ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಯಳಜಿತ್ ಶಾಲೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಶನಿವಾರ ನಡೆಯಿತು.ನೂತನ ರಂಗ ಮಂದಿರ ಉದ್ಘಾಟನೆಯನ್ನು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.ಬೆಳಗೆ ಧ್ವಜರೋಹಣವನ್ನು ಗೋಳಿಹೊಳೆ ಪಂಚಾಯಿತಿ ಅಧ್ಯಕ್ಷ ವಸಂತ ಹೆಗ್ಡೆ ನೆರವೇರಿಸಿದರು.ನಾನಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.ದಾನಿಗಳನ್ನು ಗೌರವಿಸಲಾಯಿತು.
ಶಾಲಾ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ಜರುಗಿತು.ನೃತ್ಯ ವೈವಿಧ್ಯ,ಶಿವಭೂತಿ ನಾಟಕ ಹಾಗೂ ಆಟಗಾರ ನಗೆ ನಾಟಕ ನಡೆಯಿತು.ಸಾವಿರು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಹಾಗೂ ಗುರುವಂದನಾ ಸಮಾರಂಭ ಹಾಗೂ ಸಮಾರೋಪ ಸಮಾರಂಭ ಕಾರ್ಯ ಜರುಗಿತು.
ನಾಡೋಜ ಎಸ್ ಷಡಕ್ಷರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಶಾಲೆಯ ಶತಮಾನೋತ್ಸವ ಸಮಾರಂಭವನ್ನು ಊರಿನ ಹಬ್ಬದಂತೆ ಆಚರಿಸಲಾಗುತ್ತಿರುವುದು ಜನರು ಶಾಲೆ ಮೇಲಿನ ಅಭಿಮಾನವೆ ಕಾರಣವಾಗಿದೆ.ಸಂಘಟಿತರಾದಾಗ ಮಾತ್ರ ಕೆಲಸಗಳನ್ನು ಕಾರ್ಯ ಸಾಧನೆ ಮೂಲಕ ಮಾಡಬಹುದಾಗಿದೆ ಎಂದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರಂಗಮಂದಿರ ಉದ್ಘಾಟಿಸಿ ಮಾತನಾಡಿ.ಬಲಿಷ್ಠ ಹಳೆ ವಿದ್ಯಾರ್ಥಿಗಳ ತಂಡದಿಂದ ಶಾಲೆಯನ್ನು ಸಾಕಷ್ಟು ರೀತಿಯಲ್ಲಿ ಅಭಿವೃದ್ಧಿಗೊಳಿಸಲಾಗಿದ್ದು.ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ಒಳ್ಳೆ ವಿದ್ಯಾಭ್ಯಾಸ ಸಿಗುತ್ತಿರುವುದು ಖುಷಿ ಸಂಗತಿ ಆಗಿದೆ ಎಂದರು.ಸರಕಾರಿ ಶಾಲೆಗಳು ಉಳಿಯ ಬೇಕು ಬೆಳೆಯ ಬೇಕು ಎಂದು ಹೇಳಿದರು.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ,ಬೈಂದೂರು ಕ್ಷೇತ್ರದಲ್ಲಿ ಸರಕಾರಿ ಶಾಲೆಗಳನ್ನು ಬಲಿಷ್ಠಗೊಳಿಸುವ ಉದ್ದೇಶದಿಂದ ವಿಶಿಷ್ಠವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು.ದಾನಿಗಳ ಸಹಕಾರದಿಂದ ಶಾಲೆಗಳನ್ನು ಅಭಿವೃದ್ಧಿಗೊಳಿಸುವ ಕೆಲಸಕ್ಕೆ ವೇಗ ನೀಡಲಾಗುತ್ತಿದೆ.ಹಳೆ ವಿದ್ಯಾರ್ಥಿಗಳು ಊರಿನ ಉದ್ಯಮಿಗಳು ತಾವು ಕಲಿತ ಶಾಲೆಯನ್ನು ಅಭಿವೃದ್ಧಿಗೊಳಿಸಲು ಮುಂದೆ ಬರಬೇಕೆಂದು ಹೇಳಿದರು.
ದೀಪಕ್ ಕುಮಾರ್ ಶೆಟ್ಟಿ,ಚಂದನ್ ಬಿಲ್ಲವ,ಎಸ್ಡಿಎಂಸಿ ಅಧ್ಯಕ್ಷ ರವಿಚಂದ್ರ ಶೆಟ್ಟಿ,ಬಿ.ಒ ನಾಗೇಶ್ ನಾಯ್ಕ್,ಅರಣ್ಯ ಅಧಿಕಾರಿ ಸಂದೇಶ,ಅಧ್ಯಕ್ಷರು ಸರಕಾರಿ ನೌಕರರ ಸಂಘ ಶೇಖರ ಪೂಜಾರಿ,ಮಂಜಯ್ಯ ಪೂಜಾರಿ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜೇಂದ್ರ ಶೆಟ್ಟಿ ಉಪಸ್ತಿತರಿದ್ದರು.
ಸುವರ್ಣ ಸಮಿತಿ ಅಧ್ಯಕ್ಷ ಮಂಗೇಶ್ ಶ್ಯಾನುಭೊಗ್ ಸ್ವಾಗತಿಸಿದರು.ಉಪನ್ಯಾಸಕ ಉದಯ್ ನಾಯ್ಕ್ ನಿರೂಪಿಸಿದರು.
ಕುಂದಾಪುರ:ಆರ್ಭಟಿಸಿದ ಗಾಳಿ ರಭಸಕ್ಕೆ ಬೈಂದೂರು ತಾಲೂಕಿನ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿನ ಪ್ರಾಂಗಾಣದ ಸೀಟ್ ಮಾಡು ತುಂಡು ತುಂಡಾಗಿ…
ಕುಂದಾಪುರ:ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಿಸಿದ ಗಾಳಿ ಅಬ್ಬರಕ್ಕೆ ಅಕ್ಷರಹ ಸಹ ಕುಂದಾಪ್ರ ಮತ್ತು ಬೈಂದೂರು ತಾಲೂಕಿನ ಪ್ರದೇಶಗಳು…
ಕುಂದಾಪುರ:ಏಕಏಕಿ ಶನಿವಾರ ಸಂಜೆ ಬೀಸಿದ ಭಾರಿ ಗಾಳಿಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಒಳಪಟ್ಟಿರುವ ತಲ್ಲೂರು ಉಪವಿಭಾಗದ ವ್ಯಾಪ್ತಿಯಲ್ಲಿನ ಹೆಮ್ಮಾಡಿ,ದೇವಲ್ಕುಂದ,ಆಲೂರು,ಬಡಾಕೆರೆ,ಗಂಗೊಳ್ಳಿ…
ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಸನ್ಯಾಸಿಬಲ್ಲೆ ಸ್ಮಶಾನ ಹಾಗೂ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಅನಾದಿ ಕಾಲದ ರಸ್ತೆಯನ್ನು…
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…