ಕುಂದಾಪುರ

ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಗದೀಶ ಪಿ.ಪೂಜಾರಿ ಹಕ್ಕಾಡಿ ಹಾಗೂ ಉಪಾಧ್ಯಕ್ಷರಾಗಿ ಸತೀಶ ಕುಮಾರ್ ಶೆಟ್ಟಿ ಆಯ್ಕೆ

Share

Advertisement
Advertisement
Advertisement

ಕುಂದಾಪುರ:ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅದರ ಪ್ರಧಾನ ಕಚೇರಿಯಲ್ಲಿ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಭೆ ಗುರುವಾರ ನಡೆಯಿತು. ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅದರ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಜಗದೀಶ ಪಿ.ಪೂಜಾರಿ ಹಕ್ಕಾಡಿ ಹಾಗೂ ಉಪಾಧ್ಯಕ್ಷರಾಗಿ ಸತೀಶ ಕುಮಾರ್ ಶೆಟ್ಟಿ ಆಯ್ಕೆಯಾಗಿದರು.
ಅಧ್ಯಕ್ಷ ಜಗದೀಶ ಪಿ.ಪೂಜಾರಿ ಹಕ್ಕಾಡಿ ಮಾತನಾಡಿ,ಸಾರ್ವಜನಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಅರೆಹೊಳೆ ಕುದ್ರುಕೋಡು ಮಧ್ಯ ಭಾಗದಲ್ಲಿ ನಮ್ಮ ಸಂಘದ ವತಿಯಿಂದ ರೇಷನ್ ಅಂಗಡಿಯನ್ನು ತೆರೆಯುವ ಉದ್ದೇಶವನ್ನು ಹೊಂದಲಾಗಿದೆ.ಮುಂದಿನ ಐದು ವರ್ಷಗಳ ಅವಧಿಯಲ್ಲಿ ರೈತಪರ ಜನಪರ ಯೋಜನೆಗಳನ್ನು ಅನುಷ್ಠಾನ ಮಾಡಲು ಪ್ರಯತ್ನಿಸಲಾಗುವುದು ಎಂದರು.
ಉಪಾಧ್ಯಕ್ಷ ಸತೀಶ್ ಕುಮಾರ್ ಶೆಟ್ಟಿ ಮಾತನಾಡಿ,ಪ್ರಣಾಳಿಕೆಯಲ್ಲಿ ಘೋಷಿಸಿದ ಅಂಶಗಳನ್ನು ಜಾರಿಗೆ ತರುವುದರ ಮುಖೇನ ಭ್ರಷ್ಟಚಾರ ಮುಕ್ತ ರೈತಪರ ಆಡಳಿತವನ್ನು ನೀಡಲಾಗುವುದು ಎಂದರು.
ಸಂಘದ ಹಿರಿಯ ನಿರ್ದೇಶಕ ನರಸಿಂಹ ದೇವಾಡಿಗ ಶುಭಹಾರೈಸಿದರು.ನೂತನ ನಿರ್ದೇಶಕರಾಗಿ ಆಯ್ಕೆಗೊಂಡಿರುವ ಶ್ರೀನಿವಾಸ ಪೂಜಾರಿ,ಗಣೇಶ ಪೂಜಾರಿ,ಪ್ರಭಾಕರ ಎಂ. ಖಾರ್ವಿ,ಹರಿಶ್ಚಂದ್ರ ಆಚಾರ್ಯ,ಲಕ್ಷ್ಮೀ,ಶಕುಂತಲಾ,ಗಣೇಶ ಪೂಜಾರಿ,ವೀರೇಂದ್ರ ಹೆಗ್ಡೆ,ರಾಮ ಕಂತಿಹೊಂಡ,ಸುರೇಶ ಉಪಸ್ಥಿತರಿದ್ದರು.ಚುನಾವಣಾಧಿಕಾರಿ ಸುನೀಲ್ ಕುಮಾರ್ ಹಾಜರಿದ್ದರು.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ಸ್ವಾಗತಿಸಿ,ವಂದಿಸಿದರು.

Advertisement
Advertisement
Advertisement

Share
Team Kundapur Times

Recent Posts

ಬ್ಯಾಗ್ ಮರಳಿಸುವಂತೆ ಮನವಿ

ಕುಂದಾಪುರ:ಮಾರಣಕಟ್ಟೆ ಮೇಳದ ಯಕ್ಷಗಾನ ಕಲಾವಿದರಾದ ಐರ್ಬೈಲು ಆನಂದ ಶೆಟ್ಟಿ ಅವರ ಮಗಳು ಸೀಮಾ ಶೆಟ್ಟಿ ಎಂಬುವರು ಏ.೨೩ ರ ಬುಧವಾರ…

1 week ago

ಕುಂದಾಪುರ\ತೀರ್ಥಹಳ್ಳಿ:ಸ್ಕೂಟಿಗೆ ಬಸ್ ಡಿಕ್ಕಿ,ವ್ಯಕ್ತಿ ಸಾವು

ಕುಂದಾಪುರ:ಆಗುAಬೆ ಕಡೆ ಯಿಂದ ತೀರ್ಥ ಹಳ್ಳಿಗೆ ಸಾಗುತ್ತಿದ್ದ ಬಸ್ ತೀರ್ಥಹಳ್ಳಿ ಎಂಬಲ್ಲಿ ಕುಂದಾಪುರ ಕಡೆಗೆ ಸಾಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದ…

2 weeks ago

ಆಲಸ್ಯಕರ ಜೀವನ ಪದ್ಧತಿಯಿಂದ ಹಣದುಬ್ಬರ ಏರಿಕೆ, ದುಡಿಯುವ ಕೈಗಳಿಂದ ಅಭಿವೃದ್ಧಿ:ಡಾ. ಹೆಚ್.ಎಸ್.ಶೆಟ್ಟಿ

ಕುಂದಾಪುರ:ನಮ್ಮ ದೇಶದಲ್ಲಿ ಆಹಾರ ಹಣದುಬ್ಬರ ಕ್ಕೆ ಸರ್ಕಾರ ಕೈಗೊಳ್ಳುವ ಕ್ರಮಗಳ ಜೊತೆಗೆ ದುಡಿಯುವ ಕೈಗಳಿಗಿಂತ ಉಣ್ಣುವ ಕೈಗಳು ಹೆಚ್ಚಾಗಿದೆ.ಆಲಸ್ಯಕರ ಜೀವನ…

2 weeks ago

ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಕುಂದಾಪುರದಲ್ಲಿ ಶುಭಾರಂಭ

ಕುಂದಾಪುರ:ಸಿಸಿಟಿವಿ ಮತ್ತು ಮಾನಿಟರಿಂಗ್ ಕ್ಷೇತ್ರದಲ್ಲಿ ಈಗಾಗಲೇ ಬಹಳಷ್ಟು ಹೆಸರನ್ನು ಗಳಿಸಿರುವ ದಿಗಂತ ಶೆಟ್ಟಿ ಮತ್ತು ದಿಕ್ಷೀತ್ ಶೆಟ್ಟಿ ಮಾಲಿಕತ್ವದಲ್ಲಿ ಫಿಯರ್ಲೆಸ್…

3 weeks ago

ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಉದಯ ಜೋಗಿ ಹೃದಯಘಾತದಿಂದ ನಿಧನ

ಕುಂದಾಪುರ:ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ತಾಲೂಕಿನ ಕಟ್‌ಬೇಲ್ತೂರು ನಿವಾಸಿಯಾಗಿರುವ ಬೈಂದೂರಿನ ಉದಯ ಕುಮಾರ್ ಜೋಗಿ…

4 weeks ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ತಂತ್ರಜ್ಞಾನ ಮಾಹಿತಿ ಕಾರ್ಯಗಾರ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಉದಯೋನ್ಮುಖ ತಂತ್ರಜ್ಞಾನಗಳು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಡೈರೆಕ್ಟರ್ ಇಂಚಾರ್ಜ್,ಪಿಪಿಸಿ…

4 weeks ago