ಕುಂದಾಪುರ

ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬಂಟ್ವಾಡಿ ಶಾಲೆ ಅಮೃತ ಮಹೋತ್ಸವ ಸಂಭ್ರಮ-2025

Share

ಕುಂದಾಪುರ:ಬೈಂದೂರು ವಲಯದ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಬಂಟ್ವಾಡಿ ಶಾಲೆಯಲ್ಲಿ ಅಮೃತ ಮಹೋತ್ಸವ-2025 ಕಾರ್ಯಕ್ರಮ ಅದ್ಧೂರಿಯಾಗಿ ಶುಕ್ರವಾರ ನಡೆಯಿತು.
ಗುಡ್ಡಮ್ಮಾಡಿ ದೇವಸ್ಥಾನದಿಂದ ಬಂಟ್ವಾಡಿ ಶಾಲೆ ವರೆಗೆ ಭವ್ಯ ಮೆರವಣಿಗೆ ನಡೆಯಿತು.ಚಂಡೆವಾದನ ವಾದ್ಯ ಘೋಷ ಮೆರವಣಿಗೆ ಸೊಬಗನ್ನು ಹೆಚ್ಚಿಸಿತು.ಅಮೃತ ಮಹೋತ್ಸವ ಸ್ವಾಗತ ಗೋಪುರದ ಉದ್ಘಾಟನೆ ಮತ್ತು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಾಯಿತು.ಬೆಳಗೆ ಅಮೃತ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮವನ್ನು ನಾರಾಯಣ ಶೆಟ್ಟಿ ನೆರವೇರಿಸಿದರು.ಶಾಲೆಯ ಸಂಚಾಲಕ ಬಿ.ಅರುಣ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಅತಿಥಿಗಳು ಭಾಗವಹಿಸಿದ್ದರು.ಅಂಗನವಾಡಿ ವಿದ್ಯಾರ್ಥಿಗಳಿಂದ ಮತ್ತು ಶಾಲಾ ಮಕ್ಕಳಿಂದ ನೃತ್ಯ ಸಿಂಚನ ಕಾರ್ಯಕ್ರಮ ಜರುಗಿತು.ಗುರುವಂದನಾ ಕಾರ್ಯಕ್ರಮ,ಗೌರವ ಸಮರ್ಪಣೆ ಕಾರ್ಯಕ್ರಮ ಜರುಗಿತು.
ಶಾಲೆಯ ಸಂಚಾಲಕ ಅರುಣ್ ಕುಮಾರ್ ಶೆಟ್ಟಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿರುವ ಶಾಲೆಗಳ ಉಳಿವಿಗೆ ಸರ್ಕಾರ ಮಾತ್ರವಲ್ಲದೆ ದಾನಿಗಳ ಸಹಕಾರ ಅಗತ್ಯವಾಗಿದೆ ಎಂದರು.
ಶಾಲೆಯ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಶ್ಯಾನ್ ಭಾಗ್ ಮಾತನಾಡಿ,ನಮ್ಮ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಬಹಳಷ್ಟು ಜನರು ಸಹಕಾರ ನೀಡಿದ್ದಾರೆ ಎಂದು ಹೇಳಿದರು.ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.
ಸಿಆರ್ ಪಿ ಸತೀಶ್, ಉದ್ಯಮಿ ಅಜಿತ್ ಪ್ರಸಾದ್ ಶೆಟ್ಟಿ, ಚಿತ್ತರಂಜನ್ ಹೆಗ್ಡೆ ಹರ್ಕೂರು,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನರಸಿಂಹ ಮೊಗವೀರ, ವಿದ್ಯಾರ್ಥಿ ಪೋಷಕರ ಸಂಘ ಅಧ್ಯಕ್ಷೆ ಜಯಲಕ್ಷ್ಮಿ ಉಪಸ್ಥಿತರಿದ್ದರು.ಶಾಲೆಯ ಮುಖ್ಯ ಶಿಕ್ಷಕ ಶ್ರೀಧರ ವಾರ್ಷಿಕ ವರದಿ ವಾಚಿಸಿದರು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಳಹಳ್ಳಿ ಆದರ್ಶ ದೇವಾಡಿಗ ಸ್ವಸ್ತಿ ವಾಚನ ನೆರವೇರಿಸಿದರು.ಚಂದ್ರಶೇಖರ್ ಶೆಟ್ಟಿ ಸ್ವಾಗತಿಸಿದರು.ನಾಗೇಶ್ ಶ್ಯಾನ್ ಬಾಗ್ ನಿರೂಪಿಸಿದರು.ಶಂಭು ಗುಡ್ಡಮ್ಮಾಡಿ ನಿರೂಪಿಸಿದರು.
ಕೆ.ಎಸ್‌.ಸರಕಾರಿ ಪ್ರೌಢಶಾಲೆ ಹಕ್ಲಾಡಿ ವಿದ್ಯಾರ್ಥಿಗಳಿಂದ ಜಾನಪದ ನೃತ್ಯ ವೈಭವ,ಶಾಲಾ ವಿದ್ಯಾರ್ಥಿಗಳಿಂದ ವೀರ ಅಭಿಮನ್ಯು ಯಕ್ಷಗಾನ ಪ್ರದರ್ಶನ ನಡೆಯಿತು.

Advertisement

Share
Team Kundapur Times

Recent Posts

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

6 days ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

3 months ago