ಕುಂದಾಪುರ:ಬುಲ್ಟ್ರೋಲ್ ಮತ್ತು ಲೈಟ್ ಫಿಶಿಂಗ್ ಮೀನುಗಾರಿಕೆ ವಿರೋಧಿಸಿ ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡ ದೋಣಿ ಮೀನುಗಾರರ ಒಕ್ಕೂಟದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆಯನ್ನು ತ್ರಾಸಿಯಲ್ಲಿ ಶುಕ್ರವಾರ ಮಾಡಲಾಯಿತು.
ಮೀನುಗಾರ ಮುಖಂಡ ಮದನ್ ಕುಮಾರ್ ಉಪ್ಪುಂದ ಮಾತನಾಡಿ,12 ರಿಂದ 240 ನಾಟಿಕಲ್ ದೂರದ ತನಕ ಅವೈಜ್ಞಾನಿಕ ಮೀನುಗಾರಿಕೆಯನ್ನು ಕೇಂದ್ರ ಸರಕಾರ ನಿಷೇಧ ಮಾಡಿದೆ.ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದರು ರಾಜ್ಯದಲ್ಲಿ ಅವೈಜ್ಞಾನಿಕ ಮೀನುಗಾರಿಕೆ ಇನ್ನೂ ನಿಷೇಧಗೊಂಡಿಲ್ಲ.ಸಾಂಪ್ರದಾಯಿಕ ಮೀನುಗಾರರ ಜೀವನದ ದೃಷ್ಟಿಯಿಂದ ಅವೈಜ್ಞಾನಿಕ ಮೀನುಗಾರಿಕೆ ನಿಷೇಧಕ್ಕೆ ಸರಕಾರ ಕೂಡಲೇ ಕಠಿಣ ಕ್ರಮಕೈಗೊಳ್ಳ ಬೇಕು ಎಂದು ಹೇಳಿದರು.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ,ಮೀನುಗಾರರ ಸಮಸ್ಯೆ ಕುರಿತು ಕಳೆದ ಒಂದುವರೆ ವರ್ಷದಿಂದ ಸರಕಾರದ ಗಮನ ಸೆಳೆಯುತ್ತಾ ಬರಲಾಗುತ್ತಿದೆ.ಸಮಸ್ಯೆಯ ಗಂಭೀರತೆಯನ್ನು ತೋರ್ಪಡಿಸಲು ಪ್ರತಿಭಟನೆಗಳು ಅಗತ್ಯವಾಗಿದ್ದು.ಎಲ್ಲಾ ರೀತಿಯ ನೆರವನ್ನು ನೀಡಲು ಪ್ರಯತ್ನಿಸಲಾಗುವುದು ಎಂದರು.
ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ,ಮುಖ್ಯ ಮಂತ್ರಿಗಳು ಹಾಗೂ ಸಚಿವರನ್ನು ಒಟ್ಟಾಗಿ ಭೇಟಿ ಮಾಡಿ ಮೀನುಗಾರರ ಸಮಸ್ಯೆಯನ್ನು ಸರಕಾರಕ್ಕೆ ಮುಟ್ಟಿಸುವ ಕೆಲಸ ಮಾಡುತ್ತೇನೆ ಎಂದು ಭರವಸೆಯನ್ನು ನೀಡಿದರು.
ಮೀನುಗಾರ ಮುಖಂಡ ಸೋಮನಾಥ ಮೊಗವೀರ ಮಾತನಾಡಿ,ಸಣ್ಣ ಸಣ್ಣ ಮೀನುಗಾರರ ಬದುಕನ್ನು ಸಂರಕ್ಷಣೆ ಮಾಡುವಲ್ಲಿ ಸರಕಾರ ಮುಂದಾಗಬೇಕು ಎಂದರು.
ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರ ಒಕ್ಕೂಟ ಅಧಕ್ಷ ನಾಗೇಶ ಖಾರ್ವಿ,ಗೌರವ ಸಲಹೆಗಾರ ನವಿನ್ ಚಂದ್ರ ಉಪ್ಪುಂದಮೀನುಗಾರ ಮುಖಂಡರಾದ ವಸಂತ ಸುವರ್ಣ,ಯಾದವ್ ಮಲ್ಪೆ,ಬಾಳ ಮಲ್ಪೆ,ಕೃಷ್ಣ ಮಲ್ಪೆ,ಯಶವಂತ ಗಂಗೊಳ್ಳಿ,ನಾಗೇಶ ಖಾರ್ವಿ ಉಪ್ಪುಂದ,ಸುಧಾಕರ್,ತಿಮ್ಮಪ್ಪ ಖಾರ್ವಿ,ಹರಿಶ್ಚಂದ್ರ,ಮಂಜುನಾಥ,ಅಶ್ವಥ್ ಕಾಂಚನ್ ಮಂಗಳೂರು,ಕೃಷ್ಣ ಮುರುಡೇಶ್ವರ,ಹರೀಶ ಮೊಗವೀರ,ಬಲೀಂದ್ರ,ಅಜೀಜ್ ಗಂಗೊಳ್ಳಿ,ಸುರೇಶ ಮರವಂತೆ,ವೆಂಕರಮಣ ಖಾರ್ವಿ ಉಪ್ಪುಂದ,ಮಹೇಶ ನಾವುಂದ ಹಾಗೂ ಮೀನುಗಾರರು ಉಪಸ್ಥಿತರಿದ್ದರು.ಪೊಲುಸ್ ಇಲಾಖೆ ವತಿಯಿಂದ ಬಿಗಿ ಬಂದೋ ಬಸ್ತ್ ಕೈಗೊಳ್ಳಲಾಗಿತ್ತು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…