ಕುಂದಾಪುರ:ಸಾಮಾಜಿಕ ಹಾಗೂ ರಾಜಕೀಯ ರಂಗದಲ್ಲಿ ವಿಶೇಷವಾದ ರೀತಿಯಲ್ಲಿ ಸೇವೆಯನ್ನು ಮಾಡುತ್ತಿರುವ ಉದ್ಯಮಿ ಕೆ.ಎಸ್ ಪ್ರಮೋದ್ ರಾವ್ ಖಂಬದಕೋಣೆ ಅವರ ಮೊಮ್ಮಗ ಪ್ರಥಮ್ ರಾವ್ ಅವರ ಆರನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಬೈಂದೂರು ತಾಲೂಕಿನ ಖಂಬದಕೋಣೆ ಅಂಗನವಾಡಿ ಕೇಂದ್ರದ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಹೇರಂಜಾಲು ಗುಡೆ ದೇವಸ್ಥಾನ ಅಂಗನವಾಡಿ ಕೇಂದ್ರ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಮತ್ತು ಪಠ್ಯೇತರ ಚಟುವಟಿಕೆಗಳಿಗೆ
ಅನುಕೂಲಕರವಾಗಿರುವ ಕಿಟ್ ಮಂಗಳವಾರ ವಿತರಿಸಲಾಯಿತು.
ಪ್ರಥಮ್ ರಾವ್ ಹುಟ್ಟು ಹಬ್ಬದ ಅಂಗವಾಗಿ ಮಕ್ಕಳಿಗೆ ವಿಶೇಷ ಭೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು.
ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಡಾ.ಸುಬ್ರಹ್ಮಣ್ಯ ಭಟ್ ಅವರು ಮಾತನಾಡಿ,ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಶಾಲಾ ವಿದ್ಯಾರ್ಥಿಗಳಿಗೆ ಉಪಯೋಗವಾಗುವ ಉದ್ದೇಶದಿಂದ ಕೆ.ಎಸ್ ಪ್ರಮೋದ್ ರಾವ್ ಅವರು ತಮ್ಮ ಮೊಮ್ಮಗನ ಹುಟ್ಟು ಹಬ್ಬದ ಅಂಗವಾಗಿ ಮಕ್ಕಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪಠ್ಯ ಪುಸ್ತಕ ವಿತರಣೆ ಮಾಡಿರುವುದು ಬಹಳಷ್ಟು ಶ್ಲಾಘನೀಯ ಕೆಲಸವಾಗಿದೆ ಎಂದರು.ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವಲ್ಲಿ ಊರಿನ ಉದ್ಯಮಿಗಳು ಮುಂದೆ ಬರಬೇಕೆಂದು ಕೇಳಿಕೊಂಡರು.
ನಿವೃತ್ತ ಮುಖ್ಯೋಪಾಧ್ಯಾಯರಾದ ನಾಗರಾಜ ಮೆರ್ಟ್ ಮಾತನಾಡಿ,ದಾನಗಳಲ್ಲೆ ಶ್ರೇಷ್ಠವಾದದ್ದು ವಿದ್ಯಾದಾನ ವಾಗಿದೆ.ದಾನಿಗಳು ನೀಡಿದ ಪಠ್ಯ ಪುಸ್ತಕಗಳು ಉತ್ತಮ ರೀತಿಯಲ್ಲಿ ವಿದ್ಯಾರ್ಥಿಗಳು ಬಳಕೆ ಮಾಡಿ ಕೊಳ್ಳಬೇಕೆಂದರು.
ಉದ್ಯಮಿ ನಾಗರಾಜ ಶೆಟ್ಟಿ ನಾರ್ಕಳಿ ಗುಡಿಮನೆ ಮಾತನಾಡಿ,ಕೆ.ಎಸ್ ಪ್ರಮೋದಣ್ಣ ಅವರ ಅಭಿಮಾನಿಗಳ ಬಳಗದ ವತಿಯಿಂದ ವಿದ್ಯಾರ್ಥಿಗಳಿಗೆ ಬಳಕೆ ಆಗುವಂತಹ ಪುಸ್ತಕ ಮತ್ತು ಅದಕ್ಕೆ ಪೂರಕ ವಾಗಿರುವಂತಹ ಪೆನ್ನು ಇನ್ನಿತರ ವಸ್ತುಗಳನ್ನು ನೀಡಲಾಗಿದೆ.ಮುಂದಿನ ದಿನಗಳಲ್ಲಿ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳು ಅವರಿಂದ ನಡೆಯುವಂತೆ ಆಗಲಿ ಎಂದು ಶುಭಾಶಯ ಹಾರೈಸಿದರು.
ಉದ್ಯಮಿ ಬಾಲಕೃಷ್ಣ ಪ್ರಭು,ರಚನಾ ಶಿವಪ್ರಸಾದ್ ಪ್ರಭು,ಎಸ್ ಡಿಂಎಸಿ ಅಧ್ಯಕ್ಷ ಶಿವರಾಜ್, ಅಂಗನವಾಡಿ ಬಾಲ ವಿಕಾಸ ಸಮಿತಿ ಅಧ್ಯಕ್ಷ ಸುಶೀಲಾ ದೇವಾಡಿಗ,ಅಂಗನವಾಡಿ ಶಿಕ್ಷಕಿ ಗೌರಿ ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.ಶಿಕ್ಷಕಿ ಭಾರತಿ ಸ್ವಾಗತಿಸಿ ನಿರೂಪಿಸಿದರು.
ಸುಮಿತ್ರಾ ಆಚಾರಿ ಸಹಕರಿಸಿದರು.
ಕೆ.ಎಸ್ ಪ್ರಮೋದ್ ರಾವ್ ಖಂಬದಕೋಣೆ ಅವರು ಫೌಂಡರ್ ಎಂಜಿಎಂ ಅರ್ಥ ಮೂವರ್ಸ್ ನೊಯಿಡಾ, ಡೈರೆಕ್ಟರ್ ವಿಧಿ ಇನ್ಫ್ರಾ ಸೊಲ್ಯೂಷನ್ ಪ್ರ್ರೈವೆಟ್ ಲಿಮಿಟೆಡ್ ಹಾಗೂ ಆರ್.ಕೆ ಸಂಜೀವ ರಾವ್ ಸ್ಮಾರಕ ದತ್ತಿ, ಕಂಬದಕೋಣೆ ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿಗಳಾಗಿ ಹಾಗೂ ಸಂದೀಪನ್ ಆಂಗ್ಲ ಮಾಧ್ಯಮ ಶಾಲೆ ಸಂಸ್ಥಾಪಕರಲ್ಲಿ ಒಬ್ಬರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…