ಕುಂದಾಪುರ

ಕಟ್‍ಬೇಲ್ತೂರು ಶ್ರೀ ಭದ್ರಮಹಾಕಾಳಿ ದೇವಿಯ ಪುರಪ್ರವೇಶ ಮೆರವಣಿಗೆ

Share

Advertisement
Advertisement
Advertisement

ಕುಂದಾಪುರ: ಟ್ಯಾಬ್ಲೋ ಕುಣಿತ ಭಜನೆ ಪೇಟ ಸಹಿತ ಬಣ್ಣದ ಕೋಡೆ ಡೊಳ್ಳು ಕುಣಿತ ಚಂಡೆವಾದನ ಪೂರ್ಣಕುಂಭ ಸ್ವಾಗತದೊಂದಿಗೆ ಕುಂದಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಕಟ್‍ಬೇಲ್ತೂರು ಶ್ರೀ ಭದ್ರಮಹಾಕಾಳಿ ದೇವಿಯ ಪುರಪ್ರವೇಶ ಮೆರವಣಿಗೆ ಅದ್ಧೂರಿಯಾಗಿ ಸೋಮವಾರ ನಡೆಯಿತು.ಸಾವಿರಾರು ಭಕ್ತರ ಸಮ್ಮುಖದಲ್ಲಿ ಅಮ್ಮನವರು ಪುರಪ್ರವೇಶವನ್ನು ಮಾಡಿದರು.
ಶ್ರೀ ಭದ್ರಮಹಾಕಾಳಿ ದೇವಿಯ ರಕ್ತ ಚಂದನ ನೂತನ ದಾರು ಬಿಂಬಿದ ಶೋಭಾಯಾತ್ರೆಯೂ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರ ಕುಂಭಾಶಿಯಿಂದ ಹೆಮ್ಮಾಡಿ ತನಕ ವಾಹನ ಜಾತಾದ ಮೂಲಕ,ಹೆಮ್ಮಾಡಿ ಯಿಂದ ಶ್ರೀ ದೇವಿಯ ಸನ್ನಿಧಾನದ ತನಕ ಕಾಲ್ನಡಿಗೆಯಲ್ಲಿ ಸಾಗಿತು,ಮಹಿಳೆಯರು ಮತ್ತು ಪುರುಷರು ಹಾಗೂ ಮಕ್ಕಳು ಸಮವಸ್ತ್ರ ಧರಿಸಿ ಮೆರವಣಿಯಲ್ಲಿ ಹೆಜ್ಞೆ ಹಾಕಿದರು.ಪೂಷ್ಪ ಮಳೆ ಗೈಯುತ್ತಾ ಜೆಯ ಘೋಷದೊಂದಿಗೆ ಕಟ್‍ಬೇಲ್ತೂರು ಪುರವಾಸಿನಿಯನ್ನು ಸ್ವಾಗತಿಸಿ ಕೊಂಡರು.
ಆಡಳಿತ ಸಮಿತಿ ಗೌರವಾಧ್ಯಕ್ಷ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಮೆರವಣಿಗೆ ಚಾಲನೆಯನ್ನು ನೀಡಿದರು.ದೈವಸ್ಥಾನದ ಮೊಕ್ತೇಸರರಾದ ಹೆಗ್ಡೆಯವರ ಮನೆ ಬಿ.ವಿಠಲ ಶೆಟ್ಟಿ,ಆಡಳಿತ ಸಮಿತಿ ಅಧ್ಯಕ್ಷ ನಿವೃತ್ತ ಶಿಕ್ಷಕ ಆನಂದ ಶೆಟ್ಟಿ,ಸುಬ್ಬಣ್ಣ ಶೆಟ್ಟಿ,ಬಿ.ಭಾಸ್ಕರ ಶೆಟ್ಟಿ,ಆಡಳಿತ ಸಮಿತಿ ಉಪಾಧ್ಯಕ್ಷ ಬಿ.ಸೀತಾರಾಮ ಶೆಟ್ಟಿ,ಪಾತ್ರಿಗಳಾದ ರವಿ ನಾಯ್ಕ ಮತ್ತು ಗೋವಿಂದ ಪೂಜಾರಿ,ಅರ್ಚಕರಾದ ದೊಟ್ಟ ಪೂಜಾರಿ,ಶೇಖರ್ ಬಳೆಗಾರ್,ಚಂದ್ರನಾಯ್ಕ,ಶ್ರೀಧರ ಶೆಟ್ಟಿ,ಮಂಜು ಶೆಟ್ಟಿ,ಗ್ರಾಮಸ್ಥರು,ಭಕ್ತಾಧಿಗಳು ಉಪಸ್ಥಿತರಿದ್ದರು.ಪೆÇಲೀಸ್ ಇಲಾಖೆ ವತಿಯಿಂದ ಬೀಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

Advertisement
Advertisement
Advertisement

Share
Team Kundapur Times

Recent Posts

ಧರೆಗುರುಳಿದ ಮಹಾರಾಜ ಸ್ವಾಮಿ ದೇವಸ್ಥಾನದ ಪ್ರಾಂಗಾಣದ ಸೀಟ್ ಮಾಡು

ಕುಂದಾಪುರ:ಆರ್ಭಟಿಸಿದ ಗಾಳಿ ರಭಸಕ್ಕೆ ಬೈಂದೂರು ತಾಲೂಕಿನ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿನ ಪ್ರಾಂಗಾಣದ ಸೀಟ್ ಮಾಡು ತುಂಡು ತುಂಡಾಗಿ…

5 days ago

ಗಾಳಿ ಆರ್ಭಟಕ್ಕೆ ನಲುಗಿದ ಕುಂದಾಪ್ರ

ಕುಂದಾಪುರ:ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಿಸಿದ ಗಾಳಿ ಅಬ್ಬರಕ್ಕೆ ಅಕ್ಷರಹ ಸಹ ಕುಂದಾಪ್ರ ಮತ್ತು ಬೈಂದೂರು ತಾಲೂಕಿನ ಪ್ರದೇಶಗಳು…

5 days ago

ಗಾಳಿ ಅಬ್ಬರಕ್ಕೆ ಧರೆಗುರುಳಿದ ವಿದ್ಯುತ್ ಕಂಬ:50 ಕ್ಕೂ ಹೆ0ಚ್ಚು ಕಂಬಕ್ಕೆ ಹಾನಿ

ಕುಂದಾಪುರ:ಏಕಏಕಿ ಶನಿವಾರ ಸಂಜೆ ಬೀಸಿದ ಭಾರಿ ಗಾಳಿಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಒಳಪಟ್ಟಿರುವ ತಲ್ಲೂರು ಉಪವಿಭಾಗದ ವ್ಯಾಪ್ತಿಯಲ್ಲಿನ ಹೆಮ್ಮಾಡಿ,ದೇವಲ್ಕುಂದ,ಆಲೂರು,ಬಡಾಕೆರೆ,ಗಂಗೊಳ್ಳಿ…

5 days ago

ಸ್ಮಶಾನಕ್ಕೆ ದಾರಿ ಕಲ್ಪಿಸುವಂತೆ ಆಗ್ರಹಿಸಿ ಗುಜ್ಜಾಡಿ ಪಂಚಾಯಿತಿ ಎದುರು ಆಹೋರಾತ್ರಿ ಧರಣಿ ಸತ್ಯಾಗ್ರಹ

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಸನ್ಯಾಸಿಬಲ್ಲೆ ಸ್ಮಶಾನ ಹಾಗೂ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಅನಾದಿ ಕಾಲದ ರಸ್ತೆಯನ್ನು…

2 weeks ago

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 month ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 month ago