ಕುಂದಾಪುರ: ಟ್ಯಾಬ್ಲೋ ಕುಣಿತ ಭಜನೆ ಪೇಟ ಸಹಿತ ಬಣ್ಣದ ಕೋಡೆ ಡೊಳ್ಳು ಕುಣಿತ ಚಂಡೆವಾದನ ಪೂರ್ಣಕುಂಭ ಸ್ವಾಗತದೊಂದಿಗೆ ಕುಂದಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಕಟ್ಬೇಲ್ತೂರು ಶ್ರೀ ಭದ್ರಮಹಾಕಾಳಿ ದೇವಿಯ ಪುರಪ್ರವೇಶ ಮೆರವಣಿಗೆ ಅದ್ಧೂರಿಯಾಗಿ ಸೋಮವಾರ ನಡೆಯಿತು.ಸಾವಿರಾರು ಭಕ್ತರ ಸಮ್ಮುಖದಲ್ಲಿ ಅಮ್ಮನವರು ಪುರಪ್ರವೇಶವನ್ನು ಮಾಡಿದರು.
ಶ್ರೀ ಭದ್ರಮಹಾಕಾಳಿ ದೇವಿಯ ರಕ್ತ ಚಂದನ ನೂತನ ದಾರು ಬಿಂಬಿದ ಶೋಭಾಯಾತ್ರೆಯೂ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರ ಕುಂಭಾಶಿಯಿಂದ ಹೆಮ್ಮಾಡಿ ತನಕ ವಾಹನ ಜಾತಾದ ಮೂಲಕ,ಹೆಮ್ಮಾಡಿ ಯಿಂದ ಶ್ರೀ ದೇವಿಯ ಸನ್ನಿಧಾನದ ತನಕ ಕಾಲ್ನಡಿಗೆಯಲ್ಲಿ ಸಾಗಿತು,ಮಹಿಳೆಯರು ಮತ್ತು ಪುರುಷರು ಹಾಗೂ ಮಕ್ಕಳು ಸಮವಸ್ತ್ರ ಧರಿಸಿ ಮೆರವಣಿಯಲ್ಲಿ ಹೆಜ್ಞೆ ಹಾಕಿದರು.ಪೂಷ್ಪ ಮಳೆ ಗೈಯುತ್ತಾ ಜೆಯ ಘೋಷದೊಂದಿಗೆ ಕಟ್ಬೇಲ್ತೂರು ಪುರವಾಸಿನಿಯನ್ನು ಸ್ವಾಗತಿಸಿ ಕೊಂಡರು.
ಆಡಳಿತ ಸಮಿತಿ ಗೌರವಾಧ್ಯಕ್ಷ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಮೆರವಣಿಗೆ ಚಾಲನೆಯನ್ನು ನೀಡಿದರು.ದೈವಸ್ಥಾನದ ಮೊಕ್ತೇಸರರಾದ ಹೆಗ್ಡೆಯವರ ಮನೆ ಬಿ.ವಿಠಲ ಶೆಟ್ಟಿ,ಆಡಳಿತ ಸಮಿತಿ ಅಧ್ಯಕ್ಷ ನಿವೃತ್ತ ಶಿಕ್ಷಕ ಆನಂದ ಶೆಟ್ಟಿ,ಸುಬ್ಬಣ್ಣ ಶೆಟ್ಟಿ,ಬಿ.ಭಾಸ್ಕರ ಶೆಟ್ಟಿ,ಆಡಳಿತ ಸಮಿತಿ ಉಪಾಧ್ಯಕ್ಷ ಬಿ.ಸೀತಾರಾಮ ಶೆಟ್ಟಿ,ಪಾತ್ರಿಗಳಾದ ರವಿ ನಾಯ್ಕ ಮತ್ತು ಗೋವಿಂದ ಪೂಜಾರಿ,ಅರ್ಚಕರಾದ ದೊಟ್ಟ ಪೂಜಾರಿ,ಶೇಖರ್ ಬಳೆಗಾರ್,ಚಂದ್ರನಾಯ್ಕ,ಶ್ರೀಧರ ಶೆಟ್ಟಿ,ಮಂಜು ಶೆಟ್ಟಿ,ಗ್ರಾಮಸ್ಥರು,ಭಕ್ತಾಧಿಗಳು ಉಪಸ್ಥಿತರಿದ್ದರು.ಪೆÇಲೀಸ್ ಇಲಾಖೆ ವತಿಯಿಂದ ಬೀಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…