ಕುಂದಾಪುರ:ದಿ.ಜಿ.ಕಮಲ ಮತ್ತು ಜಿ.ಸುಬ್ಬಣ್ಣ ಶೇರೆಗಾರರ ಮನೆಯವರಿಂದ ಚತುಃಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಶ್ರೀ ನಾಗ ಬೊಬ್ಬರ್ಯ ದೇವಸ್ಥಾನ ಕುಂದಾಪುರದ ಮೂಡುಕೇರಿಯಲ್ಲಿ ನಡೆಯಿತು.
ಚತುಃಪವಿತ್ರ ನಾಗಮಂಡಲೋತ್ಸವ ಅಂಗವಾಗಿ ಮಹಾಅನ್ನಸಂತರ್ಪಣೆ,ನಾಗಮಂಡಲ ಸೇವೆ ಜರುಗಿತು.ಸಾವಿರಾರರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀದೇವರ ಪ್ರಸಾದವನ್ನು ಸ್ವೀಕಾರ ಮಾಡಿದರು.
ಶೃಂಗೇರಿ ಶ್ರೀ ಶಾರದಾ ಪೀಠದ ಪ್ರಾಂತೀಯ ಧರ್ಮಾಧಿಕಾರಿಗಳಾದ ವೇದಮೂರ್ತಿ ಬಿ.ಲೋಕೇಶ್ ಅಡಿಗ ಬಡಾಕೆರೆ ಅವರು ನಾಗದರ್ಶನ ಸೇವೆಯನ್ನು ನೆರವೇರಿಸಿದರು.ಅಸಂಖ್ಯಾ ಭಕ್ತರು ಮಂಡಲ ಸೇವೆಯನ್ನು ಕಣ್ತುಂಬಿಕೊಂಡರು.ಹೂ ಹಣ್ಣು ಹಂಪಲುಗಳಿಂದ ಮಂಡಲದ ಚಪ್ಪರವನ್ನು ಸಿಂಗಾರ ಮಾಡಲಾಗಿತ್ತು.ನಾರಾಯಣ ಹೊಳ್ಳರು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.ಅಂಪಾರು ಸರ್ವೋತ್ತಮ ವೈದ್ಯರು ಮತ್ತು ಬಳಗದವರಿಂದ ಮಂಡಲ ಸೇವೆ ಜರುಗಿತು.ಜಿ.ಸುಬ್ಬಣ್ಣ ಶೇರೆಗಾರರು ನಿವೇದಿಸಿಕೊಂಡಿದ್ದ ಚತುಃಪವಿತ್ರ ನಾಗಮಂಡಲ ಸೇವೆ ಅದ್ಧೂರಿಯಾಗಿ ಸಂಪನ್ನಗೊಂಡಿತು.ಸೇವಾಕರ್ತರ ಕುಟುಂಬಸ್ಥರು,ಊರ ಪರಊರ ಭಕ್ತರು ಉಪಸ್ಥಿತರಿದ್ದರು.
ಚತುಃಪವಿತ್ರ ನಾಗಮಂಡಲ ಸೇವೆ ಅಂಗವಾಗಿ ಹೊರೆ ಕಾಣಿಕೆ ಸಮರ್ಪಣೆ,ಚಪ್ಪರ ಮೂಹೂರ್ತ ಕಾರ್ಯಕ್ರಮ ನಡೆಯಿತು.
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…