ಕುಂದಾಪುರ

ಏಕಪವಿತ್ರ ನಾಗಮಂಡಲೋತ್ಸವ ಸಂಪನ್ನ

Share

Advertisement
Advertisement
Advertisement

ಕುಂದಾಪುರ:ಆದಿ ಸುಬ್ರಹ್ಮಣ್ಯ ದೇವಸ್ಥಾನ ವಂಡಾರು ಇದರ ವಾರ್ಷಿಕೋತ್ಸವ ಅಂಗವಾಗಿ ಶ್ರೀ ದೇವರಿಗೆ ಬ್ರಹ್ಮಕಲಶಾಭಿಷೇಕ ಸಹಿತ
ವಂಡಾರು ಬಾಯರಿ ಕುಟುಂಬಸ್ಥರಿಂದ ಏಕಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ವಂಡಾರುನಲ್ಲಿ ವಿಜೃಂಭಣೆಯಿಂದ ನಡೆಯಿತು.

Advertisement

ನಾಗಮಂಡಲೋತ್ಸವ ಕಾರ್ಯಕ್ರಮದ ಅಂಗವಾಗಿ ಹಾಲಿಟ್ಟು ಸೇವೆ, ಸಾರ್ವಜನಿಕ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀ ಆದಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಪ್ರಸಾದವನ್ನು ಸ್ವೀಕರಿಸಿದರು.
ಶೃಂಗೇರಿ ಶಾರದಾ ಪೀಠದ ದಕ್ಷಿಣ ಪ್ರಾಂತೀಯ ಧರ್ಮಾಧಿಕಾರಿ ವೇದ ಮೂರ್ತಿ ನಾಗಪಾತ್ರಿಗಳಾದ ಲೋಕೇಶ್ ಅಡಿಗ ಬಡಾಕೆರೆ ಅವರು ನಾಗದರ್ಶನ ಸೇವೆಯನ್ನು ನೆರವೇರಿಸಿದರು.
ಅಂಪಾರು ಸರ್ವೋತ್ತಮ ವೈದ್ಯರು ಮತ್ತು ಬಳಗದವರಿಂದ ಮಂಡಲ ಸೇವೆ ಜರುಗಿತು.
ಅಸಂಖ್ಯಾ ಭಕ್ತರು ಮಂಡಲ ಸೇವೆಯನ್ನು ಕಣ್ತುಂಬಿ ಕೊಂಡರು.ಹೂ ಹಣ್ಣು ಹಂಪಲುಗಳಿಂದ ಮಂಡಲದ ಚಪ್ಪರವನ್ನು ಸಿಂಗಾರ ಮಾಡಲಾಗಿತ್ತು.ವೈದಿಕರು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.ವಂಡಾರು ಬಾಯರಿ ಕುಟುಂಬಸ್ಥರಿಂದ ನಾಗಮಂಡಲೋತ್ಸವ ಸೇವೆ ಅದ್ದೂರಿಯಾಗಿ ಸಂಪನ್ನ ಗೊಂಡಿತು.
ಏಕಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮದ ಪೂರ್ವಭಾವಿ ಅಂಗವಾಗಿ ಹೊರೆ ಕಾಣಿಕೆ ಮೆರವಣಿಗೆ,ಚಪ್ಪರ ಮುಹೂರ್ತ ಕಾರ್ಯಕ್ರಮ ನಡೆಯಿತು‌.
ಅರ್ಚಕರಾದ ಸುನೀಲ್ ಕೆದ್ಲಾಯ ಅವರು ಮಾತನಾಡಿ, ಆದಿ ಸುಬ್ರಹ್ಮಣ್ಯ ದೇವಸ್ಥಾನದ ಮೊದಲ ವರ್ಷದ ಪ್ರತಿಷ್ಠಾ ಮಹೋತ್ಸವ ಅಂಗವಾಗಿ ದೇವರು ಕೊಟ್ಟ ನುಡಿ ಅಂತೆ ವಂಡಾರು ರಮೇಶ್ ಬಾಯರಿ ಅವರ ನೇತೃತ್ವದಲ್ಲಿ ಸಾರ್ವಜನಿಕವಾಗಿ ಏಕಪವಿತ್ರ ನಾಗಮಂಡಲೋತ್ಸವ ಬಹಳಷ್ಟು ಅದ್ದೂರಿಯಾಗಿ ನಡೆದಿದೆ ಎಂದರು.
ಈ ಸಂದರ್ಭದಲ್ಲಿ ವಂಡಾರು ಕುಟುಂಬಸ್ಥರು, ಗ್ರಾಮಸ್ಥರು, ಭಕ್ತಾದಿಗಳು ಉಪಸ್ಥಿತರಿದ್ದರು.

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

2 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

3 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

6 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

7 days ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

7 days ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago