ಕುಂದಾಪುರ:ಅತ್ಯಂತ ಜನಪ್ರಿಯ ಖಾದ್ಯಗಳಲ್ಲಿ ಒಂದಾಗಿರುವ ಕರಾವಳಿ ದೊನ್ನೆ ಬಿರಿಯಾನಿ ಔಟ್ಲೆಟ್ ಹರೀಶ್ ಶೆಟ್ಟಿ ಕೌಂಜೂರು ಮತ್ತು ಶರತ್ ಶೆಟ್ಟಿ ಸೆಳೆಕೋಡು ಅವರ ಮಾಲೀಕತ್ವದಲ್ಲಿ ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆ (ರಾಷ್ಟ್ರೀಯ ಹೆದ್ದಾರಿ 66 ರ) ನಗು ಸಿಟಿ ಮುಂಭಾಗ ಶನಿವಾರ ಅದ್ಧೂರಿಯಾಗಿ ಶುಭಾರಂಭಗೊಂಡಿದೆ.
ಹೋಟೆಲ್ ಉದ್ಯಮದಲ್ಲಿ ಸುಮಾರು 25 ವರ್ಷಗಳಷ್ಟು ಅನುಭವನ್ನು ಹೊಂದಿರುª ಹರೀಶ್ ಶೆಟ್ಟಿ ಕೌಂಜೂರು ಮತ್ತು ಶರತ್ ಶೆಟ್ಟಿ ಮಾಲೀಕತ್ವದ ಕರಾವಳಿ ದೊನ್ನೆ ಬಿರಿಯಾನಿ ಸಹಿತ ಎಲ್ಲಾ ರೀತಿಯ ಸೀಫುಡ್,ನಾಟಿ ಸ್ಟೈಲ್ನಲ್ಲಿ ಚಿಕ್ಕನ್ ಮತ್ತು ಮಟನ್ ಬಿರಿಯಾನಿ,ಚೈನಿಸ್, ಮೀನು ಊಟ ನುರಿತ ಬಾಣಸಿಗರಿಂದ ತಯಾರಾಗಲಿದೆ.ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿ ಮಗ್ಗುಲಿನಲ್ಲಿರುವ ಕರಾವಳಿ ದೊನ್ನೆ ಬಿರಿಯಾನಿ ಪಾಯಿಂಟ್ ಪ್ರವಾಸಿಗರಿಗೆ ಹಾಗೂ ಸ್ಥಳೀಯರಿಗೆ ಖಾದ್ಯವನ್ನು ಸವಿಯಲು ಹೇಳಿಮಾಡಿಸಿದಂತ ಜಾಗ.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಮಾತನಾಡಿ,ವಿಶ್ವ ಪ್ರಸಿದ್ಧ ಪ್ರವಾಸಿ ತಾಣವನ್ನು ಹೊಂದಿರುವ ಬೈಂದೂರು ಮತ್ತು ಕುಂದಾಪುರ ತಾಲೂಕಿನ ಪ್ರದೇಶಕ್ಕೆ ದೇಶ ವಿದೇಶಗಳಿಂದ ಸಾವಿರಾರು ಜನರು ದಿನಂಪ್ರತಿ ಭೇಟಿಯನ್ನು ನೀಡುತ್ತಾರೆ.ಪ್ರವಾಸಿಗರಿಗೆ ಉತ್ತಮ ರೀತಿಯ ಊಟೋಪಚಾರ ಮತ್ತು ಆತಿಥ್ಯವನ್ನು ನೀಡಲು ಕರಾವಳಿ ದೊನ್ನೆ ಬಿರಿಯಾನಿ ಹೇಳಿಮಾಡಿಸಿದ ಜಾಗವಾಗಿದೆ ಎಂದು ಶುಭಹಾರೈಸಿದರು.
ಕರಾವಳಿ ದೊನ್ನೆ ಬಿರಿಯಾನಿ ಮಾಲೀಕರಾದ ಶರತ್ ಶೆಟ್ಟಿ ಮಾತನಾಡಿ,ಹೋಟೆಲ್ ಉದ್ಯಮದಲ್ಲಿ ಸುಮಾರು ಇಪ್ಪತೈದು ವರ್ಷಗಳಷ್ಟು ಅನುಭವನ್ನು ಹೊಂದಿರುವ ನಾವು ಇಂದು ಮುಳ್ಳಿಕಟ್ಟೆಯಲ್ಲಿ ಕರಾವಳಿ ದೊನ್ನೆ ಬಿರಿಯಾನಿ ಎಂಬ ಹೋಟೆಲ್ ಆರಂಭಿಸಲಾಗಿದ್ದು.ಸೀ ಫುಡ್ ಸಹಿತ ಎಲ್ಲಾ ರೀತಿಯ ಖಾದ್ಯಗಳು ದೊರಕಲಿದೆ.ಎಲ್ಲರೂ ಸಹಕಾರ ನೀಡಬೇಕೆಂದು ಕೇಳಿ ಕೊಂಡರು.
ಕರಾವಳಿ ದೊನ್ನೆ ಬಿರಿಯಾನಿ ಮಾಲೀಕರಾದ ಹರೀಶ್ ಶೆಟ್ಟಿ ಕೌಂಜೂರು ಮಾತನಾಡಿ,ನಮ್ಮೂರಿನಲ್ಲಿ ಕರಾವಳಿ ದೊನ್ನೆ ಬಿರಿಯಾನಿಯನ್ನು ಪರಿಚಯಿಸಬೇಕು ಎನ್ನುವ ದೃಷ್ಟಿಯಿಂದ ಇವೊಂದು ಉದ್ಯಮವನ್ನು ಆರಂಭಿಸಲಾಗಿದ್ದು.ಎಲ್ಲಾ ರೀತಿಯ ಖಾದ್ಯ ದೊರಕಲಿದೆ ತಾವೆಲ್ಲಾ ಸಹಕಾರ ನೀಡಬೇಕೆಂದು ಕೇಳಿಕೊಂಡರು.
ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ,ಮುಳ್ಳಿಕಟ್ಟೆ ಅಂತಹ ಗ್ರಾಮೀಣ ಪ್ರದೇಶದಲ್ಲಿ ಸುಸಜ್ಜಿತವಾದ ಹೋಟೆಲ್ ನಿರ್ಮಾಣ ಆಗಿರುವುದರಿಂದ ಒಂದಿಷ್ಟು ಜನರಿಗೆ ಉದ್ಯೋಗ ದೊರಕುವುದರ ಜತೆಗೆ,ಸುಚಿ ಮತ್ತು ರುಚಿಕರವಾದ ಊಟ ದೊರಕಲಿದೆ ಎಂದರು.ಯುವ ಉದ್ಯಮಿಗಳಿಗೆ ಶುಭಹಾರೈಸಿದರು.
ಹೋಟೆಲ್ ಶುಭಾರಂಭ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು,ಉದ್ಯಮಿಗಳು ಹಾಗೂ ಕಟ್ಟಡದ ಮಾಲೀಕರು,ಬಂಧು ಮಿತ್ರರು,ಸ್ನೇಹಿತರು,ಸ್ಥಳೀಯರು ಭೇಟಿ ನೀಡಿ ಶುಭಹಾರೈಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…