ಪ್ರಾದೇಶಿಕ ಸುದ್ದಿ

ಸರಕಾರಿ ಹಿರಿಯ ಪ್ರಾಥಮಿಕ ಯಳಜಿತ್ ಶಾಲೆ ಶತಮಾನೋತ್ಸವ ಸಂಭ್ರಮ

Share

ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಯಳಜಿತ್ ಶಾಲೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಶನಿವಾರ ನಡೆಯಿತು.ನೂತನ ರಂಗ ಮಂದಿರ ಉದ್ಘಾಟನೆಯನ್ನು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.ಬೆಳಗೆ ಧ್ವಜರೋಹಣವನ್ನು ಗೋಳಿಹೊಳೆ ಪಂಚಾಯಿತಿ ಅಧ್ಯಕ್ಷ ವಸಂತ ಹೆಗ್ಡೆ ನೆರವೇರಿಸಿದರು.ನಾನಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.ದಾನಿಗಳನ್ನು ಗೌರವಿಸಲಾಯಿತು.
ಶಾಲಾ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ಜರುಗಿತು.ನೃತ್ಯ ವೈವಿಧ್ಯ,ಶಿವಭೂತಿ ನಾಟಕ ಹಾಗೂ ಆಟಗಾರ ನಗೆ ನಾಟಕ ನಡೆಯಿತು.ಸಾವಿರು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಹಾಗೂ ಗುರುವಂದನಾ ಸಮಾರಂಭ ಹಾಗೂ ಸಮಾರೋಪ ಸಮಾರಂಭ ಕಾರ್ಯ ಜರುಗಿತು.
ನಾಡೋಜ ಎಸ್ ಷಡಕ್ಷರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಶಾಲೆಯ ಶತಮಾನೋತ್ಸವ ಸಮಾರಂಭವನ್ನು ಊರಿನ ಹಬ್ಬದಂತೆ ಆಚರಿಸಲಾಗುತ್ತಿರುವುದು ಜನರು ಶಾಲೆ ಮೇಲಿನ ಅಭಿಮಾನವೆ ಕಾರಣವಾಗಿದೆ.ಸಂಘಟಿತರಾದಾಗ ಮಾತ್ರ ಕೆಲಸಗಳನ್ನು ಕಾರ್ಯ ಸಾಧನೆ ಮೂಲಕ ಮಾಡಬಹುದಾಗಿದೆ ಎಂದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರಂಗಮಂದಿರ ಉದ್ಘಾಟಿಸಿ ಮಾತನಾಡಿ.ಬಲಿಷ್ಠ ಹಳೆ ವಿದ್ಯಾರ್ಥಿಗಳ ತಂಡದಿಂದ ಶಾಲೆಯನ್ನು ಸಾಕಷ್ಟು ರೀತಿಯಲ್ಲಿ ಅಭಿವೃದ್ಧಿಗೊಳಿಸಲಾಗಿದ್ದು.ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ಒಳ್ಳೆ ವಿದ್ಯಾಭ್ಯಾಸ ಸಿಗುತ್ತಿರುವುದು ಖುಷಿ ಸಂಗತಿ ಆಗಿದೆ ಎಂದರು.ಸರಕಾರಿ ಶಾಲೆಗಳು ಉಳಿಯ ಬೇಕು ಬೆಳೆಯ ಬೇಕು ಎಂದು ಹೇಳಿದರು.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ,ಬೈಂದೂರು ಕ್ಷೇತ್ರದಲ್ಲಿ ಸರಕಾರಿ ಶಾಲೆಗಳನ್ನು ಬಲಿಷ್ಠಗೊಳಿಸುವ ಉದ್ದೇಶದಿಂದ ವಿಶಿಷ್ಠವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು.ದಾನಿಗಳ ಸಹಕಾರದಿಂದ ಶಾಲೆಗಳನ್ನು ಅಭಿವೃದ್ಧಿಗೊಳಿಸುವ ಕೆಲಸಕ್ಕೆ ವೇಗ ನೀಡಲಾಗುತ್ತಿದೆ.ಹಳೆ ವಿದ್ಯಾರ್ಥಿಗಳು ಊರಿನ ಉದ್ಯಮಿಗಳು ತಾವು ಕಲಿತ ಶಾಲೆಯನ್ನು ಅಭಿವೃದ್ಧಿಗೊಳಿಸಲು ಮುಂದೆ ಬರಬೇಕೆಂದು ಹೇಳಿದರು.
ದೀಪಕ್ ಕುಮಾರ್ ಶೆಟ್ಟಿ,ಚಂದನ್ ಬಿಲ್ಲವ,ಎಸ್‍ಡಿಎಂಸಿ ಅಧ್ಯಕ್ಷ ರವಿಚಂದ್ರ ಶೆಟ್ಟಿ,ಬಿ.ಒ ನಾಗೇಶ್ ನಾಯ್ಕ್,ಅರಣ್ಯ ಅಧಿಕಾರಿ ಸಂದೇಶ,ಅಧ್ಯಕ್ಷರು ಸರಕಾರಿ ನೌಕರರ ಸಂಘ ಶೇಖರ ಪೂಜಾರಿ,ಮಂಜಯ್ಯ ಪೂಜಾರಿ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜೇಂದ್ರ ಶೆಟ್ಟಿ ಉಪಸ್ತಿತರಿದ್ದರು.
ಸುವರ್ಣ ಸಮಿತಿ ಅಧ್ಯಕ್ಷ ಮಂಗೇಶ್ ಶ್ಯಾನುಭೊಗ್ ಸ್ವಾಗತಿಸಿದರು.ಉಪನ್ಯಾಸಕ ಉದಯ್ ನಾಯ್ಕ್ ನಿರೂಪಿಸಿದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago