ಕುಂದಾಪುರ:ಸರ್ವಮಂಗಲೇ ಮೀನುಗಾರಿಕಾ ಪರ್ಷಿನ್ ಬೋಟ್ನಲ್ಲಿ ಜನವರಿ.02 ರಂದು ಮೀನುಗಾರಿಕೆ ಮಾಡುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿರುವ ಮೀನುಗಾರ ನಾರಾಯಣ ಮೊಗವೀರ (59) ಅವರ ಸುಳಿವು ಇನ್ನೂ ಕೂಡ ಪತ್ತೆಯಾಗಿಲ್ಲ.
ಸಮುದ್ರದಲ್ಲಿ ನಾಪತ್ತೆಯಾಗಿರುವ ತಮ್ಮ ಸಹೋದರನನ್ನು ಹುಡುಕಲು ಜಿಲ್ಲಾಡಳಿತ ಸಹಕಾರ ನೀಡಬೇಕೆಂದು ವಿಶ್ವನಾಥ ಗಂಗೊಳ್ಳಿ ಮನವಿ ಮಾಡಿದ್ದಾರೆ.
ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದ ನಿವಾಸಿ ನಾರಾಯಣ ಮೊಗವೀರ ಅವರು ತಮ್ಮ ಹೊಟ್ಟೆ ಪಾಡಿಗೆಂದು ಜನವರಿ.02 ರಂದು ಪರ್ಷಿನ್ ಬೋಟ್ ಮೂಲಕ ಮೀನುಗಾರಿಕೆಗೆ ತೆರಳಿದ್ದರು.ಮೀನುಗಾರಿಕೆ ಮಾಡುತ್ತಿದ್ದ ಸಮಯದಲ್ಲಿ ದುರಾದೃಷ್ಟ ವಶಾತ್ ನಾರಾಯಣ ಮೊಗವೀರ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದಾರೆ.
ಜನವರಿ.07 ರ ತನಕವೂ ಅವರ ಸುಳಿವು ಸಿಗದೆ ಇರುವುದರಿಂದ ಕುಟುಂಬ ಕಂಗಾಲಾಗಿದೆ.ಮುಳುಗು ತಜ್ಞ ದಿನೇಶ್ ಖಾರ್ವಿ ತಂಡ ಮತ್ತು ಗಂಗೊಳ್ಳಿ ಕರಾವಳಿ ಕಾವಲು ಪಡೆ ಪೆÇಲೀಸ್ರ ಸಹಕಾರ ದಿಂದ ಹಾಗೂ ಖಾಸಾಗಿ ಬೋಟ್ ಸಹಾಯದಿಂದ ಕಳೆದ ಆರು ದಿನಗಳಿಂದ ಸಮುದ್ರದಲ್ಲಿ ಹುಡುಕಾಟ ಮಾಡಿದ್ದರು ಮೀನುಗಾರ ನಾರಾಯಣ ಮೊಗವೀರ ಸುಳಿವು ಇಲ್ಲಿ ತನಕ ಸಿಕ್ಕಿಲ್ಲ.ಖಾಸಗಿ ಬೋಟ್ಗೆ ಡಿಸೇಲ್ ತುಂಬಿಸಿಕೊಂಡು ಸಮುದ್ರದಲ್ಲಿ ಹುಡುಕಾಟ ಮಾಡಲು ದಿನವೊಂದಕ್ಕೆ ಕನಿಷ್ಠ ಪಕ್ಷ 30 ಸಾವಿರ.ರೂ ತಗಲುತ್ತಿದೆ.ಬಡ ಮೀನುಗಾರ ಕುಟುಂಬ ಕಂಗಾಲಾಗಿದೆ.ತಮ್ಮ ಕುಟುಂಬದ ಸದಸ್ಯನನ್ನು ಹುಡುಕಲು ಜಿಲ್ಲಾಡಳಿತ ಹಾಗೂ ಸಂಘ ಸಂಸ್ಥೆಗಳು ಸಹಕಾರ ನೀಡಬೇಕೆಂದು ವಿನಂತಿಸಿಕೊಂಡಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…