ಕುಂದಾಪುರ

ನಾಡದೋಣಿ ಮೀನುಗಾರರಿಂದ ರಾಷ್ಟ್ರೀಯ ಹೆದ್ದಾರಿ ತಡೆ

Share

Advertisement
Advertisement
Advertisement

ಕುಂದಾಪುರ:ಬುಲ್ಟ್ರೋಲ್ ಮತ್ತು ಲೈಟ್ ಫಿಶಿಂಗ್ ಮೀನುಗಾರಿಕೆ ವಿರೋಧಿಸಿ ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡ ದೋಣಿ ಮೀನುಗಾರರ ಒಕ್ಕೂಟದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆಯನ್ನು ತ್ರಾಸಿಯಲ್ಲಿ ಶುಕ್ರವಾರ ಮಾಡಲಾಯಿತು.
ಮೀನುಗಾರ ಮುಖಂಡ ಮದನ್ ಕುಮಾರ್ ಉಪ್ಪುಂದ ಮಾತನಾಡಿ,12 ರಿಂದ 240 ನಾಟಿಕಲ್ ದೂರದ ತನಕ ಅವೈಜ್ಞಾನಿಕ ಮೀನುಗಾರಿಕೆಯನ್ನು ಕೇಂದ್ರ ಸರಕಾರ ನಿಷೇಧ ಮಾಡಿದೆ.ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದರು ರಾಜ್ಯದಲ್ಲಿ ಅವೈಜ್ಞಾನಿಕ ಮೀನುಗಾರಿಕೆ ಇನ್ನೂ ನಿಷೇಧಗೊಂಡಿಲ್ಲ.ಸಾಂಪ್ರದಾಯಿಕ ಮೀನುಗಾರರ ಜೀವನದ ದೃಷ್ಟಿಯಿಂದ ಅವೈಜ್ಞಾನಿಕ ಮೀನುಗಾರಿಕೆ ನಿಷೇಧಕ್ಕೆ ಸರಕಾರ ಕೂಡಲೇ ಕಠಿಣ ಕ್ರಮಕೈಗೊಳ್ಳ ಬೇಕು ಎಂದು ಹೇಳಿದರು.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ,ಮೀನುಗಾರರ ಸಮಸ್ಯೆ ಕುರಿತು ಕಳೆದ ಒಂದುವರೆ ವರ್ಷದಿಂದ ಸರಕಾರದ ಗಮನ ಸೆಳೆಯುತ್ತಾ ಬರಲಾಗುತ್ತಿದೆ.ಸಮಸ್ಯೆಯ ಗಂಭೀರತೆಯನ್ನು ತೋರ್ಪಡಿಸಲು ಪ್ರತಿಭಟನೆಗಳು ಅಗತ್ಯವಾಗಿದ್ದು.ಎಲ್ಲಾ ರೀತಿಯ ನೆರವನ್ನು ನೀಡಲು ಪ್ರಯತ್ನಿಸಲಾಗುವುದು ಎಂದರು.
ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ,ಮುಖ್ಯ ಮಂತ್ರಿಗಳು ಹಾಗೂ ಸಚಿವರನ್ನು ಒಟ್ಟಾಗಿ ಭೇಟಿ ಮಾಡಿ ಮೀನುಗಾರರ ಸಮಸ್ಯೆಯನ್ನು ಸರಕಾರಕ್ಕೆ ಮುಟ್ಟಿಸುವ ಕೆಲಸ ಮಾಡುತ್ತೇನೆ ಎಂದು ಭರವಸೆಯನ್ನು ನೀಡಿದರು.
ಮೀನುಗಾರ ಮುಖಂಡ ಸೋಮನಾಥ ಮೊಗವೀರ ಮಾತನಾಡಿ,ಸಣ್ಣ ಸಣ್ಣ ಮೀನುಗಾರರ ಬದುಕನ್ನು ಸಂರಕ್ಷಣೆ ಮಾಡುವಲ್ಲಿ ಸರಕಾರ ಮುಂದಾಗಬೇಕು ಎಂದರು.
ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರ ಒಕ್ಕೂಟ ಅಧಕ್ಷ ನಾಗೇಶ ಖಾರ್ವಿ,ಗೌರವ ಸಲಹೆಗಾರ ನವಿನ್ ಚಂದ್ರ ಉಪ್ಪುಂದಮೀನುಗಾರ ಮುಖಂಡರಾದ ವಸಂತ ಸುವರ್ಣ,ಯಾದವ್ ಮಲ್ಪೆ,ಬಾಳ ಮಲ್ಪೆ,ಕೃಷ್ಣ ಮಲ್ಪೆ,ಯಶವಂತ ಗಂಗೊಳ್ಳಿ,ನಾಗೇಶ ಖಾರ್ವಿ ಉಪ್ಪುಂದ,ಸುಧಾಕರ್,ತಿಮ್ಮಪ್ಪ ಖಾರ್ವಿ,ಹರಿಶ್ಚಂದ್ರ,ಮಂಜುನಾಥ,ಅಶ್ವಥ್ ಕಾಂಚನ್ ಮಂಗಳೂರು,ಕೃಷ್ಣ ಮುರುಡೇಶ್ವರ,ಹರೀಶ ಮೊಗವೀರ,ಬಲೀಂದ್ರ,ಅಜೀಜ್ ಗಂಗೊಳ್ಳಿ,ಸುರೇಶ ಮರವಂತೆ,ವೆಂಕರಮಣ ಖಾರ್ವಿ ಉಪ್ಪುಂದ,ಮಹೇಶ ನಾವುಂದ ಹಾಗೂ ಮೀನುಗಾರರು ಉಪಸ್ಥಿತರಿದ್ದರು.ಪೊಲುಸ್ ಇಲಾಖೆ ವತಿಯಿಂದ ಬಿಗಿ ಬಂದೋ ಬಸ್ತ್ ಕೈಗೊಳ್ಳಲಾಗಿತ್ತು
.

Advertisement
Advertisement
Advertisement

Share
Team Kundapur Times

Recent Posts

ಶ್ರೀ ಕೃಷ್ಣಾನಂದತೀರ್ಥಮಹಾಸ್ವಾಮಿ ಗೋಪಾಲಕೃಷ್ಣ ದೇವಸ್ಥಾನಕ್ಕೆ ಭೇಟಿ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…

2 weeks ago

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ “ಐಕ್ಯಂ” 2k25 ಕಾರ್ಯಕ್ರಮ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…

2 weeks ago

ಯುವಕ ಮಂಡಲ ತ್ರಾಸಿ 59ನೇ ವಾರ್ಷಿಕೋತ್ಸವ ಸಂಭ್ರಮ

ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…

2 weeks ago

ಕೃಷ್ಣ ಮಠ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ

ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…

3 weeks ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕ ಕ್ರೀಡಾಕೂಟ 2024-2025

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…

3 weeks ago

ಸ್ಕೈಡೈನಿಂಗ್ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಸಚಿವ

ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…

3 weeks ago