ಕುಂದಾಪುರ

ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು 30ನೇ ವಾರ್ಷಿಕ ಅಧಿವೇಶನ ಉದ್ಘಾಟನೆ

Share

oplus_0

ಬೈಂದೂರು:ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯದ ವತಿಯಿಂದ 30ನೇ ವಾರ್ಷಿಕ ಅಧಿವೇಶನ,ಪ್ರತಿಭಾ ಪುರಸ್ಕಾರ,ಸನ್ಮಾನ ಹಾಗೂ ಅಭಿನಂದನೆ ಕಾರ್ಯಕ್ರಮ ಕಿರಿಮಂಜೇಶ್ವರ ಗುರುನರಸಿಂಹ ಸಭಾಭವನದಲ್ಲಿ ಭಾನುವಾರ ನಡೆಯಿತು.ಗಣಹೋಮ ಜರುಗಿತು.
ವಾರ್ಷಿಕ ಅಧಿವೇಶನದ ಅಂಗವಾಗಿ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಪೂಜಾ ಕಾರಂತ,ಐಶ್ವರ್ಯ ವೈದ್ಯ,ಕವನಾ ನಾವಡ,ಪ್ರಮಥ ಶ್ಯಾನುಭೋಗ್,ಪ್ರಣವ್ ಅಡಿಗ ಅವರಿಗೆ ಪ್ರತಿಭಾ ಪುರಸ್ಕಾರ ವಿತರಣೆ ಮಾಡಲಾಯಿತು ಹಾಗೂ ಸಾಧಕರಾದ ಮಂಜುನಾಥ ಮಯ್ಯ,ಗಾಯತ್ರಿ ಭಟ್ ಮೊಗೇರಿ,ವಿದ್ಯಾಶ್ರೀ ಮಯ್ಯ,ಗುರುರಾಜ್ ಹೆಬ್ಬಾರ್ ಅವರನ್ನು ಸನ್ಮಾನಿಸಲಾಯಿತು.ವಲಯದ ವಿಪ್ರರಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು.ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯ ವಾರ್ಷಿಕ ಮಹಾಸಭೆ ಪರಿಷತ್ತಿನ ಅಧ್ಯಕ್ಷ ಯು ಸಂದೇಶ್ ಭಟ್ ನೇತೃತ್ವದಲ್ಲಿ ಜರುಗಿತು.
ಅಗಲಿದ ಸಮಾಜ ಬಾಂಧವರಿಗೆ ಮೌನ ಪ್ರಾರ್ಥನೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬೆಂಗಳೂರು ಉಪಾಧ್ಯಕ್ಷ ಕೃಷ್ಣಾನಂದ ಚಾತ್ರ ಅವರು ವಾರ್ಷಿಕ ಅಧಿವೇಶನವನ್ನು ಉದ್ಘಾಟಿಸಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿ,ಆಧುನಿಕ ಯುಗದಲ್ಲಿ ಯುವ ಸಮುದಾಯ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚು ತೊಡಗಿಕೊಂಡು ಮುಂದಿನ ಪೀಳಿಗೆಗೆ ಆಚಾರ ವಿಚಾರಗಳನ್ನು ವರ್ಗಾವಣೆ ಮಾಡುವಂತಹ ಜವಾಬ್ದಾರಿ ಹೊರ ಬೇಕೆಂದು ಹೇಳಿದರು.
ನಿವೃತ್ತ ಸೈನಿಕ ಚಂದ್ರಶೇಖರ ನಾವಡ ಅವರು ಉಪನ್ಯಾಸ ನೀಡಿ ಮಾತನಾಡಿ,ವಿಪ್ರ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಲು ಇಂತಹ ಅಧಿವೇಶನಗಳು ಬಹಳಷ್ಟು ಸಹಕಾರಿ ಆಗುತ್ತದೆ ಎಂದು ಅಭಿಪ್ರಾಯಪಟ್ಟರು.ಶಿಸ್ತು ಸಂಮಯ ಶಿಷ್ಠಾಚಾರ ಸಂಸ್ಕಾರ ಎನ್ನುವ ಅಂಶಗಳನ್ನು ಇಂದಿನ ಯುವ ಸಮುದಾಯ ಅಳವಡಿಸಿಕೊಂಡು ಬದುಕಬೇಕೆಂದು ಕಿವಿ ಮಾತನ್ನು ಹೇಳಿದರು.
ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯ ಅಧ್ಯಕ್ಷ ಯು ಸಂದೇಶ್ ಭಟ್ ಅವರು ಸಭಾಧ್ಯಕ್ಷತೆ ವಹಿಸಿ ಮಾತನಾಡಿ,ಚಟುವಟಿಕೆಗಳ ಸದಸ್ಯರುಳ್ಳ ತಂಡವನ್ನು ರಚಿಸುವ ಅಗತ್ಯತೆ ಬಹಳಷ್ಟಿದ್ದು.ಸಂಘಟನೆಗಳ ಕಾರ್ಯದಲ್ಲಿ ಸಮುದಾಯದ ಸಮಾಜ ಬಾಂಧವರ ಭಾಗವಹಿಸುವಿಕೆ ಮಹತ್ವದ್ದಾಗಿರುತ್ತದೆ ಎಂದು ಹೇಳಿದರು.ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯ ಗೌರಾವಾಧ್ಯಕ್ಷ ಅರುಣ್ ಶ್ಯಾನುಭಾಗ್,ಮಹಿಳಾ ವೇದಿಕೆ ವೀಣಾ ಹೆಬ್ಬಾರ್,ಯುವ ವೇದಿಕೆ ಅಧ್ಯಕ್ಷ ಪದ್ಮನಾಭ ಹೆಬ್ಬಾರ್ ಉಪಸ್ಥಿತರಿದ್ದರು.
ವಾರ್ಷಿಕ ಮಹಾಸಭೆಯಲ್ಲಿ ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯ ಕಾರ್ಯದರ್ಶಿ ವಾರ್ಷಿಕ ವರದಿ ಮಂಡಿಸಿದರು.ಕೋಶಾಧಿಕಾರಿ ಯೋಗೀಶ್ ಕಾರಂತ ಆಯವ್ಯಯ ಮಂಡನೆ ಮಾಡಿದರು.ಡಿ.ವಿ ಸೀತಾರಾಮ ಮಯ್ಯ ಸ್ವಾಗತಿಸಿದರು.ಚೈತ್ರಾ ನಿರೂಪಿಸಿದರು.ಯೋಗೀಶ್ ಕಾರಂತ ವಂದಿಸಿದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago