ಕುಂದಾಪುರ

ಅವೈಜ್ಞಾನಿಕ ಬುಲ್ಟ್ರೋಲ್,ಲೈಟ್ ಫಿಶಿಂಗ್ ನಿಷೇಧದ ಅನುಷ್ಠಾನ ಮಾಡುವಂತೆ ಆಗ್ರಹ,ಮೀನುಗಾರರಿಂದ ಹೆದ್ದಾರಿ ತಡೆ

Share

ಕುಂದಾಪುರ:ಬುಲ್ಟ್ರೋಲ್ ಹಾಗೂ ಲೈಟ್ ಫಿಶಿಂಗ್ ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಕ್ರಮಗಳನ್ನು ಕೈಗೊಳ್ಳಬೇಕೆಂದು ಕಳೆದ ಹತ್ತು ವರ್ಷಗಳಿಂದ ಸರಕಾರದ ಮುಂದೆ ಬೇಡಿಕೆಗಳನ್ನು ಇಡುತ್ತಾ ಬರಲಾಗುತ್ತಿದ್ದರೂ.ಬಂಡವಾಳ ಶಾಹಿಗಳ ಲಾಬಿಗೆ ಜನಪ್ರತಿನಿಧಿಗಳು,ಅಧಿಕಾರಿಗಳು ಒಳಗಾಗಿದ್ದರಿಂದ ನಮ್ಮ ಜತೆ ಚೆಲ್ಲಾಟ ಆಡುತ್ತಿದ್ದಾರೆ.ಕೋರ್ಟ್‍ನ ಆದೇಶದ ವಿರುದ್ಧವಾಗಿ ಅವೈಜ್ಞಾನಿಕ ಮೀನುಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದ್ದು.ಇಲ್ಲಿ ತನಕ ನಮಗೆ ನ್ಯಾಯ ಸಿಕ್ಕಿಲ್ಲ.ಕಡಲಿನಲ್ಲಿ ಮತ್ಸ್ಯಸಂಪತ್ತು ನಾಶವಾಗುವ ಹಂತಕ್ಕೆ ಬಂದು ತಲುಪಿದ್ದು.ಅವೈಜ್ಞಾನಿಕ ಮೀನುಗಾರಿಕೆ ನಿಷೇಧಕ್ಕೆ ಮುಂದಿನ ಹತ್ತು ದಿನಗಳ ಒಳಗೆ ಪರಿಣಾಮಕಾರಿಯಾದ ನಿಲುವನ್ನು ಕೈಗೊಳ್ಳದೆ ಹೋದರೆ ಜಿಲ್ಲಾಧಿಕಾರಿಗಳ ಕಛೇರಿ ಎದುರು ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗುವುದೆಂದು ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟ ಅಧ್ಯಕ್ಷ ನಾಗೇಶ್ ಖಾರ್ವಿ ಎಚ್ಚರಿಕೆ ನೀಡಿದರು.
ಅವೈಜ್ಞಾನಿಕ ಮೀನುಗಾರಿಕೆಯಾದ ಬೆಳಕು ಮತ್ತು ಬುಲ್ಟ್ರೋಲ್ ಮೀನುಗಾರಿಕೆ ನಿಷೇಧದ ಅನುಷ್ಠಾನವನ್ನು ಶೀಘೃವಾಗಿ ಜಾರಿಗೆ ತರುವಂತೆ ಹಾಗೂ ಸೀಮೆಎಣ್ಣೆ ದರ ಕಡಿಮೆ ಮಾಡುವುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡ ದೋಣಿ ಮೀನುಗಾರರ ಒಕ್ಕೂಟದ ವತಿಯಿಂದ ತ್ರಾಸಿ ಕಡಲ ತೀರದಲ್ಲಿ ಶುಕ್ರವಾರ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ಮತ್ಸ್ಯ ಸಂಪತ್ತು ನಾಶವಾಗುತ್ತಿದ್ದರ ಪರಿಣಾಮ ಮೇ ತಿಂಗಳಿನಲ್ಲಿ ನಿಲುಗಡೆ ಆಗುತ್ತಿದ್ದ ಮೀನುಗಾರಿಕೆ ಉದ್ಯೋಗ ನವೆಂಬರ್ ತಿಂಗಳಿನಲ್ಲೆ ನಿಲ್ಲಿಸುವ ಹಂತಕ್ಕೆ ಬಂದು ತಲುಪಿದೆ.ಇದೆ ರೀತಿ ಮುಂದುವರೆದರೆ ಬಡ ಮೀನುಗಾರರ ಜೀವನ ಬೀದಿಗೆ ಬರಲಿದ್ದು ಸರಕಾರಗಳೆ ನೆರ ಹೋಣೆ ಆಗಲಿದೆ ಎಂದು ದೂರಿದರು.ಕರಾವಳಿ ಜಿಲ್ಲೆಯ 19 ಕ್ಷೇತ್ರದಲ್ಲಿನ 11 ಕ್ಷೇತ್ರಗಳಲ್ಲಿ ಮೀನುಗಾರರೆ ಪ್ರಾಭಲ್ಯವನ್ನು ಹೊಂದಿದ್ದು.ಮುಂದಿನ ದಿನಗಳಲ್ಲಿ ರಾಜಕೀಯ ಸನ್ನಿವೇಶದ ಮೂಲಕ ಉತ್ತರ ನೀಡಲಾಗುವುದು ಎಂದು ಹೇಳಿದರು.
ದ.ಕ ಜಿಲ್ಲಾ ಮೀನುಗಾರರ ಒಕ್ಕೂಟ ಅಧ್ಯಕ್ಷ ವಸಂತ ಸುವರ್ಣ ಮಾತನಾಡಿ,ಈಗಿನ ಬಂಡವಾಳ ಶಾಯಿಗಳು ಹಾಕಿರುವ ಬೆಳಕು ಮತ್ತು ಬುಲ್ಟ್ರೋಲ್ ಮೀನುಗಾರಿಕೆ ಯಿಂದ ಮೀನಿನ ಸಂಪತ್ತು ನಾಶವಾಗಲಿದೆ ಎಂದು ತಮ್ಮ ಆತಂಕವನ್ನು ಹೊರಹಾಕಿದರು.ಕೋರ್ಟ್‍ನ ಆದೇಶ ಪಾಲಿಸಿ ನಮಗೆ ನ್ಯಾಯವನ್ನು ದೊರಕಿಸಿ ಕೊಡಿ ಎಂದರು.
ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟದ ಗೌರವ ಸಲಹೆಗಾರ ನವಿನ್ ಚಂದ್ರ ಉಪ್ಪುಂದ ಮಾತನಾಡಿ,ಕೇರಳ ರಾಜ್ಯದಲ್ಲಿ ಅವೈಜ್ಞಾನಿಕ ಮೀನುಗಾರಿಕೆಗೆ ಅವಕಾಶವಿಲ್ಲ.ಗೋವಾ ರಾಜ್ಯ ಕೇಂದ್ರ ಸರಕಾರದ ಕಾನೂನನ್ನು ಪಾಲನೆ ಮಾಡುತ್ತಿದೆ.ಕಾನೂನನ್ನು ಉಲ್ಲಂಘಿಸುವ ಮೀನುಗಾರರ ವಿರುದ್ಧ ಕನಿಷ್ಠ 10 ಲಕ್ಷ.ರೂ ದಂಡವನ್ನು ವಿಧಿಸುವ ನಿಯಮ ಜಾರಿಯಲ್ಲಿದೆ.ಅಂತಹ ಗಂಡುಗಾರಿಕೆ ಎದೆಯನ್ನು ಕರ್ನಾಟ ಸರಕಾರ ತೋರಿಸಬೇಕಿದೆ.ನಿಷೇಧದ ಕಾನೂನುನನ್ನು ಅನುಷ್ಠಾನ ಮಾಡುವಲ್ಲಿ ಸರಕಾರ ಹಿಂದೇಟು ಹಾಕಿದರೆ ರಾಜ್ಯಪಾಲರನ್ನು ಭೇಟಿ ಆಗಿ.ಕೋರ್ಟ್ ಮೊರೆ ಹೊಗಲಾಗುವುದು ಎಂದು ಹೇಳಿದರು.
