ಕುಂದಾಪುರ

ನಾಡದೋಣಿ ಮೀನುಗಾರರಿಂದ ರಾಷ್ಟ್ರೀಯ ಹೆದ್ದಾರಿ ತಡೆ

Share

ಕುಂದಾಪುರ:ಬುಲ್ಟ್ರೋಲ್ ಮತ್ತು ಲೈಟ್ ಫಿಶಿಂಗ್ ಮೀನುಗಾರಿಕೆ ವಿರೋಧಿಸಿ ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡ ದೋಣಿ ಮೀನುಗಾರರ ಒಕ್ಕೂಟದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆಯನ್ನು ತ್ರಾಸಿಯಲ್ಲಿ ಶುಕ್ರವಾರ ಮಾಡಲಾಯಿತು.
ಮೀನುಗಾರ ಮುಖಂಡ ಮದನ್ ಕುಮಾರ್ ಉಪ್ಪುಂದ ಮಾತನಾಡಿ,12 ರಿಂದ 240 ನಾಟಿಕಲ್ ದೂರದ ತನಕ ಅವೈಜ್ಞಾನಿಕ ಮೀನುಗಾರಿಕೆಯನ್ನು ಕೇಂದ್ರ ಸರಕಾರ ನಿಷೇಧ ಮಾಡಿದೆ.ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದರು ರಾಜ್ಯದಲ್ಲಿ ಅವೈಜ್ಞಾನಿಕ ಮೀನುಗಾರಿಕೆ ಇನ್ನೂ ನಿಷೇಧಗೊಂಡಿಲ್ಲ.ಸಾಂಪ್ರದಾಯಿಕ ಮೀನುಗಾರರ ಜೀವನದ ದೃಷ್ಟಿಯಿಂದ ಅವೈಜ್ಞಾನಿಕ ಮೀನುಗಾರಿಕೆ ನಿಷೇಧಕ್ಕೆ ಸರಕಾರ ಕೂಡಲೇ ಕಠಿಣ ಕ್ರಮಕೈಗೊಳ್ಳ ಬೇಕು ಎಂದು ಹೇಳಿದರು.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ,ಮೀನುಗಾರರ ಸಮಸ್ಯೆ ಕುರಿತು ಕಳೆದ ಒಂದುವರೆ ವರ್ಷದಿಂದ ಸರಕಾರದ ಗಮನ ಸೆಳೆಯುತ್ತಾ ಬರಲಾಗುತ್ತಿದೆ.ಸಮಸ್ಯೆಯ ಗಂಭೀರತೆಯನ್ನು ತೋರ್ಪಡಿಸಲು ಪ್ರತಿಭಟನೆಗಳು ಅಗತ್ಯವಾಗಿದ್ದು.ಎಲ್ಲಾ ರೀತಿಯ ನೆರವನ್ನು ನೀಡಲು ಪ್ರಯತ್ನಿಸಲಾಗುವುದು ಎಂದರು.
ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ,ಮುಖ್ಯ ಮಂತ್ರಿಗಳು ಹಾಗೂ ಸಚಿವರನ್ನು ಒಟ್ಟಾಗಿ ಭೇಟಿ ಮಾಡಿ ಮೀನುಗಾರರ ಸಮಸ್ಯೆಯನ್ನು ಸರಕಾರಕ್ಕೆ ಮುಟ್ಟಿಸುವ ಕೆಲಸ ಮಾಡುತ್ತೇನೆ ಎಂದು ಭರವಸೆಯನ್ನು ನೀಡಿದರು.
ಮೀನುಗಾರ ಮುಖಂಡ ಸೋಮನಾಥ ಮೊಗವೀರ ಮಾತನಾಡಿ,ಸಣ್ಣ ಸಣ್ಣ ಮೀನುಗಾರರ ಬದುಕನ್ನು ಸಂರಕ್ಷಣೆ ಮಾಡುವಲ್ಲಿ ಸರಕಾರ ಮುಂದಾಗಬೇಕು ಎಂದರು.
ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರ ಒಕ್ಕೂಟ ಅಧಕ್ಷ ನಾಗೇಶ ಖಾರ್ವಿ,ಗೌರವ ಸಲಹೆಗಾರ ನವಿನ್ ಚಂದ್ರ ಉಪ್ಪುಂದಮೀನುಗಾರ ಮುಖಂಡರಾದ ವಸಂತ ಸುವರ್ಣ,ಯಾದವ್ ಮಲ್ಪೆ,ಬಾಳ ಮಲ್ಪೆ,ಕೃಷ್ಣ ಮಲ್ಪೆ,ಯಶವಂತ ಗಂಗೊಳ್ಳಿ,ನಾಗೇಶ ಖಾರ್ವಿ ಉಪ್ಪುಂದ,ಸುಧಾಕರ್,ತಿಮ್ಮಪ್ಪ ಖಾರ್ವಿ,ಹರಿಶ್ಚಂದ್ರ,ಮಂಜುನಾಥ,ಅಶ್ವಥ್ ಕಾಂಚನ್ ಮಂಗಳೂರು,ಕೃಷ್ಣ ಮುರುಡೇಶ್ವರ,ಹರೀಶ ಮೊಗವೀರ,ಬಲೀಂದ್ರ,ಅಜೀಜ್ ಗಂಗೊಳ್ಳಿ,ಸುರೇಶ ಮರವಂತೆ,ವೆಂಕರಮಣ ಖಾರ್ವಿ ಉಪ್ಪುಂದ,ಮಹೇಶ ನಾವುಂದ ಹಾಗೂ ಮೀನುಗಾರರು ಉಪಸ್ಥಿತರಿದ್ದರು.ಪೊಲುಸ್ ಇಲಾಖೆ ವತಿಯಿಂದ ಬಿಗಿ ಬಂದೋ ಬಸ್ತ್ ಕೈಗೊಳ್ಳಲಾಗಿತ್ತು
.

Advertisement

Share
Team Kundapur Times

Recent Posts

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

7 days ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago