ಪ್ರಮುಖ

ಶ್ರೀ ಈಶ್ವರಯ್ಯ ನಂದಿಕೇಶ್ವರ ಸಪರಿವಾರ ದೈವಸ್ಥಾನ ಕೊಳೂರು ವಾರ್ಷಿಕ ಹಾಲು ಹಬ್ಬ ಸೇವೆ,ಪ್ರತಿಷ್ಠಾ ಮಹೋತ್ಸವ

Share

Advertisement
Advertisement
Advertisement

ಕುಂದಾಪುರ:ತಾಲೂಕಿನ ಕುಂದಬಾರಂದಾಡಿ ಗ್ರಾಮದ ಕೊಳೂರು ಶ್ರೀ ಈಶ್ವರಯ್ಯ ನಂದಿಕೇಶ್ವರ ಸಪರಿವಾರ ದೈವಸ್ಥಾನದಲ್ಲಿ ವಾರ್ಷಿಕ ಹಾಲು ಹಬ್ಬ ಸೇವೆ,ಕಲಾಹೋಮ,ಗೆಂಡ ಸೇವೆ ಹಾಗೂ ಏಳನೇ ವರ್ಷದ ವಾರ್ಷಿಕ ಮಹೋತ್ಸವ ಕಾರ್ಯಕ್ರ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಬುಧವಾರ ನಡೆಯಿತು.
ವಾರ್ಷಿಕ ಉತ್ಸವದ ಅಂಗವಾಗಿ ಶ್ರೀ ದೇವರಿಗೆ ಶ್ರೀ ಈಶ್ವರಯ್ಯ ನಂದಿಕೇಶ್ವರ ಪರಿವಾರ ದೈವಗಳಿಗೆ ಹಣ್ಣುಕಾಯಿ,ಮಂಗಳಾರತಿ ಸೇವೆ,ಗೆಂಡ ಸೇವೆ ಹಾಗೂ ಅನ್ನದಾನ ಸೇವೆಯನ್ನು ಸಲ್ಲಿಸಲಾಯಿತು.ಭಕ್ತರು ಕ್ಷೇತ್ರಕ್ಕೆ ಆಗಮಿಸಿ ತಮ್ಮ ಹರಕೆಯನ್ನು ಸಲ್ಲಿಸಿದರು.ಕೊಳೂರು ದೈವದಮನೆ ಫ್ರೆಂಡ್ಸ್ ಸಹಯೋಗದೊಂದಿಗೆ ನಾಟಕ ಪ್ರದರ್ಶನ ಜರುಗಿತು.
ಅಶೋಕ ಶೆಟ್ಟಿ ಹೊಸೂರು ಮಾತನಾಡಿ,ಹಲವಾರು ವರ್ಷಗಳಿಂದ ಅರ್ಜೀಣಾವಸ್ಥೆಯಲ್ಲಿದ್ದ ದೇವಾಲಯವನ್ನು ಏಳು ವರ್ಷಗಳ ಹಿಂದೆ ಜೀರ್ಣೋದ್ಧಾರ ಮಾಡಲಾಗಿದೆ.ಕಟ್ಟುಕಟ್ಟಲೆ ಅಂತೆ ನಡೆದುಕೊಂಡು ಬಂದಿರುವ ಗೆಂಡ ಸೇವೆಯನ್ನು ಪುನರ್ ಆರಂಭಿಸಲಾಗಿದೆ.ಬಹಳಷ್ಟು ಇತಿಹಾಸವನ್ನು ಹೊಂದಿರುವ ಶ್ರೀ ಈಶ್ವರಯ್ಯ ನಂದಿಕೇಶ್ವರ ಪರಿವಾರ ದೈವಗಳ ಕಾರಣಿಕ ಶಕ್ತಿ ಅಪಾರವಾದ್ದು.ಯುವಕನ ಮೇಲೆ ದೈವವೂ ಆಕರ್ಷಣೆ ಆಗಿರುವ ಕುರುಹು ದೊರೆತ್ತಿದ್ದು ಮುಂದಿನ ದಿನಗಳಲ್ಲಿ ದೈವದ ಪಾರ್ಥಿಗಳು ನೇಮಕಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಆಲೋಚನೆ ಇದ್ದು ಭಕ್ತಾಧಿಗಳು ಗ್ರಾಮಸ್ಥರು ಸಹಕಾರ ನೀಡಬೇಕೆಂದರು.
ನಾರಾಯಣ ಶೆಟ್ಟಿ ಹೊಸೂರು ಮಾತನಾಡಿ,ನೂರಾರರು ವರ್ಷಗಳ ಹಿಂದೆ ಪಾಳುಬಿದ್ದ ದೈವಸ್ಥಾನವನ್ನು ದೈವಜ್ಞರ ಮುಖೇನ ದೈವ ನೆಲೆಯನ್ನು ಪತ್ತೆ ಹಚ್ಚಿ ಕಳೆದ ಏಳು ವರ್ಷಗಳ ಹಿಂದೆ ಜೀರ್ಣೋದ್ಧಾರ ಮಾಡಲಾಗಿದೆ.ಕ್ಷೇತ್ರವನ್ನು ನಂಬಿದ ಕುಟುಂಬಗಳು ಮೂಲೆ ಮೂಲೆಯಲ್ಲಿ ಇದ್ದು.ಕ್ಷೇತ್ರಕ್ಕೆ ಭೇಟಿ ನೀಡಿ ದೈವದ ಆಶೀರ್ವಾದವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ಚೆನ್ನಕೇಶವ ಉಪಾಧ್ಯಾಯ ಬಾರಂದಾಡಿ ಮಾತನಾಡಿ,ಹಾಲು ಹಬ್ಬವನ್ನು ವಿಶೇಷವಾದ ರೀತಿಯಲ್ಲಿ ಮಾಡಲಾಗಿದ್ದು.ಏಳನೇ ವರ್ಷದ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಕಲಾಹೋಮವನ್ನು ನಡೆಸಲಾಗಿದೆ.ದೈವವೂ ನಂಬಿದ ಭಕ್ತರನ್ನು ಕಾಪಾಡಲಿ ಎಂದು ಹರಸಿದರು.
ದೇವಲ್ಕುಂದಮನೆ ಕುಟುಂಬಸ್ಥರು ಹೊಸೂರು,ಕರ್ಕಿಮಕ್ಕಿ ಕುಟುಂಬಸ್ಥರು ಕೆರಾಡಿ ಹಾಗೂ ಶ್ರೀಧರ ಭಟ್ ಮೂಡಾರಿ ಮತ್ತು ಅರ್ಚಕರು,ಹಕ್ಲಾಡಿ ಪಂಚಾಯಿತಿ ಸದಸ್ಯ ಮಂಜುನಾಥ ಮಡಿವಾಳ,ಗ್ರಾಮಸ್ಥರು ಉಪಸ್ಥಿತರಿದ್ದರು.ಶ್ರೀ ಈಶ್ವರಯ್ಯ ನಂದಿಕೇಶ್ವರ ಸಪರಿವಾರ ದೈವಗಳ ಕೋಲ ಸೇವೆ,ಸ್ವಾಮಿ,ದೈವಾರಾಧನೆ ಸೇವೆ ಗುರುವಾರ ಜರುಗಿತು.

Advertisement
Advertisement
Advertisement

Share
Team Kundapur Times

Recent Posts

ಧರೆಗುರುಳಿದ ಮಹಾರಾಜ ಸ್ವಾಮಿ ದೇವಸ್ಥಾನದ ಪ್ರಾಂಗಾಣದ ಸೀಟ್ ಮಾಡು

ಕುಂದಾಪುರ:ಆರ್ಭಟಿಸಿದ ಗಾಳಿ ರಭಸಕ್ಕೆ ಬೈಂದೂರು ತಾಲೂಕಿನ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿನ ಪ್ರಾಂಗಾಣದ ಸೀಟ್ ಮಾಡು ತುಂಡು ತುಂಡಾಗಿ…

5 days ago

ಗಾಳಿ ಆರ್ಭಟಕ್ಕೆ ನಲುಗಿದ ಕುಂದಾಪ್ರ

ಕುಂದಾಪುರ:ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಿಸಿದ ಗಾಳಿ ಅಬ್ಬರಕ್ಕೆ ಅಕ್ಷರಹ ಸಹ ಕುಂದಾಪ್ರ ಮತ್ತು ಬೈಂದೂರು ತಾಲೂಕಿನ ಪ್ರದೇಶಗಳು…

5 days ago

ಗಾಳಿ ಅಬ್ಬರಕ್ಕೆ ಧರೆಗುರುಳಿದ ವಿದ್ಯುತ್ ಕಂಬ:50 ಕ್ಕೂ ಹೆ0ಚ್ಚು ಕಂಬಕ್ಕೆ ಹಾನಿ

ಕುಂದಾಪುರ:ಏಕಏಕಿ ಶನಿವಾರ ಸಂಜೆ ಬೀಸಿದ ಭಾರಿ ಗಾಳಿಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಒಳಪಟ್ಟಿರುವ ತಲ್ಲೂರು ಉಪವಿಭಾಗದ ವ್ಯಾಪ್ತಿಯಲ್ಲಿನ ಹೆಮ್ಮಾಡಿ,ದೇವಲ್ಕುಂದ,ಆಲೂರು,ಬಡಾಕೆರೆ,ಗಂಗೊಳ್ಳಿ…

5 days ago

ಸ್ಮಶಾನಕ್ಕೆ ದಾರಿ ಕಲ್ಪಿಸುವಂತೆ ಆಗ್ರಹಿಸಿ ಗುಜ್ಜಾಡಿ ಪಂಚಾಯಿತಿ ಎದುರು ಆಹೋರಾತ್ರಿ ಧರಣಿ ಸತ್ಯಾಗ್ರಹ

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಸನ್ಯಾಸಿಬಲ್ಲೆ ಸ್ಮಶಾನ ಹಾಗೂ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಅನಾದಿ ಕಾಲದ ರಸ್ತೆಯನ್ನು…

2 weeks ago

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 month ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 month ago