ಕುಂದಾಪುರ

ಕುಂದಾಪುರ ನಾಗ ಬೊಬ್ಬರ್ಯ ದೇವಸ್ಥಾನದಲ್ಲಿ ನಾಗಮಂಡಲೋತ್ಸವ ಸಂಪನ್ನ

Share

ಕುಂದಾಪುರ:ದಿ.ಜಿ.ಕಮಲ ಮತ್ತು ಜಿ.ಸುಬ್ಬಣ್ಣ ಶೇರೆಗಾರರ ಮನೆಯವರಿಂದ ಚತುಃಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಶ್ರೀ ನಾಗ ಬೊಬ್ಬರ್ಯ ದೇವಸ್ಥಾನ ಕುಂದಾಪುರದ ಮೂಡುಕೇರಿಯಲ್ಲಿ ನಡೆಯಿತು.
ಚತುಃಪವಿತ್ರ ನಾಗಮಂಡಲೋತ್ಸವ ಅಂಗವಾಗಿ ಮಹಾಅನ್ನಸಂತರ್ಪಣೆ,ನಾಗಮಂಡಲ ಸೇವೆ ಜರುಗಿತು.ಸಾವಿರಾರರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀದೇವರ ಪ್ರಸಾದವನ್ನು ಸ್ವೀಕಾರ ಮಾಡಿದರು.
ಶೃಂಗೇರಿ ಶ್ರೀ ಶಾರದಾ ಪೀಠದ ಪ್ರಾಂತೀಯ ಧರ್ಮಾಧಿಕಾರಿಗಳಾದ ವೇದಮೂರ್ತಿ ಬಿ.ಲೋಕೇಶ್ ಅಡಿಗ ಬಡಾಕೆರೆ ಅವರು ನಾಗದರ್ಶನ ಸೇವೆಯನ್ನು ನೆರವೇರಿಸಿದರು.ಅಸಂಖ್ಯಾ ಭಕ್ತರು ಮಂಡಲ ಸೇವೆಯನ್ನು ಕಣ್ತುಂಬಿಕೊಂಡರು.ಹೂ ಹಣ್ಣು ಹಂಪಲುಗಳಿಂದ ಮಂಡಲದ ಚಪ್ಪರವನ್ನು ಸಿಂಗಾರ ಮಾಡಲಾಗಿತ್ತು.ನಾರಾಯಣ ಹೊಳ್ಳರು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.ಅಂಪಾರು ಸರ್ವೋತ್ತಮ ವೈದ್ಯರು ಮತ್ತು ಬಳಗದವರಿಂದ ಮಂಡಲ ಸೇವೆ ಜರುಗಿತು.ಜಿ.ಸುಬ್ಬಣ್ಣ ಶೇರೆಗಾರರು ನಿವೇದಿಸಿಕೊಂಡಿದ್ದ ಚತುಃಪವಿತ್ರ ನಾಗಮಂಡಲ ಸೇವೆ ಅದ್ಧೂರಿಯಾಗಿ ಸಂಪನ್ನಗೊಂಡಿತು.ಸೇವಾಕರ್ತರ ಕುಟುಂಬಸ್ಥರು,ಊರ ಪರಊರ ಭಕ್ತರು ಉಪಸ್ಥಿತರಿದ್ದರು.
ಚತುಃಪವಿತ್ರ ನಾಗಮಂಡಲ ಸೇವೆ ಅಂಗವಾಗಿ ಹೊರೆ ಕಾಣಿಕೆ ಸಮರ್ಪಣೆ,ಚಪ್ಪರ ಮೂಹೂರ್ತ ಕಾರ್ಯಕ್ರಮ ನಡೆಯಿತು.

Advertisement

Share
Team Kundapur Times

Recent Posts

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

7 days ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago