ಕುಂದಾಪುರ

ಕಟ್‍ಬೇಲ್ತೂರು ಶ್ರೀ ಭದ್ರಮಹಾಕಾಳಿ ದೇವಿಯ ಪುರಪ್ರವೇಶ ಮೆರವಣಿಗೆ

Share

ಕುಂದಾಪುರ: ಟ್ಯಾಬ್ಲೋ ಕುಣಿತ ಭಜನೆ ಪೇಟ ಸಹಿತ ಬಣ್ಣದ ಕೋಡೆ ಡೊಳ್ಳು ಕುಣಿತ ಚಂಡೆವಾದನ ಪೂರ್ಣಕುಂಭ ಸ್ವಾಗತದೊಂದಿಗೆ ಕುಂದಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಕಟ್‍ಬೇಲ್ತೂರು ಶ್ರೀ ಭದ್ರಮಹಾಕಾಳಿ ದೇವಿಯ ಪುರಪ್ರವೇಶ ಮೆರವಣಿಗೆ ಅದ್ಧೂರಿಯಾಗಿ ಸೋಮವಾರ ನಡೆಯಿತು.ಸಾವಿರಾರು ಭಕ್ತರ ಸಮ್ಮುಖದಲ್ಲಿ ಅಮ್ಮನವರು ಪುರಪ್ರವೇಶವನ್ನು ಮಾಡಿದರು.
ಶ್ರೀ ಭದ್ರಮಹಾಕಾಳಿ ದೇವಿಯ ರಕ್ತ ಚಂದನ ನೂತನ ದಾರು ಬಿಂಬಿದ ಶೋಭಾಯಾತ್ರೆಯೂ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರ ಕುಂಭಾಶಿಯಿಂದ ಹೆಮ್ಮಾಡಿ ತನಕ ವಾಹನ ಜಾತಾದ ಮೂಲಕ,ಹೆಮ್ಮಾಡಿ ಯಿಂದ ಶ್ರೀ ದೇವಿಯ ಸನ್ನಿಧಾನದ ತನಕ ಕಾಲ್ನಡಿಗೆಯಲ್ಲಿ ಸಾಗಿತು,ಮಹಿಳೆಯರು ಮತ್ತು ಪುರುಷರು ಹಾಗೂ ಮಕ್ಕಳು ಸಮವಸ್ತ್ರ ಧರಿಸಿ ಮೆರವಣಿಯಲ್ಲಿ ಹೆಜ್ಞೆ ಹಾಕಿದರು.ಪೂಷ್ಪ ಮಳೆ ಗೈಯುತ್ತಾ ಜೆಯ ಘೋಷದೊಂದಿಗೆ ಕಟ್‍ಬೇಲ್ತೂರು ಪುರವಾಸಿನಿಯನ್ನು ಸ್ವಾಗತಿಸಿ ಕೊಂಡರು.
ಆಡಳಿತ ಸಮಿತಿ ಗೌರವಾಧ್ಯಕ್ಷ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಮೆರವಣಿಗೆ ಚಾಲನೆಯನ್ನು ನೀಡಿದರು.ದೈವಸ್ಥಾನದ ಮೊಕ್ತೇಸರರಾದ ಹೆಗ್ಡೆಯವರ ಮನೆ ಬಿ.ವಿಠಲ ಶೆಟ್ಟಿ,ಆಡಳಿತ ಸಮಿತಿ ಅಧ್ಯಕ್ಷ ನಿವೃತ್ತ ಶಿಕ್ಷಕ ಆನಂದ ಶೆಟ್ಟಿ,ಸುಬ್ಬಣ್ಣ ಶೆಟ್ಟಿ,ಬಿ.ಭಾಸ್ಕರ ಶೆಟ್ಟಿ,ಆಡಳಿತ ಸಮಿತಿ ಉಪಾಧ್ಯಕ್ಷ ಬಿ.ಸೀತಾರಾಮ ಶೆಟ್ಟಿ,ಪಾತ್ರಿಗಳಾದ ರವಿ ನಾಯ್ಕ ಮತ್ತು ಗೋವಿಂದ ಪೂಜಾರಿ,ಅರ್ಚಕರಾದ ದೊಟ್ಟ ಪೂಜಾರಿ,ಶೇಖರ್ ಬಳೆಗಾರ್,ಚಂದ್ರನಾಯ್ಕ,ಶ್ರೀಧರ ಶೆಟ್ಟಿ,ಮಂಜು ಶೆಟ್ಟಿ,ಗ್ರಾಮಸ್ಥರು,ಭಕ್ತಾಧಿಗಳು ಉಪಸ್ಥಿತರಿದ್ದರು.ಪೆÇಲೀಸ್ ಇಲಾಖೆ ವತಿಯಿಂದ ಬೀಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago