ಪ್ರಮುಖ

ಶ್ರೀ ಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿ ದೈವಸ್ಥಾನದಲ್ಲಿ ವಾರ್ಷಿಕ ಹಾಲು ಹಬ್ಬ ಸೇವೆ

Share

ಕುಂದಾಪುರ:ಪುರಾಣ ಪ್ರಸಿದ್ಧ ಗುಜ್ಜಾಡಿ ಗ್ರಾಮದ ಶ್ರೀ ಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿ ದೈವಸ್ಥಾನದಲ್ಲಿ ವಾರ್ಷಿಕ ಹಾಲು ಹಬ್ಬ ಸೇವೆ ಮತ್ತು ಗೆಂಡ ಸೇವೆ ಹಾಗೂ ಏಳನೇ ವರ್ಷದ ವಾರ್ಷಿಕ ಪ್ರತಿμÁ್ಠ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅದ್ದೂರಿಯಾಗಿ ಮಂಗಳವಾರ ನಡೆಯಿತು.
ವಾರ್ಷಿಕ ಹಾಲು ಹಬ್ಬ ಅಂಗವಾಗಿ ಶ್ರೀ ದೇವರಿಗೆ ಹಣ್ಣು ಕಾಯಿ ಮಹಾಪೂಜೆ ಅನ್ನಸಂತರ್ಪಣೆ ದರ್ಶನ ಸೇವೆ ಗೆಂಡಸೇವೆ, ತುಲಾಭಾರ ಸೇವೆ ಜರುಗಿತು.ಪರಿವಾರ ದೈವಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ಯಕ್ಷಗಾನ ಬಯಲಾಟ,ದಾನಿಗಳಿಗೆ ಸನ್ಮಾನ,ವಿದ್ಯಾರ್ಥಿ ವೇತನ ಕಾರ್ಯಕ್ರಮ ನಡೆಯಿತು.
ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಬಾಬು.ಜೆ ಪೂಜಾರಿ ಉಪ್ಪುಂದ ಅವರು ಧಾರ್ಮಿಕ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ,ಆರು ವರ್ಷಗಳ ಹಿಂದೆ ಅಜೀರ್ಣ ಅವಸ್ಥೆಯಲ್ಲಿದ್ದ ದೇವಸ್ಥಾನ ಹಂತ ಹಂತವಾಗಿ ಅಭಿವೃದ್ಧಿಗೊಳ್ಳುತ್ತ ಬಂದಿದೆ.ಪ್ರತಿ ಸಂಕ್ರಾಂತಿ ದಿನದಂದು ಅನ್ನದಾನ ಸೇವೆ ಹಾಗೂ ವಾರ್ಷಿಕವಾಗಿ ನಡೆಯುವ ಹಾಲು ಹಬ್ಬ ಭಕ್ತರು ಮತ್ತು ದಾನಿಗಳ ಸಹಕಾರದಿಂದ ಅದ್ದೂರಿಯಾಗಿ ನಡೆಸುತ್ತಾ ಬರಲಾಗುತ್ತಿದ್ದು.
ವಿದ್ಯಾರ್ಥಿಗಳನ್ನು ಪೆÇ್ರೀತ್ಸಾಹಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ದಾನಿಗಳನ್ನು ಸನ್ಮಾನಿಸಲಾಗಿದೆ ಎಂದರು.ಮಾತನಾಡುವ ದೇವರು ಎಂದು ಜಟ್ಟಿಗೇಶ್ವರ ದೇವರನ್ನು ಕರೆಯುತ್ತಾರೆ.ಕಷ್ಟ ಕಾಲದಲ್ಲಿ ಹೇಳಿ ಕೊಂಡ ಹರಕೆಯನ್ನು ಪರಿಹಾರ ಆದ ಮೇಲೆ ದೇವರಿಗೆ ಸಲ್ಲಿಸುವುದು ಇಲ್ಲಿನ ವಿಶೇಷತೆ ಆಗಿದೆ ಎಂದರು.ಎಲ್ಲರಿಗೂ ಒಳಿತಾಗಲಿ ಎಂದು ಹಾರೈಸಿದರು.
ಅನ್ನದಾನ ಸೇವಾಕರ್ತರಾದ ರಮಿತಾ ಸಂತೋಸ ಪೂಜಾರಿ ಮಾತನಾಡಿ,ಇಂಜಿನಿಯರ್ ವಿದ್ಯಾಭ್ಯಾಸ ಮುಗಿಸಿದ ದಿನಗಳಲ್ಲಿ ಹಲವು ಕಾರಣದಿಂದ ಕೆಲಸ ಆಗದೆ ಇದ್ದಾಗ ಅನ್ನದಾನ ಸೇವೆಯನ್ನು ನೀಡುತ್ತೇನೆ ಎಂದು ಹರಕೆಯನ್ನು ಹೊತ್ತುಕೊಳ್ಳಲಾಗಿದ್ದು.ದೇವರಿಗೆ ಹರಕೆ ಹೊತ್ತುಕೊಂಡ ಮೇಲೆ ಕೆಲಸ ಆಗಿದೆ.ಆವೊಂದು ನೆಲೆಯಲ್ಲಿ ಹರಕೆಯನ್ನು ಇಂದು ಸಲ್ಲಿಸುತ್ತೇನೆ ಎಂದರು.
ದಾನಿಗಳಾದ ಆರತಿ ಮಾತನಾಡಿ,ದೇವರ ಕಾರಣಿಕ ಶಕ್ತಿ ಅಪಾರವಾಗಿದ್ದು.ಕ್ಷೇತ್ರವನ್ನು ನಂಬಿದ ಮೇಲೆ ತನ್ನ ಜೀವನದಲ್ಲಿ ಹಲವಾರು ಬದಲಾವಣೆಗಳು ಆಗಿದೆ ಎಂದರು.
ದೇವಸ್ಥಾನದ ಅಧ್ಯಕ್ಷರಾದ ಬಾಬು ಜೆ ಪೂಜಾರಿ ಉಪ್ಪುಂದ,ಉಪಾಧ್ಯಕ್ಷರಾದ ಎಸ್.ಕೆ ಪೂಜಾರಿ,ಕಾರ್ಯದರ್ಶಿ ನರಸಿಂಹ ಪೂಜಾರಿ,ಪಾತ್ರಿಗಳಾದ ನಾರಾಯಣ ಪೂಜಾರಿ,ನರಸಿಂಹ ಪೂಜಾರಿ,ಮಂಜು ಪೂಜಾರಿ,ಅರ್ಚಕ ಚಿಕ್ಕಯ್ಯ ಪೂಜಾರಿ, ಪದಾಧಿಕಾರಿಗಳು,ಪಾತ್ರಿಗಳು,ಅರ್ಚಕರು,ಗ್ರಾಮಸ್ಥರು,ನಂಬಿದ ಕುಟುಂಬಸ್ಥರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago