ಕುಂದಾಪುರ

ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬಂಟ್ವಾಡಿ ಶಾಲೆ ಅಮೃತ ಮಹೋತ್ಸವ ಸಂಭ್ರಮ-2025

Share

ಕುಂದಾಪುರ:ಬೈಂದೂರು ವಲಯದ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಬಂಟ್ವಾಡಿ ಶಾಲೆಯಲ್ಲಿ ಅಮೃತ ಮಹೋತ್ಸವ-2025 ಕಾರ್ಯಕ್ರಮ ಅದ್ಧೂರಿಯಾಗಿ ಶುಕ್ರವಾರ ನಡೆಯಿತು.
ಗುಡ್ಡಮ್ಮಾಡಿ ದೇವಸ್ಥಾನದಿಂದ ಬಂಟ್ವಾಡಿ ಶಾಲೆ ವರೆಗೆ ಭವ್ಯ ಮೆರವಣಿಗೆ ನಡೆಯಿತು.ಚಂಡೆವಾದನ ವಾದ್ಯ ಘೋಷ ಮೆರವಣಿಗೆ ಸೊಬಗನ್ನು ಹೆಚ್ಚಿಸಿತು.ಅಮೃತ ಮಹೋತ್ಸವ ಸ್ವಾಗತ ಗೋಪುರದ ಉದ್ಘಾಟನೆ ಮತ್ತು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಾಯಿತು.ಬೆಳಗೆ ಅಮೃತ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮವನ್ನು ನಾರಾಯಣ ಶೆಟ್ಟಿ ನೆರವೇರಿಸಿದರು.ಶಾಲೆಯ ಸಂಚಾಲಕ ಬಿ.ಅರುಣ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಅತಿಥಿಗಳು ಭಾಗವಹಿಸಿದ್ದರು.ಅಂಗನವಾಡಿ ವಿದ್ಯಾರ್ಥಿಗಳಿಂದ ಮತ್ತು ಶಾಲಾ ಮಕ್ಕಳಿಂದ ನೃತ್ಯ ಸಿಂಚನ ಕಾರ್ಯಕ್ರಮ ಜರುಗಿತು.ಗುರುವಂದನಾ ಕಾರ್ಯಕ್ರಮ,ಗೌರವ ಸಮರ್ಪಣೆ ಕಾರ್ಯಕ್ರಮ ಜರುಗಿತು.
ಶಾಲೆಯ ಸಂಚಾಲಕ ಅರುಣ್ ಕುಮಾರ್ ಶೆಟ್ಟಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿರುವ ಶಾಲೆಗಳ ಉಳಿವಿಗೆ ಸರ್ಕಾರ ಮಾತ್ರವಲ್ಲದೆ ದಾನಿಗಳ ಸಹಕಾರ ಅಗತ್ಯವಾಗಿದೆ ಎಂದರು.
ಶಾಲೆಯ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಶ್ಯಾನ್ ಭಾಗ್ ಮಾತನಾಡಿ,ನಮ್ಮ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಬಹಳಷ್ಟು ಜನರು ಸಹಕಾರ ನೀಡಿದ್ದಾರೆ ಎಂದು ಹೇಳಿದರು.ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.
ಸಿಆರ್ ಪಿ ಸತೀಶ್, ಉದ್ಯಮಿ ಅಜಿತ್ ಪ್ರಸಾದ್ ಶೆಟ್ಟಿ, ಚಿತ್ತರಂಜನ್ ಹೆಗ್ಡೆ ಹರ್ಕೂರು,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನರಸಿಂಹ ಮೊಗವೀರ, ವಿದ್ಯಾರ್ಥಿ ಪೋಷಕರ ಸಂಘ ಅಧ್ಯಕ್ಷೆ ಜಯಲಕ್ಷ್ಮಿ ಉಪಸ್ಥಿತರಿದ್ದರು.ಶಾಲೆಯ ಮುಖ್ಯ ಶಿಕ್ಷಕ ಶ್ರೀಧರ ವಾರ್ಷಿಕ ವರದಿ ವಾಚಿಸಿದರು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಳಹಳ್ಳಿ ಆದರ್ಶ ದೇವಾಡಿಗ ಸ್ವಸ್ತಿ ವಾಚನ ನೆರವೇರಿಸಿದರು.ಚಂದ್ರಶೇಖರ್ ಶೆಟ್ಟಿ ಸ್ವಾಗತಿಸಿದರು.ನಾಗೇಶ್ ಶ್ಯಾನ್ ಬಾಗ್ ನಿರೂಪಿಸಿದರು.ಶಂಭು ಗುಡ್ಡಮ್ಮಾಡಿ ನಿರೂಪಿಸಿದರು.
ಕೆ.ಎಸ್‌.ಸರಕಾರಿ ಪ್ರೌಢಶಾಲೆ ಹಕ್ಲಾಡಿ ವಿದ್ಯಾರ್ಥಿಗಳಿಂದ ಜಾನಪದ ನೃತ್ಯ ವೈಭವ,ಶಾಲಾ ವಿದ್ಯಾರ್ಥಿಗಳಿಂದ ವೀರ ಅಭಿಮನ್ಯು ಯಕ್ಷಗಾನ ಪ್ರದರ್ಶನ ನಡೆಯಿತು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago