಡೆ ಅನಧಿಕೃತವಾಗಿ ನಮಾಜ್ ಮಾಡಿರುವುದು ಅತ್ಯಂತ ಕಳವಳಕಾರಿ ಸಂಗತಿ ಆಗಿದ್ದು.ಅಧಿಕಾರಕ್ಕಾಗಿ ಸಮಾಜದ ಸ್ವಾಸ್ತ್ಯವನ್ನು ಕೇಡಿಸುವಂತ ಕಾರ್ಯಗಳಿಗೆ ಮುಂದಾಗಿರುವುದು ಸರಿ ಅಲ್ಲಾ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಗಂಗೊಳ್ಳಿ ಗ್ರಾಮ ಪಂಚಾಯಿತಿ ಅಧಿಕಾರ ಸ್ವೀಕಾರ ವೇಳೆಯಲ್ಲಿ ಮುಸ್ಲಿಂ ಸಮುದಾಯದ ಮೌಲಿಯಿಂದ ಪಂಚಾಯಿತಿ ಒಳಗಡೆ ಪ್ರಾರ್ಥನೆ ಮಾಡಿರುವುದನ್ನು ಖಂಡಿಸಿ ಹಿಂದು ಹಿತರಕ್ಷಣಾ ಸಮಿತಿ ಗಂಗೊಳ್ಳಿ ವತಿಯಿಂದ ಶುಕ್ರವಾರ ಗಂಗೊಳ್ಳಿ ಪಂಚಾಯಿತಿ ಎದುರುಗಡೆ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಬೈಂದೂರು ಬಿಜೆಪಿ ಮಂಡಳ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ತ್ರಾಸಿ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ,ಮಾಜಿ ತಾ.ಪಂ ಸದಸ್ಯ ಸುರೇಂದ್ರ ಖಾರ್ವಿ,ರವಿ ಹೊಸಪೇಟೆ,ನಾಗರಾಜ ಖಾರ್ವಿ ದಾಕುಹಿತ್ಲು,ಚಂದ್ರ ಖಾರ್ವಿ ಲೈಟ್ಹೌಸ್,ಗುರು ದಾಕುಹಿತ್ಲು,ವಾಸುದೇವ ಗಂಗೊಳ್ಳಿ,ಸದಾಶಿವ ಕಂಚುಗೋಡು,ಉಮಾನಾಥ ದೇವಾಡಿಗ ಉಪಸ್ಥಿತರಿದ್ದರು.ಹೆಚ್ಚಿನ ತನಿಖೆ ನಡೆಸುವಂತೆ ಗಂಗೊಳ್ಳಿ ಪಂಚಾಯಿತಿ ಪಿಡಿಒ ಹಾಗೂ ಕುಂದಾಪುರ ತಹಶೀಲ್ದಾರ್ಗೆ ಮನವಿಯನ್ನು ನೀಡಲಾಯಿತು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…