ಪ್ರಮುಖ

ಶ್ರೀ ಈಶ್ವರಯ್ಯ ನಂದಿಕೇಶ್ವರ ಸಪರಿವಾರ ದೈವಸ್ಥಾನ ಕೊಳೂರು ವಾರ್ಷಿಕ ಹಾಲು ಹಬ್ಬ ಸೇವೆ,ಪ್ರತಿಷ್ಠಾ ಮಹೋತ್ಸವ

Share

ಕುಂದಾಪುರ:ತಾಲೂಕಿನ ಕುಂದಬಾರಂದಾಡಿ ಗ್ರಾಮದ ಕೊಳೂರು ಶ್ರೀ ಈಶ್ವರಯ್ಯ ನಂದಿಕೇಶ್ವರ ಸಪರಿವಾರ ದೈವಸ್ಥಾನದಲ್ಲಿ ವಾರ್ಷಿಕ ಹಾಲು ಹಬ್ಬ ಸೇವೆ,ಕಲಾಹೋಮ,ಗೆಂಡ ಸೇವೆ ಹಾಗೂ ಏಳನೇ ವರ್ಷದ ವಾರ್ಷಿಕ ಮಹೋತ್ಸವ ಕಾರ್ಯಕ್ರ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಬುಧವಾರ ನಡೆಯಿತು.
ವಾರ್ಷಿಕ ಉತ್ಸವದ ಅಂಗವಾಗಿ ಶ್ರೀ ದೇವರಿಗೆ ಶ್ರೀ ಈಶ್ವರಯ್ಯ ನಂದಿಕೇಶ್ವರ ಪರಿವಾರ ದೈವಗಳಿಗೆ ಹಣ್ಣುಕಾಯಿ,ಮಂಗಳಾರತಿ ಸೇವೆ,ಗೆಂಡ ಸೇವೆ ಹಾಗೂ ಅನ್ನದಾನ ಸೇವೆಯನ್ನು ಸಲ್ಲಿಸಲಾಯಿತು.ಭಕ್ತರು ಕ್ಷೇತ್ರಕ್ಕೆ ಆಗಮಿಸಿ ತಮ್ಮ ಹರಕೆಯನ್ನು ಸಲ್ಲಿಸಿದರು.ಕೊಳೂರು ದೈವದಮನೆ ಫ್ರೆಂಡ್ಸ್ ಸಹಯೋಗದೊಂದಿಗೆ ನಾಟಕ ಪ್ರದರ್ಶನ ಜರುಗಿತು.
ಅಶೋಕ ಶೆಟ್ಟಿ ಹೊಸೂರು ಮಾತನಾಡಿ,ಹಲವಾರು ವರ್ಷಗಳಿಂದ ಅರ್ಜೀಣಾವಸ್ಥೆಯಲ್ಲಿದ್ದ ದೇವಾಲಯವನ್ನು ಏಳು ವರ್ಷಗಳ ಹಿಂದೆ ಜೀರ್ಣೋದ್ಧಾರ ಮಾಡಲಾಗಿದೆ.ಕಟ್ಟುಕಟ್ಟಲೆ ಅಂತೆ ನಡೆದುಕೊಂಡು ಬಂದಿರುವ ಗೆಂಡ ಸೇವೆಯನ್ನು ಪುನರ್ ಆರಂಭಿಸಲಾಗಿದೆ.ಬಹಳಷ್ಟು ಇತಿಹಾಸವನ್ನು ಹೊಂದಿರುವ ಶ್ರೀ ಈಶ್ವರಯ್ಯ ನಂದಿಕೇಶ್ವರ ಪರಿವಾರ ದೈವಗಳ ಕಾರಣಿಕ ಶಕ್ತಿ ಅಪಾರವಾದ್ದು.ಯುವಕನ ಮೇಲೆ ದೈವವೂ ಆಕರ್ಷಣೆ ಆಗಿರುವ ಕುರುಹು ದೊರೆತ್ತಿದ್ದು ಮುಂದಿನ ದಿನಗಳಲ್ಲಿ ದೈವದ ಪಾರ್ಥಿಗಳು ನೇಮಕಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಆಲೋಚನೆ ಇದ್ದು ಭಕ್ತಾಧಿಗಳು ಗ್ರಾಮಸ್ಥರು ಸಹಕಾರ ನೀಡಬೇಕೆಂದರು.
ನಾರಾಯಣ ಶೆಟ್ಟಿ ಹೊಸೂರು ಮಾತನಾಡಿ,ನೂರಾರರು ವರ್ಷಗಳ ಹಿಂದೆ ಪಾಳುಬಿದ್ದ ದೈವಸ್ಥಾನವನ್ನು ದೈವಜ್ಞರ ಮುಖೇನ ದೈವ ನೆಲೆಯನ್ನು ಪತ್ತೆ ಹಚ್ಚಿ ಕಳೆದ ಏಳು ವರ್ಷಗಳ ಹಿಂದೆ ಜೀರ್ಣೋದ್ಧಾರ ಮಾಡಲಾಗಿದೆ.ಕ್ಷೇತ್ರವನ್ನು ನಂಬಿದ ಕುಟುಂಬಗಳು ಮೂಲೆ ಮೂಲೆಯಲ್ಲಿ ಇದ್ದು.ಕ್ಷೇತ್ರಕ್ಕೆ ಭೇಟಿ ನೀಡಿ ದೈವದ ಆಶೀರ್ವಾದವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ಚೆನ್ನಕೇಶವ ಉಪಾಧ್ಯಾಯ ಬಾರಂದಾಡಿ ಮಾತನಾಡಿ,ಹಾಲು ಹಬ್ಬವನ್ನು ವಿಶೇಷವಾದ ರೀತಿಯಲ್ಲಿ ಮಾಡಲಾಗಿದ್ದು.ಏಳನೇ ವರ್ಷದ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಕಲಾಹೋಮವನ್ನು ನಡೆಸಲಾಗಿದೆ.ದೈವವೂ ನಂಬಿದ ಭಕ್ತರನ್ನು ಕಾಪಾಡಲಿ ಎಂದು ಹರಸಿದರು.
ದೇವಲ್ಕುಂದಮನೆ ಕುಟುಂಬಸ್ಥರು ಹೊಸೂರು,ಕರ್ಕಿಮಕ್ಕಿ ಕುಟುಂಬಸ್ಥರು ಕೆರಾಡಿ ಹಾಗೂ ಶ್ರೀಧರ ಭಟ್ ಮೂಡಾರಿ ಮತ್ತು ಅರ್ಚಕರು,ಹಕ್ಲಾಡಿ ಪಂಚಾಯಿತಿ ಸದಸ್ಯ ಮಂಜುನಾಥ ಮಡಿವಾಳ,ಗ್ರಾಮಸ್ಥರು ಉಪಸ್ಥಿತರಿದ್ದರು.ಶ್ರೀ ಈಶ್ವರಯ್ಯ ನಂದಿಕೇಶ್ವರ ಸಪರಿವಾರ ದೈವಗಳ ಕೋಲ ಸೇವೆ,ಸ್ವಾಮಿ,ದೈವಾರಾಧನೆ ಸೇವೆ ಗುರುವಾರ ಜರುಗಿತು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago