ಕುಂದಾಪುರ

ಮರವಂತೆ ಹೊರ ಬಂದರು ಎರಡನೇ ಹಂತದ ಕಾಮಗಾರಿಗೆ ಚಾಲನೆ

Share

ಕುಂದಾಪುರ:ಮರವಂತೆಯಲ್ಲಿ ಕಳೆದ ಎಂಟು ವರ್ಷಗಳಿಂದ ಬ್ರೆಕ್ ವಾಟರ್ ಕೆಲಸ ಸಿಆರ್‍ಝಡ್ ನಿಮಯ ಹಾಗೂ ಬೇರೆ ಬೇರೆ ಕಾರಣಗಳಿಂದ ನೆನೆಗುದ್ದಿಗೆ ಬಿದ್ದಿದ್ದು.ನಿಂತು ಹೋಗುವ ಸ್ಥಿತಿಯಲ್ಲಿದ್ದ ಕಾಮಗಾರಿಗೆ ಮರು ಜೀವ ನೀಡುವ ಕೆಲಸ ಮಾಡಲಾಗಿದೆ.ಸುಮಾರು 80 ಕೋಟಿ.ರೂ ವೆಚ್ಚದಲ್ಲಿ ಬಂದರಿನ ಎರಡನೇ ಹಂತದ ಕಾಮಗಾರಿ ಕೆಲಸ ಕೂಡಲೆ ಆರಂಭಗೊಳ್ಳಲಿದ್ದು.ಪೂರ್ತಿ ಹಣ ರಾಜ್ಯ ಸರಕಾರವೆ ಭರಿಸಲಿದೆ ಎಂದು ಬಂದರು ಮತ್ತು ಮೀನುಗಾರಿಕಾ ಸಚಿವ ಮಂಕಾಳ.ಎಸ್ ವೈದ್ಯ ಹೇಳಿದರು.
ಬೈಂದೂರು ತಾಲೂಕಿನ ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗಾರಿಗೆ ಮಂಗಳವಾರ ಮರವಂತೆಯಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
ನಮ್ಮ ಸರಕಾರ ಆಡಳಿತಕ್ಕೆ ಬಂದ ನಂತರ ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿರುವ ಕಾಮಗಾರಿಗಳನ್ನು ಕೈಬೀಡುವ ನಿರ್ಧಾರ ತೆಗೆದುಕೊಂಡಿದ್ದರು.ಮೀನುಗಾರಿಕೆ ಇಲಾಖೆಯಲ್ಲಿನ ಯಾವುದೆ ಕಾಮಗಾರಿಗಳನ್ನು ಹಿಂದಕ್ಕೆ ತೆಗೆದುಕೊಳ್ಳಲು ಬೀಡದೆ ಇದ್ದಿದ್ದರಿಂದ ಮರವಂತೆ ಬಂದರಿನ ಎರಡನೇ ಹಂತದ ಕಾಮಗಾರಿಗೆ ಚಾಲನೆಯನ್ನು ನೀಡಲು ಸಾಧ್ಯವಾಗಿದೆ.ಜ.20 ರ ಒಳಗೆ ಬಂದರು ಕಾಮಗಾರಿಯನ್ನು ಆರಂಭಿಸದೆ ಇದ್ದರೆ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸೂಚಿಸಲಾಗುವುದು ಎಂದು ಎಚ್ಚರಿಸಿದರು.ಬಂದರಿನ ಅಭಿವೃದ್ಧಿ ಕಾಮಗಾರಿಗೆ ಹೆಚ್ಚುವರಿ ಅನುದಾನ ನೀಡುವಂತೆ ಮೀನುಗಾರರು ಈಗಾಗಲೇ ಮನವಿಯನ್ನು ನೀಡಿದ್ದು ಅದಕ್ಕೆ ಪೂರಕವಾಗಿ ಅಂದಾಜು ಪಟ್ಟಿಯನ್ನು ಸಿದ್ಧಪಡಿಸಿ ನೋಡಿಕೊಂಡು ಮುಂದಿನ ಕೆಲಸವನ್ನು ಮಾಡಿಕೊಡಲಾಗುವುದು.ಯಾವುದೆ ಕಾರಣಕ್ಕೂ ಮೀನುಗಾರರಿಗೆ ತೊಂದರೆ ಆಗಲು ಬೀಡುವುದಿಲ್ಲ ಎಂದರು.
ಸಿಆರ್‍ಝಡ್ ಸರಳೀಕರಣ
ಕಾರವಾರದ ದಿಂದ ಮಂಗಳೂರು ತನಕ 320 ಕಿ.ಮೀ ಕರಾವಳಿ ತೀರದಲ್ಲಿ ಸಿಆರ್‍ಝಡ್ ಕ್ಲಿಯರೆನ್ಸ್ ಮಾಡಲಾಗಿದೆ.ಮುಂದಿನ ದಿನಗಳಲ್ಲಿ ಯಾವುದೆ ರೀತಿಯ ಅಡ್ಡಿ ಆತಂಕವಿಲ್ಲದೆ ಕೆಲಸ ಕಾರ್ಯಗಳನ್ನು ತ್ವರಿತಗತಿಯಲ್ಲಿ ಮಾಡಲು ಅನುಕೂಲವಾಗಲಿದೆ.ಮೀನುಗಾರಿಕಾ ವಲಯಕ್ಕೆ ಆರ್ಥಿಕ ಕೊರತೆ ಆಗಬಾರದು ಎನ್ನುವ ಉದ್ದೆಶದಿಂದ ಗಂಗೊಳ್ಳಿ ಬಂದರು ಅಭಿವೃದ್ಧಿಗೆ ಕ್ಯಾಬಿನೆಟ್‍ನಲ್ಲಿ 22 ಕೋಟಿ.ರೂ ಮಂಜೂರಾತಿ ನೀಡಲಾಗಿದ್ದು ಕೆಲಸ ಆರಂಭಗೊಳ್ಳಲಿದೆ.ಹಲವಾರು ವರ್ಷಗಳಿಂದ ಬೇಡಿಕೆಯಲ್ಲಿದ್ದ ಸೀ ಆಂಬ್ಯುಲೆನ್ಸ್‍ಗೆ ಟೆಂಡರ್ ಕೂಡ ಕರೆಯಲಾಗಿದೆ.ಕೇಂದ್ರ ಸರಕಾರ ಸೀಮೆಎಣ್ಣೆ ಮೇಲೆ 18% ಜಿಎಸ್‍ಟಿ ವಿಧಿಸಿದ್ದರಿಂದ ದರ ಏರಿಕೆ ಕಂಡಿದ್ದು.ನಮ್ಮ ಸರಕಾರದ ವತಿಯಿಂದ ಬೇಕಾದಷ್ಟು ಸೀಮೆ ಎಣ್ಣೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕೇಂದ್ರ ಸರಕಾರ ಏಕರೂಪ ಕಾನೂನು ರೂಪಿಸಲಿ
ಬುಲ್‍ಟ್ರಾಲ್ ಫಿಶಿಂಗ್ ಈಗಾಗಲೇ ನಿಷೇಧಗೊಂಡಿದ್ದು ಲೈಟ್ ಫಿಶಿಂಗ್ ನಿಷೇಧಕ್ಕೆ ಕೇಂದ್ರ ಸರಕಾರ ಏಕರೂಪ ಕಾನೂನನ್ನು ಜಾರಿಗೆ ತರಬೇಕು. ಗೋವಾ ಕೇರಳ ಮಹಾರಾಷ್ಟ್ರಗಳಿಂದ ಸಾವಿರಾರು ಬೋಟ್‍ಗಳು ಮೀನುಗಾರಿಕೆಯಲ್ಲಿ ತೊಡಗಿಕೊಳ್ಳುವುದರಿಂದ ನಿಷೇಧಕ್ಕೆ ಕಷ್ಟ ಸಾಧ್ಯವಾಗಿದ್ದು ಕೇಂದ್ರ ಸರಕಾರದ ಮಟ್ಟದಲ್ಲಿ ಕ್ರಮಕ್ಕೆ ಮುಂದಾಗಬೇಕೆಂದರು.
ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ,ಮರವಂತೆ ಬಂದರು ಅಭಿವೃದ್ಧಿ ಸಹಿತ ಕೊಡೇರಿ,ಗಂಗೊಳ್ಳಿ,ಅಳ್ವೆಗದ್ದೆ ಬಂದರು ಅಭಿವೃದ್ಧಿಗೆ ಬಜೆಟ್‍ನಲ್ಲಿ ಅನುದಾನ ಘೋಷಣೆ ಮಾಡುವಲ್ಲಿ ಶ್ರಮಿಸಬೇಕು ಎಂದು ಸಚಿವರಲ್ಲಿ ವಿನಂತಿಸಿದರು.
ಅಧ್ಯಕ್ಷತೆ ವಹಿಸಿದ ಬೈಂದೂರು ಕ್ಷೇತ್ರದ ಗುರುರಾಜ ಗಂಟಿಹೊಳೆ ಮಾತನಾಡಿ,ಯಾವುದೆ ಸರಕಾರಗಳು ಬಂದರು ಕೂಡ ಮೀನುಗಾರಿಕಾ ಕ್ಷೇತ್ರದ ಕೆಲಸಗಳು ವಿಳಂಭವಾಗುತ್ತದೆ.ಅಂತಹ ಸನ್ನಿವೇಶ ಎದುರಾಗದಂತೆ ಅಭಿವೃದ್ಧಿ ಕಾರ್ಯಗಳು ಚುರುಕಿನಿಂದ ನಡೆಯುವುದರಿಂದ ಮೀನುಗಾರರಿಗೆ ಒಳಿತಾಗಲಿದೆ.ಕೇಂದ್ರದ ಯೋಜನೆಗಳನ್ನು ರಾಜ್ಯದಲ್ಲಿ ಅನುಷ್ಠಾನ ಮಾಡಲು ಸಚಿವರು ಚಿಂತನೆ ಮಾಡಬೇಕು ಎಂದು ಹೇಳಿದರು.ಮೀನುಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಸಂಸದರ ಕೊಡುಗೆ ಅಪಾರವಾದದ್ದು ಎಂದರು.
ಮರವಂತೆ ಪಂಚಾಯಿತಿ ಅಧ್ಯಕ್ಷ ಲೋಕೇಶ್ ಖಾರ್ವಿ,ಶ್ರೀರಾಮ ಮಂದಿರ ಮೀನುಗಾರರ ಸೇವಾ ಸಮಿತಿ ಮರವಂತೆ ಅಧ್ಯಕ್ಷ ಸುರೇಶ್ ಖಾರ್ವಿ,ಮಾರ್ಕೆಟ್ ಸಮಿತಿ ಅಧ್ಯಕ್ಷ ವೆಂಕಟರಮಣ ಖಾರ್ವಿ,ಸತೀಶ್ ಎಂ ನಾಯಕ್,ಎಡಿ ಸುಮಲತಾ ಉಪಸ್ಥಿತರಿದ್ದರು.ಶ್ರೀಧರ ಖಾರ್ವಿ ನಿರೂಪಿಸಿ,ವಂದಿಸಿದರು.ಬಂದರಿನ ಎರಡನೇ ಹಂತದ ಕಾಮಗಾರಿ ಅಂಗವಾಗಿ ಗಣಹೋಮ ನಡೆಯಿತು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

2 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

3 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

3 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago