ಪ್ರಾದೇಶಿಕ ಸುದ್ದಿ

ಸರಕಾರಿ ಕಿರಿಯ ಪ್ರಾಥಮಿಕ ಹೆಮ್ಮುಂಜೆ ಶಾಲೆಯಲ್ಲಿ, ಪ್ರತಿಭಾ ಸಿಂಚನ-2 ಕಾರ್ಯಕ್ರಮ ಉದ್ಘಾಟನೆ

Share

ಕುಂದಾಪುರ:ಸರಕಾರಿ ಕಿರಿಯ ಪ್ರಾಥಮಿಕ ಹೆಮ್ಮುಂಜೆ ಶಾಲೆಯಲ್ಲಿ ಪ್ರತಿಭಾ ಸಿಂಚನ-2 ಕಾರ್ಯಕ್ರಮ ನಡೆಯಿತು. ಶಾಸಕ ಗುರುರಾಜ್ ಗಂಟಿಹೊಳೆ ಶುಭ ಹಾರೈಸಿದರು.ರಾಜೀವ್ ಶೆಟ್ಟಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಉದ್ಘಾಟಿಸಿದರು.ದಾನಿಗಳಾದ ಅಶೋಕ್ ಶೆಟ್ಟಿ ಬೆಳ್ಳಾಡಿ ಸಭಾಧ್ಯಕ್ಷತೆ ವಹಿಸಿ ಮಾತನಾಡಿ,ಶಾಲಾ ಕಟ್ಟಡವನ್ನು ಹೊಸದಾಗಿ ನಿರ್ಮಿಸುವುದರ ಕುರಿತು ಭರವಸೆ ನೀಡುವುದರೊಂದಿಗೆ ತಾವು ಕಲಿತ ಶಾಲೆಗೆ ಜೊತೆ ಸದಾ ಬೆಂಗಾವಲಾಗಿ ನಿಲ್ಲುತ್ತೇನೆ ಎನ್ನುವ ವಿಶ್ವಾಸ ನುಡಿಯನ್ನಾಡಿದರು.ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶರತ್ ಕುಮಾರ್ ಶೆಟ್ಟಿ ಅವರ ಶಾಲೆಯ ಕುರಿತಾದ ನಿರಂತರ ಹೋರಾಟದ ಫಲವನ್ನು ಶ್ಲಾಘಿಸಿದರು.ಇನ್ನು ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿಗಳಾದ ಸುರೇಂದ್ರ ಇವರು ಮಾತನಾಡಿ ಸರಕಾರಿ ಶಾಲೆ ಇಷ್ಟೊಂದು ಅಭಿವೃದ್ಧಿಗೊಂಡಿರುವ ಕುರಿತು ಹೆಮ್ಮೆ ವ್ಯಕ್ತಪಡಿಸಿ ಅದಕ್ಕೆ ಕಾರಣೀಭೂತರಾದ ಶಾಲಾ ಶಿಕ್ಷಕರಾದ ನಾಗರಾಜ್ ಶೆಟ್ಟಿ ಹಾಗೂ ಎಸ್ ಡಿಂಎಸಿ ಅಧ್ಯಕ್ಷ ಚಂದ್ರಶೇಖರ್ ಆಚಾರ್ಯ ಇವರೀರ್ವರ ಕಠಿಣ ಪರಿಶ್ರಮದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.ಶಾಲಾ ಮುಖ್ಯೋಪಾಧ್ಯಾಯರ ಅಶ್ವಿನಿ ಹೆಬ್ಬಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.ನಾಡ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿರುವ ಪಾರ್ವತಿ ಪ್ರಭಾಕರ್ ಶೆಟ್ಟಿ ಇವರು ಕಂಪ್ಯೂಟರ್ ಕೊಠಡಿಯನ್ನು ಉದ್ಘಾಟಿಸಿದರು.ಈ ಸಭೆಯಲ್ಲಿ ಶಶಿಧರ್ ಶೆಟ್ಟಿ ಸಾಲ್ಗದ್ದೆ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶರತ್ ಕುಮಾರ್ ಶೆಟ್ಟಿ ,ಶಿಕ್ಷಣ ಸಂಯೋಜಕರಾದ ಯೋಗೀಶ್ , ಸುನಿಲ್ ಶೆಟ್ಟಿ ,ದಿನೇಶ್ ಕೆ, SDMC ಅಧ್ಯಕ್ಷರಾದ ಚಂದ್ರಶೇಖರ್ ಆಚಾರ್ಯ , ಅಶ್ವಿನಿ ಹೆಬ್ಬಾರ್ ಉಪಸ್ಥಿತರಿದ್ದರು. ಶಾಲಾ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು ವಿಜೇತರ ಪಟ್ಟಿಯನ್ನು ಅತಿಥಿ ಶಿಕ್ಷಕರಾದ ಕುಮರಿ ಅಂಕಿತಾ ಪೂಜಾರಿ ವಾಚಿಸಿದರು
ನಂತರ ಶಾಲಾ ಮಕ್ಕಳಿಂದ ಹಾಗೂ ಹಳೆ ವಿದ್ಯಾರ್ಥಿಗಳಿಂದ ವೈವಿಧ್ಯಮಯ ನೃತ್ಯ ಪ್ರದರ್ಶನ ನಡೆಯಿತು. ಕಾರ್ಯಕ್ರಮವನ್ನು ಶಿಕ್ಷಕರಾದ ನಾಗರಾಜ್ ಶೆಟ್ಟಿ ಸ್ವಾಗತಿಸಿ, ಸುಪ್ರೀತಾ ಶೆಟ್ಟಿ ಬಡಾಕೆರೆ ನಿರೂಪಿಸಿದರು.

Advertisement

Share
Team Kundapur Times

Recent Posts

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

7 days ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago