ಪ್ರಾದೇಶಿಕ ಸುದ್ದಿ

ಸರಕಾರಿ ಕಿರಿಯ ಪ್ರಾಥಮಿಕ ಹೆಮ್ಮುಂಜೆ ಶಾಲೆಯಲ್ಲಿ, ಪ್ರತಿಭಾ ಸಿಂಚನ-2 ಕಾರ್ಯಕ್ರಮ ಉದ್ಘಾಟನೆ

Share

Advertisement
Advertisement
Advertisement

ಕುಂದಾಪುರ:ಸರಕಾರಿ ಕಿರಿಯ ಪ್ರಾಥಮಿಕ ಹೆಮ್ಮುಂಜೆ ಶಾಲೆಯಲ್ಲಿ ಪ್ರತಿಭಾ ಸಿಂಚನ-2 ಕಾರ್ಯಕ್ರಮ ನಡೆಯಿತು. ಶಾಸಕ ಗುರುರಾಜ್ ಗಂಟಿಹೊಳೆ ಶುಭ ಹಾರೈಸಿದರು.ರಾಜೀವ್ ಶೆಟ್ಟಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಉದ್ಘಾಟಿಸಿದರು.ದಾನಿಗಳಾದ ಅಶೋಕ್ ಶೆಟ್ಟಿ ಬೆಳ್ಳಾಡಿ ಸಭಾಧ್ಯಕ್ಷತೆ ವಹಿಸಿ ಮಾತನಾಡಿ,ಶಾಲಾ ಕಟ್ಟಡವನ್ನು ಹೊಸದಾಗಿ ನಿರ್ಮಿಸುವುದರ ಕುರಿತು ಭರವಸೆ ನೀಡುವುದರೊಂದಿಗೆ ತಾವು ಕಲಿತ ಶಾಲೆಗೆ ಜೊತೆ ಸದಾ ಬೆಂಗಾವಲಾಗಿ ನಿಲ್ಲುತ್ತೇನೆ ಎನ್ನುವ ವಿಶ್ವಾಸ ನುಡಿಯನ್ನಾಡಿದರು.ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶರತ್ ಕುಮಾರ್ ಶೆಟ್ಟಿ ಅವರ ಶಾಲೆಯ ಕುರಿತಾದ ನಿರಂತರ ಹೋರಾಟದ ಫಲವನ್ನು ಶ್ಲಾಘಿಸಿದರು.ಇನ್ನು ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿಗಳಾದ ಸುರೇಂದ್ರ ಇವರು ಮಾತನಾಡಿ ಸರಕಾರಿ ಶಾಲೆ ಇಷ್ಟೊಂದು ಅಭಿವೃದ್ಧಿಗೊಂಡಿರುವ ಕುರಿತು ಹೆಮ್ಮೆ ವ್ಯಕ್ತಪಡಿಸಿ ಅದಕ್ಕೆ ಕಾರಣೀಭೂತರಾದ ಶಾಲಾ ಶಿಕ್ಷಕರಾದ ನಾಗರಾಜ್ ಶೆಟ್ಟಿ ಹಾಗೂ ಎಸ್ ಡಿಂಎಸಿ ಅಧ್ಯಕ್ಷ ಚಂದ್ರಶೇಖರ್ ಆಚಾರ್ಯ ಇವರೀರ್ವರ ಕಠಿಣ ಪರಿಶ್ರಮದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.ಶಾಲಾ ಮುಖ್ಯೋಪಾಧ್ಯಾಯರ ಅಶ್ವಿನಿ ಹೆಬ್ಬಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.ನಾಡ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿರುವ ಪಾರ್ವತಿ ಪ್ರಭಾಕರ್ ಶೆಟ್ಟಿ ಇವರು ಕಂಪ್ಯೂಟರ್ ಕೊಠಡಿಯನ್ನು ಉದ್ಘಾಟಿಸಿದರು.ಈ ಸಭೆಯಲ್ಲಿ ಶಶಿಧರ್ ಶೆಟ್ಟಿ ಸಾಲ್ಗದ್ದೆ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶರತ್ ಕುಮಾರ್ ಶೆಟ್ಟಿ ,ಶಿಕ್ಷಣ ಸಂಯೋಜಕರಾದ ಯೋಗೀಶ್ , ಸುನಿಲ್ ಶೆಟ್ಟಿ ,ದಿನೇಶ್ ಕೆ, SDMC ಅಧ್ಯಕ್ಷರಾದ ಚಂದ್ರಶೇಖರ್ ಆಚಾರ್ಯ , ಅಶ್ವಿನಿ ಹೆಬ್ಬಾರ್ ಉಪಸ್ಥಿತರಿದ್ದರು. ಶಾಲಾ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು ವಿಜೇತರ ಪಟ್ಟಿಯನ್ನು ಅತಿಥಿ ಶಿಕ್ಷಕರಾದ ಕುಮರಿ ಅಂಕಿತಾ ಪೂಜಾರಿ ವಾಚಿಸಿದರು
ನಂತರ ಶಾಲಾ ಮಕ್ಕಳಿಂದ ಹಾಗೂ ಹಳೆ ವಿದ್ಯಾರ್ಥಿಗಳಿಂದ ವೈವಿಧ್ಯಮಯ ನೃತ್ಯ ಪ್ರದರ್ಶನ ನಡೆಯಿತು. ಕಾರ್ಯಕ್ರಮವನ್ನು ಶಿಕ್ಷಕರಾದ ನಾಗರಾಜ್ ಶೆಟ್ಟಿ ಸ್ವಾಗತಿಸಿ, ಸುಪ್ರೀತಾ ಶೆಟ್ಟಿ ಬಡಾಕೆರೆ ನಿರೂಪಿಸಿದರು.

Advertisement
Advertisement
Advertisement

Share
Team Kundapur Times

Recent Posts

ಧರೆಗುರುಳಿದ ಮಹಾರಾಜ ಸ್ವಾಮಿ ದೇವಸ್ಥಾನದ ಪ್ರಾಂಗಾಣದ ಸೀಟ್ ಮಾಡು

ಕುಂದಾಪುರ:ಆರ್ಭಟಿಸಿದ ಗಾಳಿ ರಭಸಕ್ಕೆ ಬೈಂದೂರು ತಾಲೂಕಿನ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿನ ಪ್ರಾಂಗಾಣದ ಸೀಟ್ ಮಾಡು ತುಂಡು ತುಂಡಾಗಿ…

5 days ago

ಗಾಳಿ ಆರ್ಭಟಕ್ಕೆ ನಲುಗಿದ ಕುಂದಾಪ್ರ

ಕುಂದಾಪುರ:ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಿಸಿದ ಗಾಳಿ ಅಬ್ಬರಕ್ಕೆ ಅಕ್ಷರಹ ಸಹ ಕುಂದಾಪ್ರ ಮತ್ತು ಬೈಂದೂರು ತಾಲೂಕಿನ ಪ್ರದೇಶಗಳು…

5 days ago

ಗಾಳಿ ಅಬ್ಬರಕ್ಕೆ ಧರೆಗುರುಳಿದ ವಿದ್ಯುತ್ ಕಂಬ:50 ಕ್ಕೂ ಹೆ0ಚ್ಚು ಕಂಬಕ್ಕೆ ಹಾನಿ

ಕುಂದಾಪುರ:ಏಕಏಕಿ ಶನಿವಾರ ಸಂಜೆ ಬೀಸಿದ ಭಾರಿ ಗಾಳಿಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಒಳಪಟ್ಟಿರುವ ತಲ್ಲೂರು ಉಪವಿಭಾಗದ ವ್ಯಾಪ್ತಿಯಲ್ಲಿನ ಹೆಮ್ಮಾಡಿ,ದೇವಲ್ಕುಂದ,ಆಲೂರು,ಬಡಾಕೆರೆ,ಗಂಗೊಳ್ಳಿ…

5 days ago

ಸ್ಮಶಾನಕ್ಕೆ ದಾರಿ ಕಲ್ಪಿಸುವಂತೆ ಆಗ್ರಹಿಸಿ ಗುಜ್ಜಾಡಿ ಪಂಚಾಯಿತಿ ಎದುರು ಆಹೋರಾತ್ರಿ ಧರಣಿ ಸತ್ಯಾಗ್ರಹ

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಸನ್ಯಾಸಿಬಲ್ಲೆ ಸ್ಮಶಾನ ಹಾಗೂ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಅನಾದಿ ಕಾಲದ ರಸ್ತೆಯನ್ನು…

2 weeks ago

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 month ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 month ago