ಕೃಷಿ ತೋಟಗಾರಿಕೆ ವಳನಾಡು ಮೀನುಗಾರಿಕೆಗೆ ನೀಡುವ ಸವಲತ್ತುಗಳನ್ನು ನಾಡದೋಣಿ ಮೀನುಗಾರರಿಗೂ ನೀಡುವುದರ ಮೂಲಕ ತಲೆ ತಲಾಂತರದಿಂದ ನಡೆದು ಬಂದಂತಹ ಮೂಲ ಮೀನುಗಾರಿಕೆ ಉಳಿಸಲು ಸರಕಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಬೈಂದೂರು ಕ್ಷೇತ್ರದ ಶಾಸಕ ಗಂಟಿಹೊಳೆ,ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ,ಮಾಜಿ ಜಿ.ಪಂ ಅಧ್ಯಕ್ಷ ರಾಜು ಎಸ್ ಪೂಜಾರಿ,ಮದನ್ ಕುಮಾರ್,ಸೋಮನಾಥ ಖಾರ್ವಿ,ಮೀನುಗಾರಿಕಾ ಇಲಾಖೆ ಜಂಟಿ ನಿರ್ದೇಶಕ ವಿವೇಕ,ಡಿಡಿ ಅಂಜನಾದೇವಿ ಮತ್ತು ಉತ್ತರ ಕನ್ನಡ ಜಿಲ್ಲೆ ಮೀನುಗಾರಿಕೆ ಇಲಾಖೆ ಅಧಿಕಾರಿಗಳು,ಉಡುಪಿ,ದ.ಕ ಮತ್ತು ಉತ್ತರ ಕನ್ನಡ ಜಿಲ್ಲೆಯ ಮೀನುಗಾರ ಮುಖಂಡರುಗಳು,ಬೈಂದೂರು,ಕುಂದಾಪುರ ತಾಲೂಕು ಹಾಗೂ ಭಟ್ಕಳ ಭಾಗದ ಮೀನುಗಾರರು ಉಪಸ್ಥಿತರಿದ್ದರು.ಮಹಿಳಾ ಮೀನುಗಾರರು ಪ್ರತಿಭಟನೆಯಲ್ಲಿ ಭಾಗವಹಿಸುವುದರ ಮೂಲಕ ಬೆಂಬಲ ಸೂಚಿಸಿದರು.ಡಿವೈಎಸ್‍ಪಿ ಬೆಳ್ಳಿಯಪ್ಪಿ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ಕೈಗೊಳ್ಳಲಾಗಿತ್ತು.ಬೈಂದೂರು ಸರ್ಕಲ್ ಸವಿತ್ರ ತೇಜ,ಗಂಗೊಳ್ಳಿ ಠಾಣೆ ಹರೀಶ್ ಮತ್ತು ಬಸವರಾಜ ಕನಶೆಟ್ಟಿ,ಬೈಂದೂರು,ಶಂಕರನಾರಾಯಣ,ಕೊಲ್ಲೂರು,ಕುಂದಾಪುರ ಠಾಣೆ ಪಿಎಸ್‍ಐಗಳು ಹಾಗೂ ಪೆÇಲೀಸ್ ಮತ್ತು ಆರೋಗ್ಯ ಸಿಬ್ಬಂದಿಗಳು,ಆಶಾ ಕಾರ್ಯಕರ್ತೆಯರು ಹಾಜರಿದ್ದರು.ನೂರಾರು ನಾಡದೋಣಿಗಳನ್ನು ತ್ರಾಸಿ ಕಡಲ ತೀರದಲ್ಲಿ ಲಂಗರು ಹಾಕಿ ಪ್ರತಿಭಟನೆ ಮಾಡಲಾಯಿತು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

4 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago