ಕುಂದಾಪುರ:ಬೈಂದೂರು ವಲಯದ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಬಂಟ್ವಾಡಿ ಶಾಲೆಯಲ್ಲಿ ಅಮೃತ ಮಹೋತ್ಸವ-2025 ಕಾರ್ಯಕ್ರಮ ಅದ್ಧೂರಿಯಾಗಿ ಶುಕ್ರವಾರ ನಡೆಯಿತು.
ಗುಡ್ಡಮ್ಮಾಡಿ ದೇವಸ್ಥಾನದಿಂದ ಬಂಟ್ವಾಡಿ ಶಾಲೆ ವರೆಗೆ ಭವ್ಯ ಮೆರವಣಿಗೆ ನಡೆಯಿತು.ಚಂಡೆವಾದನ ವಾದ್ಯ ಘೋಷ ಮೆರವಣಿಗೆ ಸೊಬಗನ್ನು ಹೆಚ್ಚಿಸಿತು.ಅಮೃತ ಮಹೋತ್ಸವ ಸ್ವಾಗತ ಗೋಪುರದ ಉದ್ಘಾಟನೆ ಮತ್ತು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಾಯಿತು.ಬೆಳಗೆ ಅಮೃತ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮವನ್ನು ನಾರಾಯಣ ಶೆಟ್ಟಿ ನೆರವೇರಿಸಿದರು.ಶಾಲೆಯ ಸಂಚಾಲಕ ಬಿ.ಅರುಣ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಅತಿಥಿಗಳು ಭಾಗವಹಿಸಿದ್ದರು.ಅಂಗನವಾಡಿ ವಿದ್ಯಾರ್ಥಿಗಳಿಂದ ಮತ್ತು ಶಾಲಾ ಮಕ್ಕಳಿಂದ ನೃತ್ಯ ಸಿಂಚನ ಕಾರ್ಯಕ್ರಮ ಜರುಗಿತು.ಗುರುವಂದನಾ ಕಾರ್ಯಕ್ರಮ,ಗೌರವ ಸಮರ್ಪಣೆ ಕಾರ್ಯಕ್ರಮ ಜರುಗಿತು.
ಶಾಲೆಯ ಸಂಚಾಲಕ ಅರುಣ್ ಕುಮಾರ್ ಶೆಟ್ಟಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿರುವ ಶಾಲೆಗಳ ಉಳಿವಿಗೆ ಸರ್ಕಾರ ಮಾತ್ರವಲ್ಲದೆ ದಾನಿಗಳ ಸಹಕಾರ ಅಗತ್ಯವಾಗಿದೆ ಎಂದರು.
ಶಾಲೆಯ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಶ್ಯಾನ್ ಭಾಗ್ ಮಾತನಾಡಿ,ನಮ್ಮ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಬಹಳಷ್ಟು ಜನರು ಸಹಕಾರ ನೀಡಿದ್ದಾರೆ ಎಂದು ಹೇಳಿದರು.ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.
ಸಿಆರ್ ಪಿ ಸತೀಶ್, ಉದ್ಯಮಿ ಅಜಿತ್ ಪ್ರಸಾದ್ ಶೆಟ್ಟಿ, ಚಿತ್ತರಂಜನ್ ಹೆಗ್ಡೆ ಹರ್ಕೂರು,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನರಸಿಂಹ ಮೊಗವೀರ, ವಿದ್ಯಾರ್ಥಿ ಪೋಷಕರ ಸಂಘ ಅಧ್ಯಕ್ಷೆ ಜಯಲಕ್ಷ್ಮಿ ಉಪಸ್ಥಿತರಿದ್ದರು.ಶಾಲೆಯ ಮುಖ್ಯ ಶಿಕ್ಷಕ ಶ್ರೀಧರ ವಾರ್ಷಿಕ ವರದಿ ವಾಚಿಸಿದರು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಳಹಳ್ಳಿ ಆದರ್ಶ ದೇವಾಡಿಗ ಸ್ವಸ್ತಿ ವಾಚನ ನೆರವೇರಿಸಿದರು.ಚಂದ್ರಶೇಖರ್ ಶೆಟ್ಟಿ ಸ್ವಾಗತಿಸಿದರು.ನಾಗೇಶ್ ಶ್ಯಾನ್ ಬಾಗ್ ನಿರೂಪಿಸಿದರು.ಶಂಭು ಗುಡ್ಡಮ್ಮಾಡಿ ನಿರೂಪಿಸಿದರು.
ಕೆ.ಎಸ್.ಸರಕಾರಿ ಪ್ರೌಢಶಾಲೆ ಹಕ್ಲಾಡಿ ವಿದ್ಯಾರ್ಥಿಗಳಿಂದ ಜಾನಪದ ನೃತ್ಯ ವೈಭವ,ಶಾಲಾ ವಿದ್ಯಾರ್ಥಿಗಳಿಂದ ವೀರ ಅಭಿಮನ್ಯು ಯಕ್ಷಗಾನ ಪ್ರದರ್ಶನ ನಡೆಯಿತು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…