ಪ್ರಾದೇಶಿಕ ಸುದ್ದಿ

ಉಪ್ಪುಂದ:ಶ್ರೀ ಉಮಾಮಹೇಶ್ವರ ದೇವರ ಪುನರ್ ಪ್ರತಿಷ್ಠೆ,ಶ್ರೀ ಮನ್ಮಹಾರಥೋತ್ಸವ ಕಾರ್ಯಕ್ರಮ

Share

ಕುಂದಾಪುರ:ಬೈಂದೂರು ಪರಿಸರದಲ್ಲಿ ಉಪ್ಪುಂದ ಮಾದಯ್ಯ ಶೆಟ್ರಮನೆ ಮೂಲಸ್ಥಾನದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶಿಲಾಮಯ ಮಂದಿರ ಲೋಕಾರ್ಪಣೆ,ಶ್ರೀ ಉಮಾಮಹೇಶ್ವರ,ಶ್ರೀ ನಂದಿಕೇಶ್ವರ ಹಾಗೂ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾಪನೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ರಾಜಗೋಪುರ ಸಮರ್ಪಣೆ ಹಾಗೂ ಶ್ರೀ ಮನ್ಮಹಾರಥೋತ್ಸವ ಕಾರ್ಯಕ್ರಮ ಫೆಬ್ರವರಿ ಪ್ರಾರಂಭವಾಗಿ 21 ರಿಂದ ಫೆಬ್ರವರಿ 27 ರ ಗುರುವಾರದ ತನಕ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.
ಅವಿಭಾಜಿತ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಪರಿಸರದಲ್ಲಿ ಕೆಲವು ಪ್ರತಿಷ್ಠಿತ ಬಂಟ ಕುಟುಂಬಗಳ ಮೂಲ ಸ್ಥಾನವೆನಿಸಿದ ಮಾದಯ್ಯ ಶೆಟ್ರಮನೆಗೆ ಇರುವ ಉಪ್ಪುಂದದ ಶ್ರೀ ಉಮಾಮಹೇಶ್ವರ ದೇವಸ್ಥಾನ ಒಂದು ಅಪರೂಪ ದೇವಾಲಯವಾಗಿದೆ.ಧಾರ್ಮಿಕ ಹಿನ್ನೆಲೆಯನ್ನು ಹೊಂದಿರುವ ಈ ಮನೆತನದ ಹಿರಿಯ ತಲೆಮಾರಿನ ವ್ಯಕ್ತಿಯಾಗಿರುವ ದಿವಂಗತ ಸಿದ್ದಮ್ಮ ಶೆಟ್ಟಿ ಅವರ ವಿಶಾಲ ಮನೆಯ ಒಂದು ಭಾಗವಾಗಿರುವ ಈ ದೇವಸ್ಥಾನ ಆಕರ್ಷಕವಾಗಿ ಶಿಲಾಮಯ ರೂಪದಲ್ಲಿ ನವೀಕರಣಗೊಂಡಿದ್ದು ಅದರ ಲೋಕಾರ್ಪಣೆ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಲಿದೆ.
ಸುಮಾರು 500 ವರ್ಷಗಳಷ್ಟು ಹಳೆಯದೆಂದು ಕುಟುಂಬಿಕರು ನಂಬಿರುವ ಇವೊಂದು ದೇವಾಲಯದ ಜೀರ್ಣೋದ್ಧಾರ ಕಾರ್ಯವನ್ನು ಈಗಾಗಲೇ ದಿವಂಗತ ಸಿದ್ದಮ್ಮ ಶೆಟ್ಟಿ ಅವರ ಮಕ್ಕಳು 1997 ರಿಂದ 2000 ಇಸವಿಯಲ್ಲಿ ಪೂರ್ಣಗೊಳಿಸಿರುತ್ತಾರೆಅದರ ಮುಂದುವರಿದ ಭಾಗವಾಗಿ ಶ್ರೀಮತಿ ಸಿದ್ದಮ್ಮ ಮಾದಯ್ಯ ಶೆಟ್ಟಿ ಫ್ಯಾಮಿಲಿ ಚಾರಿಟೇಬಲ್ ಟ್ರಸ್ಟಿನ ಮುಖಾಂತರ ಇದರ ಪುನರುತ್ಥಾನ ಕಾರ್ಯಕ್ರಮಗಳನ್ನು ಕಳೆದ ಮೂರು ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದೆ.
ಪುನರುತಾನ ಈ ದೇವಾಲಯದ ಸ್ಥಾನದಲ್ಲಿ ವಿಶಾಲವಾದ ಶಿಲಾಮಯ ಕಲಾತ್ಮಕವಾದ ನೂತನ ಮಂದಿರ ಹಾಗೂ ಶ್ರೀ ಉಮಾಮಹೇಶ್ವರ ಜ್ಞಾನಮಂಟಪವನ್ನೊಳಗೊಂಡ ರಾಜಗೋಪುರ,ನಂದಿಕೇಶ್ವರ ಮಂದಿರ ಮತ್ತು ನವಗ್ರಹ ಸಹಿತ ಯಾಗ ಮಂಟಪ ,ಭೋಜನ ಶಾಲೇ ಇತ್ಯಾದಿ ಅವಶ್ಯಕತೆ ಸೌಕರ್ಯಗಳನ್ನು ಈಗಾಗಲೇ ನಿರ್ಮಾಣ ಕಾರ್ಯಗಳು ಪೂರ್ಣಗೊಂಡಿದ್ದುಲೋಕಾರ್ಪಣೆಗೆ ಸಿದ್ಧಗೊಂಡಿದೆ.
ಈ ಮನೆತನದ ಬಸವ ದೇವರೊಂದಿಗೆ ಈ ದೇವಾಲಯದಲ್ಲಿ ಉಮಾಮಹೇಶ್ವರ ಅಭಿದಾನದಿಂದ ಪೆÇಜೆಗೊಳ್ಳಲಿದೆ.ನರ್ಮದಾ ನದಿ ಪಾತ್ರದಲ್ಲಿ ತೇದುನಯನಗೊಳ್ಳುವ ನರ್ಮದಾಬಾಣ ಎಂದು ಕರೆಯಲ್ಪಡುವ ಸಹಜ ಶಿವಲಿಂಗ.ಹಿಂದಿದ್ದ ಚಿಕ್ಕಗಾತ್ರದ ಲಿಂಗದ ಸ್ಥಾನದಲ್ಲಿ ಕಾಶಿಯಿಂದ ತಂದ 21 ಅಂಗುಲ ಪ್ರಮಾಣ ಲಿಂಗವೀಗ ಪುನರ್ ಪ್ರತಿಷ್ಠೆ ಗೊಳ್ಳಲಿದೆ.ಹಾಗೆ ಲಿಂಗದ ಹಿಂದಿರುವ 27 ಇಂಚಿನ ಉಮಾಮಹೇಶ್ವರ ಮೂರ್ತಿ,ವಿಷ್ಣು ಮೂರ್ತಿ ,ಗಣಪತಿ,ದೇವಿ, ವೀರಭದ್ರ ಮೂರ್ತಿಗಳು ಮತ್ತು ದೇವಿ ಮೂರ್ತಿಗಳು ಪ್ರತಿಷ್ಠಾಪನೆಗೊಳ್ಳುತ್ತಿದ್ದು.ಶಿವಪಂಚಾಯಿತನದ ಕಲ್ಪನೆಯಲ್ಲಿ ಸಾಕಾರಗೊಳ್ಳುತ್ತಿದೆ.
ಈ ಸಲದ ವಿಶೇಷ ಏನೆಂದರೆ 75 ವರ್ಷದ ಹಿಂದೆ ನಡೆಯುತ್ತಿದ್ದ ರಥೋತ್ಸವವನ್ನು ದೇವಾಲಯದ ಪುನರುತ್ಥಾನದ ಕಾಲದಲ್ಲಿ ಅಂತಹ ರಥೋತ್ಸವವನ್ನು ಮಹಾಶಿವರಾತ್ರಿ ದಿನದಂದು ನಡೆಯಬೇಕ್ಕೆನ್ನುವುದು ದಿವಂಗತ ಸಿದ್ದಮ್ಮ ಶೆಟ್ಟಿ ಅವರ ಸಂಕಲ್ಪಕ್ಕೆ ಅನುಗುಣವಾಗಿ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಅವರ ಹಿರಿಯ ಮಗ ಯು.ಸೀತಾರಾಮ ಶೆಟ್ಟಿ ಮತ್ತು ಸಹೋದರರು ಸೇರಿ ನವೀಕೃತವಾದ ರಥವನ್ನು ತಂದು ಅದಕ್ಕಾಗಿ ವಿಶೇಷವಾದಂತಹ ನೂತನ ರಥಬೀದಿ ನಿರ್ಮಿಸಲಾಗಿದೆ.ದೇವಸ್ಥಾನದ ಪ್ರಾಂಗಾಣದಲ್ಲಿರುವ ಶ್ರೀ ಅಶ್ವಥರಾಮ ಜ್ಞಾನ ಮಂದಿರ ಸುತ್ತು ಹಾಕಿ ಬರುವಂತೆ ರಥ ಬೀದಿಯನ್ನು ಕೂಡ ಸಜ್ಜುಗೊಳಿಸಲಾಗಿದೆ.ಈ ಎಲ್ಲಾ ಧಾರ್ಮಿಕ ವಿಧಿವಿಧಾನ ಕಾರ್ಯಕ್ರಮಗಳು ವೇದಮೂರ್ತಿ ಆಗಮಶ್ರೇಷ್ಠ ಶಂಕರ ಪರಮೇಶ್ವರ ಭಟ್ ಕಟ್ಟೆ ಅವರ ಪ್ರಧಾನ ಆಚಾರ್ಯಕತ್ವದಲ್ಲಿ ನಡೆಯಲಿದೆ.
ದಿನಾಂಕ 24-02-2025 ಸೋಮವಾರದಂದು ನಡೆಯಲಿರುವ ಶ್ರೀದೇವರ ಪುನರ್ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮದಲ್ಲಿ ಶೃಂಗೇರಿ ಶಾರದಪೀಠಾಧೀಶ್ವರರಾದ ಜಗದ್ಗುರು ಶ್ರೀ ಭಾರತಿತಿರ್ಥ ಮಹಾಸ್ವಾಮಿಗಳವರ ಪರಮಾನುಗ್ರಹದಿಂದ ತತ್ಕರಕಮಲಶಂಜಾತರಾದ ಜಗದ್ಗುರು ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳವರು ನಮ್ಮ ಶ್ರದ್ಧಾಭಕ್ತಿ ಪುರಸ್ಸರ ಪ್ರಾರ್ಥನೆಯನ್ನು ಅಂಗೀಕರಿಸಿ ನಮ್ಮ ಕ್ಷೇತ್ರಕ್ಕೆ ಚಿತ್ತೈಸಲಿದ್ದು. ಪುನರ್ ಪ್ರತಿಷ್ಠೆ ಹಾಗೂ ಶಿಖರ ಪ್ರತಿಷ್ಠೆ ಕಾರ್ಯಗಳು ಅವರ ಉಪಸ್ಥಿತಿಯಲ್ಲಿ ನಡೆಯಲಿದೆ.
ಹಾಗೂ ಜ್ಞಾನ ಮಂಟಪನ್ನು ಒಳಗೊಂಡ ನೂತನ ಗೋಪುರವು ಮಹಾಸ್ವಾಮಿಗಳ ಅಮೃತಸರದಿಂದ ಲೋಕಾರ್ಪಣೆಗೊಳ್ಳಲಿದೆ.
ವಿಶೇಷವಾಗಿ 24.ರಂದು ನಡೆಯಲಿರುವ ಮಹಾರುದ್ರಯಾಗದ ಅಂಗವಾಗಿ ನಡೆಯಲಿರುವ ಪೂರ್ಣಾಹುತಿಯಲ್ಲಿ ಬಂಧು ಬಾಂಧವರು,ಊರಪರೂರ ಸದ್ಭಕರು ಭಾಗವಹಿಸಿ ಮಹಾಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಹಾಜರಿರಬೇಕೆಂದು ಶ್ರೀಮತಿ ಸಿದ್ದಮ್ಮ ಮಾದಯ್ಯ ಶೆಟ್ಟಿ ಫ್ಯಾಮಿಲಿ ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷರಾದ ಯು.ಸೀತಾರಾಮ ಶೆಟ್ಟಿ,ಸದಸ್ಯರಾದ ನಾರಾಯಣ ಎಂ ಶೆಟ್ಟಿ,ಯು.ಬಿ ಶೆಟ್ಟಿ,ಭುಜಂಗಯ್ಯ ಶೆಟ್ಟಿ,ಹರೀಶ್ ಕುಮರ್ ಶೆಟ್ಟಿ ಹಾಗೂ ಸಹದೋರರು ವಿನಂತಿಸಿಕೊಂಡಿದ್ದಾರೆ.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

4 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

4 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago