ಕುಂದಾಪುರ:ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅದರ ಪ್ರಧಾನ ಕಚೇರಿಯಲ್ಲಿ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಭೆ ಗುರುವಾರ ನಡೆಯಿತು. ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅದರ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಜಗದೀಶ ಪಿ.ಪೂಜಾರಿ ಹಕ್ಕಾಡಿ ಹಾಗೂ ಉಪಾಧ್ಯಕ್ಷರಾಗಿ ಸತೀಶ ಕುಮಾರ್ ಶೆಟ್ಟಿ ಆಯ್ಕೆಯಾಗಿದರು.
ಅಧ್ಯಕ್ಷ ಜಗದೀಶ ಪಿ.ಪೂಜಾರಿ ಹಕ್ಕಾಡಿ ಮಾತನಾಡಿ,ಸಾರ್ವಜನಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಅರೆಹೊಳೆ ಕುದ್ರುಕೋಡು ಮಧ್ಯ ಭಾಗದಲ್ಲಿ ನಮ್ಮ ಸಂಘದ ವತಿಯಿಂದ ರೇಷನ್ ಅಂಗಡಿಯನ್ನು ತೆರೆಯುವ ಉದ್ದೇಶವನ್ನು ಹೊಂದಲಾಗಿದೆ.ಮುಂದಿನ ಐದು ವರ್ಷಗಳ ಅವಧಿಯಲ್ಲಿ ರೈತಪರ ಜನಪರ ಯೋಜನೆಗಳನ್ನು ಅನುಷ್ಠಾನ ಮಾಡಲು ಪ್ರಯತ್ನಿಸಲಾಗುವುದು ಎಂದರು.
ಉಪಾಧ್ಯಕ್ಷ ಸತೀಶ್ ಕುಮಾರ್ ಶೆಟ್ಟಿ ಮಾತನಾಡಿ,ಪ್ರಣಾಳಿಕೆಯಲ್ಲಿ ಘೋಷಿಸಿದ ಅಂಶಗಳನ್ನು ಜಾರಿಗೆ ತರುವುದರ ಮುಖೇನ ಭ್ರಷ್ಟಚಾರ ಮುಕ್ತ ರೈತಪರ ಆಡಳಿತವನ್ನು ನೀಡಲಾಗುವುದು ಎಂದರು.
ಸಂಘದ ಹಿರಿಯ ನಿರ್ದೇಶಕ ನರಸಿಂಹ ದೇವಾಡಿಗ ಶುಭಹಾರೈಸಿದರು.ನೂತನ ನಿರ್ದೇಶಕರಾಗಿ ಆಯ್ಕೆಗೊಂಡಿರುವ ಶ್ರೀನಿವಾಸ ಪೂಜಾರಿ,ಗಣೇಶ ಪೂಜಾರಿ,ಪ್ರಭಾಕರ ಎಂ. ಖಾರ್ವಿ,ಹರಿಶ್ಚಂದ್ರ ಆಚಾರ್ಯ,ಲಕ್ಷ್ಮೀ,ಶಕುಂತಲಾ,ಗಣೇಶ ಪೂಜಾರಿ,ವೀರೇಂದ್ರ ಹೆಗ್ಡೆ,ರಾಮ ಕಂತಿಹೊಂಡ,ಸುರೇಶ ಉಪಸ್ಥಿತರಿದ್ದರು.ಚುನಾವಣಾಧಿಕಾರಿ ಸುನೀಲ್ ಕುಮಾರ್ ಹಾಜರಿದ್ದರು.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ಸ್ವಾಗತಿಸಿ,ವಂದಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…