ಕುಂದಾಪುರ:ಅತ್ಯಂತ ಜನಪ್ರಿಯ ಖಾದ್ಯಗಳಲ್ಲಿ ಒಂದಾಗಿರುವ ಕರಾವಳಿ ದೊನ್ನೆ ಬಿರಿಯಾನಿ ಔಟ್ಲೆಟ್ ಹರೀಶ್ ಶೆಟ್ಟಿ ಕೌಂಜೂರು ಮತ್ತು ಶರತ್ ಶೆಟ್ಟಿ ಸೆಳೆಕೋಡು ಅವರ ಮಾಲೀಕತ್ವದಲ್ಲಿ ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆ (ರಾಷ್ಟ್ರೀಯ ಹೆದ್ದಾರಿ 66 ರ) ನಗು ಸಿಟಿ ಮುಂಭಾಗ ಶನಿವಾರ ಅದ್ಧೂರಿಯಾಗಿ ಶುಭಾರಂಭಗೊಂಡಿದೆ.
ಹೋಟೆಲ್ ಉದ್ಯಮದಲ್ಲಿ ಸುಮಾರು 25 ವರ್ಷಗಳಷ್ಟು ಅನುಭವನ್ನು ಹೊಂದಿರುª ಹರೀಶ್ ಶೆಟ್ಟಿ ಕೌಂಜೂರು ಮತ್ತು ಶರತ್ ಶೆಟ್ಟಿ ಮಾಲೀಕತ್ವದ ಕರಾವಳಿ ದೊನ್ನೆ ಬಿರಿಯಾನಿ ಸಹಿತ ಎಲ್ಲಾ ರೀತಿಯ ಸೀಫುಡ್,ನಾಟಿ ಸ್ಟೈಲ್ನಲ್ಲಿ ಚಿಕ್ಕನ್ ಮತ್ತು ಮಟನ್ ಬಿರಿಯಾನಿ,ಚೈನಿಸ್, ಮೀನು ಊಟ ನುರಿತ ಬಾಣಸಿಗರಿಂದ ತಯಾರಾಗಲಿದೆ.ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿ ಮಗ್ಗುಲಿನಲ್ಲಿರುವ ಕರಾವಳಿ ದೊನ್ನೆ ಬಿರಿಯಾನಿ ಪಾಯಿಂಟ್ ಪ್ರವಾಸಿಗರಿಗೆ ಹಾಗೂ ಸ್ಥಳೀಯರಿಗೆ ಖಾದ್ಯವನ್ನು ಸವಿಯಲು ಹೇಳಿಮಾಡಿಸಿದಂತ ಜಾಗ.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಮಾತನಾಡಿ,ವಿಶ್ವ ಪ್ರಸಿದ್ಧ ಪ್ರವಾಸಿ ತಾಣವನ್ನು ಹೊಂದಿರುವ ಬೈಂದೂರು ಮತ್ತು ಕುಂದಾಪುರ ತಾಲೂಕಿನ ಪ್ರದೇಶಕ್ಕೆ ದೇಶ ವಿದೇಶಗಳಿಂದ ಸಾವಿರಾರು ಜನರು ದಿನಂಪ್ರತಿ ಭೇಟಿಯನ್ನು ನೀಡುತ್ತಾರೆ.ಪ್ರವಾಸಿಗರಿಗೆ ಉತ್ತಮ ರೀತಿಯ ಊಟೋಪಚಾರ ಮತ್ತು ಆತಿಥ್ಯವನ್ನು ನೀಡಲು ಕರಾವಳಿ ದೊನ್ನೆ ಬಿರಿಯಾನಿ ಹೇಳಿಮಾಡಿಸಿದ ಜಾಗವಾಗಿದೆ ಎಂದು ಶುಭಹಾರೈಸಿದರು.
ಕರಾವಳಿ ದೊನ್ನೆ ಬಿರಿಯಾನಿ ಮಾಲೀಕರಾದ ಶರತ್ ಶೆಟ್ಟಿ ಮಾತನಾಡಿ,ಹೋಟೆಲ್ ಉದ್ಯಮದಲ್ಲಿ ಸುಮಾರು ಇಪ್ಪತೈದು ವರ್ಷಗಳಷ್ಟು ಅನುಭವನ್ನು ಹೊಂದಿರುವ ನಾವು ಇಂದು ಮುಳ್ಳಿಕಟ್ಟೆಯಲ್ಲಿ ಕರಾವಳಿ ದೊನ್ನೆ ಬಿರಿಯಾನಿ ಎಂಬ ಹೋಟೆಲ್ ಆರಂಭಿಸಲಾಗಿದ್ದು.ಸೀ ಫುಡ್ ಸಹಿತ ಎಲ್ಲಾ ರೀತಿಯ ಖಾದ್ಯಗಳು ದೊರಕಲಿದೆ.ಎಲ್ಲರೂ ಸಹಕಾರ ನೀಡಬೇಕೆಂದು ಕೇಳಿ ಕೊಂಡರು.
ಕರಾವಳಿ ದೊನ್ನೆ ಬಿರಿಯಾನಿ ಮಾಲೀಕರಾದ ಹರೀಶ್ ಶೆಟ್ಟಿ ಕೌಂಜೂರು ಮಾತನಾಡಿ,ನಮ್ಮೂರಿನಲ್ಲಿ ಕರಾವಳಿ ದೊನ್ನೆ ಬಿರಿಯಾನಿಯನ್ನು ಪರಿಚಯಿಸಬೇಕು ಎನ್ನುವ ದೃಷ್ಟಿಯಿಂದ ಇವೊಂದು ಉದ್ಯಮವನ್ನು ಆರಂಭಿಸಲಾಗಿದ್ದು.ಎಲ್ಲಾ ರೀತಿಯ ಖಾದ್ಯ ದೊರಕಲಿದೆ ತಾವೆಲ್ಲಾ ಸಹಕಾರ ನೀಡಬೇಕೆಂದು ಕೇಳಿಕೊಂಡರು.
ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ,ಮುಳ್ಳಿಕಟ್ಟೆ ಅಂತಹ ಗ್ರಾಮೀಣ ಪ್ರದೇಶದಲ್ಲಿ ಸುಸಜ್ಜಿತವಾದ ಹೋಟೆಲ್ ನಿರ್ಮಾಣ ಆಗಿರುವುದರಿಂದ ಒಂದಿಷ್ಟು ಜನರಿಗೆ ಉದ್ಯೋಗ ದೊರಕುವುದರ ಜತೆಗೆ,ಸುಚಿ ಮತ್ತು ರುಚಿಕರವಾದ ಊಟ ದೊರಕಲಿದೆ ಎಂದರು.ಯುವ ಉದ್ಯಮಿಗಳಿಗೆ ಶುಭಹಾರೈಸಿದರು.
ಹೋಟೆಲ್ ಶುಭಾರಂಭ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು,ಉದ್ಯಮಿಗಳು ಹಾಗೂ ಕಟ್ಟಡದ ಮಾಲೀಕರು,ಬಂಧು ಮಿತ್ರರು,ಸ್ನೇಹಿತರು,ಸ್ಥಳೀಯರು ಭೇಟಿ ನೀಡಿ ಶುಭಹಾರೈಸಿದರು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…