ಪ್ರಮುಖ

ಶ್ರೀ ಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿ ದೈವಸ್ಥಾನದಲ್ಲಿ ವಾರ್ಷಿಕ ಹಾಲು ಹಬ್ಬ ಸೇವೆ

Share

ಕುಂದಾಪುರ:ಪುರಾಣ ಪ್ರಸಿದ್ಧ ಗುಜ್ಜಾಡಿ ಗ್ರಾಮದ ಶ್ರೀ ಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿ ದೈವಸ್ಥಾನದಲ್ಲಿ ವಾರ್ಷಿಕ ಹಾಲು ಹಬ್ಬ ಸೇವೆ ಮತ್ತು ಗೆಂಡ ಸೇವೆ ಹಾಗೂ ಏಳನೇ ವರ್ಷದ ವಾರ್ಷಿಕ ಪ್ರತಿμÁ್ಠ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅದ್ದೂರಿಯಾಗಿ ಮಂಗಳವಾರ ನಡೆಯಿತು.
ವಾರ್ಷಿಕ ಹಾಲು ಹಬ್ಬ ಅಂಗವಾಗಿ ಶ್ರೀ ದೇವರಿಗೆ ಹಣ್ಣು ಕಾಯಿ ಮಹಾಪೂಜೆ ಅನ್ನಸಂತರ್ಪಣೆ ದರ್ಶನ ಸೇವೆ ಗೆಂಡಸೇವೆ, ತುಲಾಭಾರ ಸೇವೆ ಜರುಗಿತು.ಪರಿವಾರ ದೈವಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ಯಕ್ಷಗಾನ ಬಯಲಾಟ,ದಾನಿಗಳಿಗೆ ಸನ್ಮಾನ,ವಿದ್ಯಾರ್ಥಿ ವೇತನ ಕಾರ್ಯಕ್ರಮ ನಡೆಯಿತು.
ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಬಾಬು.ಜೆ ಪೂಜಾರಿ ಉಪ್ಪುಂದ ಅವರು ಧಾರ್ಮಿಕ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ,ಆರು ವರ್ಷಗಳ ಹಿಂದೆ ಅಜೀರ್ಣ ಅವಸ್ಥೆಯಲ್ಲಿದ್ದ ದೇವಸ್ಥಾನ ಹಂತ ಹಂತವಾಗಿ ಅಭಿವೃದ್ಧಿಗೊಳ್ಳುತ್ತ ಬಂದಿದೆ.ಪ್ರತಿ ಸಂಕ್ರಾಂತಿ ದಿನದಂದು ಅನ್ನದಾನ ಸೇವೆ ಹಾಗೂ ವಾರ್ಷಿಕವಾಗಿ ನಡೆಯುವ ಹಾಲು ಹಬ್ಬ ಭಕ್ತರು ಮತ್ತು ದಾನಿಗಳ ಸಹಕಾರದಿಂದ ಅದ್ದೂರಿಯಾಗಿ ನಡೆಸುತ್ತಾ ಬರಲಾಗುತ್ತಿದ್ದು.
ವಿದ್ಯಾರ್ಥಿಗಳನ್ನು ಪೆÇ್ರೀತ್ಸಾಹಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ದಾನಿಗಳನ್ನು ಸನ್ಮಾನಿಸಲಾಗಿದೆ ಎಂದರು.ಮಾತನಾಡುವ ದೇವರು ಎಂದು ಜಟ್ಟಿಗೇಶ್ವರ ದೇವರನ್ನು ಕರೆಯುತ್ತಾರೆ.ಕಷ್ಟ ಕಾಲದಲ್ಲಿ ಹೇಳಿ ಕೊಂಡ ಹರಕೆಯನ್ನು ಪರಿಹಾರ ಆದ ಮೇಲೆ ದೇವರಿಗೆ ಸಲ್ಲಿಸುವುದು ಇಲ್ಲಿನ ವಿಶೇಷತೆ ಆಗಿದೆ ಎಂದರು.ಎಲ್ಲರಿಗೂ ಒಳಿತಾಗಲಿ ಎಂದು ಹಾರೈಸಿದರು.
ಅನ್ನದಾನ ಸೇವಾಕರ್ತರಾದ ರಮಿತಾ ಸಂತೋಸ ಪೂಜಾರಿ ಮಾತನಾಡಿ,ಇಂಜಿನಿಯರ್ ವಿದ್ಯಾಭ್ಯಾಸ ಮುಗಿಸಿದ ದಿನಗಳಲ್ಲಿ ಹಲವು ಕಾರಣದಿಂದ ಕೆಲಸ ಆಗದೆ ಇದ್ದಾಗ ಅನ್ನದಾನ ಸೇವೆಯನ್ನು ನೀಡುತ್ತೇನೆ ಎಂದು ಹರಕೆಯನ್ನು ಹೊತ್ತುಕೊಳ್ಳಲಾಗಿದ್ದು.ದೇವರಿಗೆ ಹರಕೆ ಹೊತ್ತುಕೊಂಡ ಮೇಲೆ ಕೆಲಸ ಆಗಿದೆ.ಆವೊಂದು ನೆಲೆಯಲ್ಲಿ ಹರಕೆಯನ್ನು ಇಂದು ಸಲ್ಲಿಸುತ್ತೇನೆ ಎಂದರು.
ದಾನಿಗಳಾದ ಆರತಿ ಮಾತನಾಡಿ,ದೇವರ ಕಾರಣಿಕ ಶಕ್ತಿ ಅಪಾರವಾಗಿದ್ದು.ಕ್ಷೇತ್ರವನ್ನು ನಂಬಿದ ಮೇಲೆ ತನ್ನ ಜೀವನದಲ್ಲಿ ಹಲವಾರು ಬದಲಾವಣೆಗಳು ಆಗಿದೆ ಎಂದರು.
ದೇವಸ್ಥಾನದ ಅಧ್ಯಕ್ಷರಾದ ಬಾಬು ಜೆ ಪೂಜಾರಿ ಉಪ್ಪುಂದ,ಉಪಾಧ್ಯಕ್ಷರಾದ ಎಸ್.ಕೆ ಪೂಜಾರಿ,ಕಾರ್ಯದರ್ಶಿ ನರಸಿಂಹ ಪೂಜಾರಿ,ಪಾತ್ರಿಗಳಾದ ನಾರಾಯಣ ಪೂಜಾರಿ,ನರಸಿಂಹ ಪೂಜಾರಿ,ಮಂಜು ಪೂಜಾರಿ,ಅರ್ಚಕ ಚಿಕ್ಕಯ್ಯ ಪೂಜಾರಿ, ಪದಾಧಿಕಾರಿಗಳು,ಪಾತ್ರಿಗಳು,ಅರ್ಚಕರು,ಗ್ರಾಮಸ್ಥರು,ನಂಬಿದ ಕುಟುಂಬಸ್ಥರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago