ಕುಂದಾಪುರ

ಶ್ರೀ ಧರ್ಮಸ್ಥಳ ಮೇಳ ಯಕ್ಷಗಾನ ಬಯಲಾಟ ಸೇವೆ,ಭವ್ಯ ಮೆರವಣಿಗೆ

Share

ಕುಂದಾಪುರ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ವತಿಯಿಂದ ಕಾರುಣ್ಯಾಂಬುಧಿ ಶ್ರೀ ರಾಮ ಎಂಬ ಯಕ್ಷಗಾನ ಬಯಲಾಟ ಕಾರ್ಯಕ್ರಮ ಗೀತಾ ಗೋಕುಲ ಜಿ ಶೆಟ್ಟಿ ಉಪ್ಪುಂದ ಶಾಲೆಬಾಗಿಲು ಅವರ ಮೆನೆಯ ವಠಾರದಲ್ಲಿ ಸೋಮವಾರ ನಡೆಯಿತು.
ಉಪ್ಪುಂದ ವೆಂಕಟರಮಣ ದೇವಸ್ಥಾನದಿಂದ ಭವ್ಯ ಮೆರವಣಿಗೆ ಮೂಲಕ ಗಣಪತಿ ದೇವರನ್ನು ಭವ್ಯ ಮೆರವಣಿಗೆ ಮೂಲಕ ಚೌಕಿಗೆ ಕರೆತರಲಾಯಿತು.ಚಂಡೆ ವಾದನ ಕುಣಿತ ಭಜನೆ ಮೆರವಣಿಗೆಯ ಸೊಬಗನ್ನು ಹೆಚ್ಚಿಸಿತು.ಧಾರ್ಮಿಕ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೆ ರೀತಿಯ ಸೇವೆಯನ್ನು ಸಲ್ಲಿಸುತ್ತಿರುವ ಉದ್ಯಮಿ ಗೀತಾ ಗೋಕುಲ ಜಿ ಶೆಟ್ಟಿ ಅವರ ಹರಕೆ ಅಂಗವಾಗಿ ನಡೆದ ಧರ್ಮಸ್ಥಳ ಮೇಳದ ಯಕ್ಷಗಾನ ಕಾರ್ಯಕ್ರಮದ ಪ್ರಯುಕ್ತ ಅನ್ನಸಂತರ್ಪಣೆ ಸೇವೆ ಜರುಗಿತು.ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಅನ್ನ ಪ್ರಸಾದ ಸ್ವೀಕರಿಸಿದರು.ವಿಜೃಂಭಣೆಯಿಂದ ಯಕ್ಷಗಾನ ಕಾರ್ಯಕ್ರಮ ನಡೆಯಿತು.
ಗೀತಾ ಗೋಕುಲ ಜಿ ಶೆಟ್ಟಿ ಮಾತನಾಡಿ,ಹಲವಾರು ವರ್ಷಗಳ ಹಿಂದೆ ಹೆಳಿಕೊಂಡಿದ್ದ ಹರಕೆಯನ್ನು ನಾನಾ ಧಾರ್ಮಿಕ ಪೂಜಾ ಕಾರ್ಯಗಳೊಂದಿಗೆ ಶ್ರೀ ದೇವರ ಆರ್ಶೀವಾದದಿಂದ ಸಲ್ಲಿಸಲಾಗಿದೆ ಎಂದು ಹೇಳಿದರು.ಮೆರವಣಿಗೆ ಹಾಗೂ ಯಕ್ಷಗಾನ ವಿಜೃಂಭಣೆಯಿಂದ ನಡೆಯಲು ಸಹಕರಿಸಿದ ಎಲ್ಲರಿಗೂ ಧನ್ಯವಾದವನ್ನು ಸಲ್ಲಿಸಿದರು.
ಶ್ರೀ ಧರ್ಮಸ್ಥಳ ಮೇಳದ ವ್ಯವಸ್ಥಾಪಕರಾದ ಗಿರೀಶ್ ಹೆಗ್ಡೆ ಧರ್ಮಸ್ಥಳ ಅವರು ಮಾತನಾಡಿ,ಧರ್ಮಸ್ಥಳ ಮೇಳ ಸುಮಾರು 200 ವರ್ಷಗಳಷ್ಟು ಇತಿಹಾಸವನ್ನು ಹೊಂದಿರುವ ಮೇಳವಾಗಿದೆ.ಕ್ಷೇತ್ರದ ದಾಖಲೆಗಳ ಪ್ರಕಾರ 1812ನೇ ಇಸವಿಯಲ್ಲಿ ಮೇಳ ಆರಂಭಗೊಂಡಿದೆ ಎನ್ನುವ ಐತಿಹ್ಯ ಇದೆ.ಭಕ್ತಾಧಿಗಳ ಬೇಡಿಕೆ ಮೇರೆಗೆ ಯಕ್ಷಗಾನವನ್ನು ಬಯಲಾಟ ರೂಪದಲ್ಲಿ ಆಡಿ ತೋರಿಸಲಾಗುತ್ತದೆ ಎಂದರು.ಈ ಸಂದರ್ಭದಲ್ಲಿ ಸೇವಾಕರ್ತರ ಕುಟುಂಬಸ್ಥರು,ಸಂಬಂಧಿಗಳು,ಹಿತೈಷಿಗಳು,ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago